Tuesday, July 28, 2009

ಸ್ಟೇ ಹಂಗ್ರಿ, ಸ್ಟೇ ಫೂಲಿಷ್ ಎನ್ನುತ್ತಾನೆ ಸ್ಟೀವ್ ಜಾಬ್ಸ್ !

ಮತ್ತೊಮ್ಮೆ ಪ್ರತಾಪ್ ಸಿಂಹ ರವರ ಒಂದು ಉತ್ತಮ ಅಂಕಣವನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ

ಕಾಲೇಜು ಓದದ ಜಾಬ್ಸ್ ಇಷ್ಟೆಲ್ಲಾ ಸಾಧನೆ ಮಾಡಬಹುದಾಗಿದ್ದರೆ ಮಾರ್ಕ್ಸ್ ಕಡಿಮೆ ಬಂತು, ಫೇಲಾಯಿತು ಅಂತ ನೇಣುಹಾಕಿಕೊಳ್ಳುವ ನಾವೇಕೆ ಜೀವನವನ್ನು ಸಕಾರಾತ್ಮಕವಾಗಿ ನೋಡಬಾರದು? ಸೋಲನ್ನೇಕೆ ಸವಾಲಾಗಿ ಸ್ವೀಕರಿಸಬಾರದು? ಆದರೆ ಅದಕ್ಕೆ ಕಲಿಯುವ ಹಸಿವು, ಏನಾದರೂ ಮಾಡಬೇಕೆಂಬ ಹಂಬಲ, ಯಾರನ್ನೂ ಲೆಕ್ಕಿಸದೆ ತೋಚಿದ್ದನ್ನು ಸಾಧಿಸುವ ಎದೆಗಾರಿಕೆ ಬೇಕು. ಅದಕ್ಕೇ ಜಾಬ್ಸ್ ಹೇಳಿದ್ದು Stay Hungry, Stay Foolish!


ಐಮ್ಯಾಕ್, ಐ ಪಾಡ್, ಐ ಟ್ಯೂನ್ಸ್, ಐ ವರ್ಕ್, ಐ ಲೈಫ್, ಐ ಫೋನ್. ಇವುಗಳಲ್ಲಷ್ಟೇ ಅಲ್ಲ, ಆತನ ಬಗ್ಗೆ ಬರೆಯಲಾಗಿರುವ ಅನಧಿಕೃತ ಆತ್ಮಚರಿತ್ರೆಯಾದ ``ಐಕಾನ್"ನಲ್ಲೂ ``ಐ" ಇದೆ! ಅವನನ್ನು ಟೀಕಾಕಾರರು ``Ego Maniac" ಎಂದು ಜರಿದರೂ ಆತನಲ್ಲಿರುವುದು ``ನಾನು" ಎಂಬ ``ಅಹಂ" ಅಲ್ಲ, ನಾನೇನಾದರೂ ವಿಭಿನ್ನವಾದುದನ್ನು ಮಾಡಬೇಕೆಂಬ ಹಂಬಲ. ಇಂತಹ ಹಂಬಲವನ್ನು ಕೆಲವರು ಆಡಿಕೊಂಡಿದ್ದೂ ಇದೆ. ಸ್ಟೀವ್ ಜಾಬ್ಸ್ ಯಾವುದಕ್ಕೂ ತಲೆಕೆಡಿಸಿಕೊಳ್ಳುವ ವ್ಯಕ್ತಿಯಲ್ಲ, ಆದರೆ ಬೇರೆಯವರ ತಲೆಕೆಡಿಸಿ ಬಿಡುತ್ತಾನೆ. ಅದಕ್ಕಾಗಿಯೇ ``Reality Distortion" ಎಂದು ದೂರುತ್ತಾರೆ. ಆದರೇನಂತೆ ಹುಚ್ಚುಭ್ರಮೆ ಎನಿಸುವುದನ್ನೂ ವಾಸ್ತವಕ್ಕಿಳಿಸುವ ಆತನನ್ನು ನಿರ್ಲಕ್ಷಿಸಲು ಜಗತ್ತಿನಲ್ಲಿ ಯಾರಿಗೂ ಸಾಧ್ಯವಿಲ್ಲ.

"Think Different''The people who are crazy enough to think they can change the world are the ones who do!!

ಈ ರೀತಿ ಸಾಗುವ ``ಆಪಲ್" ಕಂಪನಿಯ ಜಾಹೀರಾತು ಆತನ ಮನೋಬಲದ ಪ್ರತಿಬಿಂಬವೇ ಆಗಿದೆ. 1997ರಲ್ಲಿ ಆತ ರೂಪಿಸಿದ `ಐ-ಮ್ಯಾಕ್' ಕಂಪ್ಯೂಟರ್ ಜಗತ್ತಿನ ಅತ್ಯಂತ ಹಗುರವಾದ ಪಿಸಿ ಎಂಬ ಹೆಗ್ಗಳಿಕೆಗೆ ಪಾತ್ರವಾದರೆ, 2001ರಲ್ಲಿ ಹೊರತಂದ ``ಐ-ಪಾಡ್" ಸಂಗೀತವನ್ನು ಆಲಿಸುವ ಪ್ರಕ್ರಿಯೆಗೇ ಹೊಸ ಅರ್ಥ ನೀಡಿತು. ಇದುವರೆಗೂ 11 ಕೋಟಿ ಐ-ಪಾಡ್‌ಗಳು ಖರ್ಚಾಗಿವೆ. ಅದರ ಬೆನ್ನಲ್ಲೇ ಪ್ರಾರಂಭವಾದ ``ಐ-ಟ್ಯೂನ್ಸ್ ಸ್ಟೋರ್"ಗಳಿಂದ 400 ಕೋಟಿ ಹಾಡುಗಳು ಖರೀದಿಯಾಗಿವೆ!! 2007ರಲ್ಲಿ ದೂರಸಂಪರ್ಕ ಕ್ಷೇತ್ರಕ್ಕೂ ಕಾಲಿರಿಸಿದ ಆತ ಹೊರತಂದ ``ಐ-ಫೋನ್"(ಮೊಬೈಲ್) ಖರೀದಿಸಲು ಅಮೆರಿಕನ್ನರು ಹಿಂದಿನ ದಿನದಿಂದಲೇ ಸಾಲುಗಟ್ಟಿ ನಿಂತಿದ್ದರು. ಅಂದು 599 ಡಾಲರ್‌ಗೆ ನೀಡಿದ್ದ ಫೋನ್‌ಗಳನ್ನು ಮೊನ್ನೆ ಜೂನ್ 10ರಂದು 199 ಡಾಲರ್‌ಗೆ ಮಾರುಕಟ್ಟೆಗೆ ಬಿಟ್ಟಿದ್ದಾನೆ. ಭಾರತದಲ್ಲೂ ಅತ್ಯಂತ ಕಾತರದಿಂದ ಕಾಯುತ್ತಿರುವ ಮೊಬೈಲ್ ಎಂದರೆ ಐ-ಫೋನ್. ಬರುವ ಆಗಸ್ಟ್‌ನಲ್ಲಿ ಐ-ಫೋನ್ ಭಾರತದಲ್ಲೂ ಬಿಡುಗಡೆಯಾಗಲಿದ್ದು ನಮ್ಮಲ್ಲಿನ ಮುಂಚೂಣಿ ಮೊಬೈಲ್ ಕಂಪನಿಗಳಾದ ನೋಕಿಯಾ, ಸೋನಿ ಎರಿಕ್‌ಸನ್ ಹಾಗೂ ಮೋಟೊರೊಲಾ ಕಂಪನಿಗಳು ಮಳೆಗಾಲದಲ್ಲೂ ಬೆವರಲು ಆರಂಭಿಸಿವೆ!

ಇದು ಉತ್ಪ್ರೇಕ್ಷೆಯ ಮಾತಲ್ಲ. ಪ್ರಾರಂಭದಲ್ಲಿ ದುಬಾರಿ ಎನಿಸಿದ್ದ ಐ-ಪೋನ್‌ನ ಬೆಲೆಯನ್ನು ಮೂರನೇ ಎರಡು ಭಾಗದಷ್ಟು ಕಡಿತಗೊಳಿಸಿರುವುದರಿಂದ ಸಾಮಾನ್ಯ ಜನರೂ ಖರೀದಿಸಬಹುದಾಗಿದೆ. ``3ಜಿ ನೆಟ್‌ವರ್ಕ್"ನಿಂದಾಗಿ ಇಂಟರ್‌ನೆಟ್ ಅನ್ನು ಜಾಲಾಡುವುದು ತೀರಾ ಸರಳ ಹಾಗೂ ಸುಲಭವಾಗಲಿದೆ. ಐ-ಫೋನ್‌ನಲ್ಲೇ ಐ-ಪಾಡ್ ಕೂಡ ಇರುವುದರಿಂದ ಸಂಗೀತವನ್ನು ಉತ್ಕೃಷ್ಟ ಸ್ತರದಲ್ಲಿ ಕೇಳಬಹುದು. ಇಂತಹ ಸಾಧನೆಯನ್ನು ಗುರುತಿಸಿರುವ ಖ್ಯಾತ ``ಬ್ಲೆಂಡರ್" ಮ್ಯಾಗಝಿನ್, ಜಾಬ್ಸ್ ಅವರನ್ನು ಪ್ರಪಂಚದ ಅತ್ಯಂತ ಪ್ರಭಾವಿ ವ್ಯಕ್ತಿ ಎಂದಿದೆ. ಎಪ್ಪತ್ತೈದು ರಾಷ್ಟ್ರಗಳಲ್ಲಿ ಸಮೀಕ್ಷೆ ನಡೆಸಿ ಅಂತಹ ಬಿರುದು ನೀಡಿದೆ. 'The undisputed king of the online music revolution', 'Technology trendsetter' ಎಂದು ಮ್ಯಾಗಝಿನ್‌ನ ಸಂಪಾದಕ ಕ್ರೇಗ್ ಮಾರ್ಕ್ಸ್ ಶ್ಲಾಘಿಸಿದ್ದಾರೆ. ``MySpace"ನ ಸ್ಥಾಪಕ ಟಾಮ್ ಆಂಡರ್‌ಸನ್, ``YouTube" ಸೃಷ್ಟಿಕರ್ತರಾದ ಚಾಡ್ ಹರ್ಲೆ ಮತ್ತು ಸ್ಟೀವ್ ಚೆನ್ ಅವರು ನಂತರದ ಸ್ಥಾನದಲ್ಲಿದ್ದಾರೆ ಎಂದರೆ ಜಾಬ್ಸ್ ಎಂತಹ ಸಾಧಕನಿರಬಹುದು?!

ಸತ್ತೆನೆಂದೆನಬೇಡ, ಸೋತೆನೆಂದೆನಬೇಡ
ಬತ್ತಿತೆನ್ನೊಳು ಸತ್ವದೂಟೆ
ಎನಬೇಡಮೃತ್ಯುವೆನ್ನುವುದೊಂದು ತೆರೆ ಇಳಿತ..!
ತೆರೆ ಏರು, ಮತ್ತೆ ತೋರ್ಪುದು ನಾಳೆ ಮಂಕುತಿಮ್ಮ...

ಇಂದು ಸ್ಟೀವ್ ಜಾಬ್ಸ್ ಹೆಸರು ಕೇಳಿದರೆ ಜಗತ್ತೇ ರೋಮಾಂಚನಗೊಳ್ಳುತ್ತಿರಬಹುದು. ಆದರೆ ಆತನ ಬದುಕಿನ ಪುಟಗಳನ್ನು ತಿರುವುತ್ತಾ ಹೋದರೆ ಈ ಮೇಲಿನ ಡಿವಿಜಿ ಕವನ ನೆನಪಾಗುತ್ತದೆ. ಅವನ ಹುಟ್ಟೇ ಒಂದು ದುರಂತ. ಅವಿವಾಹಿತಳಾಗಿದ್ದ ಅಮ್ಮ ಕಾಲೇಜಿಗೆ ಹೋಗುತ್ತಿರುವಾಗಲೇ ಗರ್ಭ ಧರಿಸಿದ್ದಳು. ಹಾಗಾಗಿ ಮಗು ಹೊಟ್ಟೆಯಲ್ಲಿರುವಾಗಲೇ ದತ್ತು ನೀಡುವ ನಿರ್ಧಾರಕ್ಕೆ ಬಂದಳು. ಆದರೆ ಆಕೆಯದ್ದೊಂದು ಪೂರ್ವ ಷರತ್ತಿತ್ತು. ಮಗುವನ್ನು ದತ್ತು ಸ್ವೀಕರಿಸುವ ಪೋಷಕರಿಬ್ಬರೂ ಕಾಲೇಜು ಪದವೀಧರರಾಗಿರಬೇಕು. ವಿದ್ಯಾವಂತ ಪೋಷಕರು ದೊರೆತರೆ ತನ್ನ ಮಗುವನ್ನೂ ಕಾಲೇಜು ವ್ಯಾಸಂಗ ಮಾಡಿಸುತ್ತಾರೆ ಎಂಬ ನಂಬಿಕೆ ಆಕೆಯದ್ದು. ಪದವೀಧರ ದಂಪತಿಯೊಬ್ಬರು ಮಗುವನ್ನು ದತ್ತು ಸ್ವೀಕರಿಸಲು ಮುಂದೆ ಬಂದರು. ಆದರೆ ಅವರಿಗೆ ಬೇಕಿದ್ದು ಹೆಣ್ಣು ಮಗು. ಹುಟ್ಟಿದ್ದು ಗಂಡುಮಗು. ಹುಟ್ಟಿದ ಕ್ಷಣದಲ್ಲೇ ಮಗು ಅನಾಥವಾಯಿತು. ಆದರೇನಂತೆ ಜಸ್ಟಿನ್ ಹಾಗೂ ಕ್ಲಾರಾ ಜಾಬ್ಸ್ ಎಂಬ ಕ್ಯಾಲಿಫೋರ್ನಿಯಾದ ದಂಪತಿಯೊಬ್ಬರು ಮಗುವನ್ನು ದತ್ತು ತೆಗೆದುಕೊಳ್ಳಲು ಮುಂದಾದರು. ಆದರೆ ಅವರು ಪದವೀಧರರಾಗಿರಲಿಲ್ಲ. ಹಾಗಾಗಿ ದತ್ತು ನೀಡಲು ಒಪ್ಪಲಿಲ್ಲ. ಕೊನೆಗೂ ಹರಸಾಹಸ ಮಾಡಿ, ಮನವೊಲಿಸಿದ ಜಾಬ್ಸ್ ದಂಪತಿಗಳು ಮಗುವನ್ನು ದತ್ತು ತೆಗೆದುಕೊಂಡು ಸ್ಟೀವನ್ ಪೌಲ್ ಜಾಬ್ಸ್ ಎಂಬ ಹೆಸರಿಟ್ಟರು. ಹದಿನೇಳನೇ ವರ್ಷಕ್ಕೆ ಕಾಲೇಜು ಮೆಟ್ಟಿಲು ತುಳಿದ ಸ್ಟೀವ್ ಜಾಬ್ಸ್‌ಗೆ ಓದು ರುಚಿಸಲಿಲ್ಲ. ಕಾಲೇಜನ್ನು ಅರ್ಧಕ್ಕೇ ಬಿಟ್ಟ ಆತನಿಗೆ ಒಪ್ಪೊತ್ತಿನ ಊಟಕ್ಕೂ ಕುತ್ತು ಬಂತು. ಆದರೇನಂತೆ ಭಾನುವಾರ ಮಾತ್ರ `ಫುಲ್ ಮೀಲ್ಸ್' ದೊರೆಯುತ್ತಿತ್ತು! ಕಾಲೇಜಿನಿಂದ 7 ಕಿ.ಮೀ. ದೂರದಲ್ಲಿದ್ದ ಹರೇ ಕೃಷ್ಣ ದೇವಾಲಯದಲ್ಲಿ ಪ್ರತಿ ಭಾನುವಾರ ಉಚಿತ ಊಟ ನೀಡಲಾಗುತ್ತಿತ್ತು. ಆ ಊಟಕ್ಕಾಗಿ 7 ಕಿ.ಮೀ. ನಡೆದು ಹೋಗುತ್ತಿದ್ದ. ಆತ ಹೋಗಿದ್ದು ಹೊಟ್ಟೆತುಂಬಿಸುವ ಊಟಕ್ಕಾದರೂ ಊಟಕ್ಕಿಂತ ಆಧ್ಯಾತ್ಮ ರುಚಿಸತೊಡಗಿತು. ಆಧ್ಯಾತ್ಮವನ್ನು ಅರಸಿಕೊಂಡು ಭಾರತಕ್ಕೂ ಭೇಟಿ ನೀಡಿದ. ಭಾರತದಿಂದ ವಾಪಸ್ಸಾದ ಜಾಬ್ಸ್, ಅಟಾರಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡ. ಸ್ಟೀವ್ ವೋಝ್ನಿಯಾಕ್ ಪರಿಚಯವಾಗಿದ್ದು ಅಲ್ಲೇ. ಆತ ಮಹಾಬುದ್ಧಿವಂತ. ತಾಂತ್ರಿಕ ವಿಷಯಗಳಲ್ಲಿ ಪರಿಣತ. ಇತ್ತ ಜಾಬ್ಸ್ ಕೂಡ ತಾಂತ್ರಿಕ ವಿಷಯದಲ್ಲಿ ಉತ್ತಮ ಜ್ಞಾನ ಹೊಂದಿದ್ದರೂ ಮಾರ್ಕೆಟಿಂಗ್‌ನಲ್ಲಿ ಪಂಟ.ಇವರಿಬ್ಬರೂ ಸೇರಿ 1976, ಏಪ್ರಿಲ್ 1ರಂದು ಆರಂಭಿಸಿದ್ದೇ ``ಆಪಲ್ ಕಂಪ್ಯೂಟರ್"!

ಆಗ ಜಾಬ್ಸ್‌ಗೆ ಕೇವಲ 21 ವರ್ಷ. ಆಪಲ್ ಪ್ರಾರಂಭವಾಗಿದ್ದು ಜಾಬ್ಸ್‌ನ ಮನೆಯ ಗ್ಯಾರೇಜ್‌ನಲ್ಲಿ. ಆದರೇನಂತೆ ಯಶಸ್ಸು ಅರಸಿಕೊಂಡು ಬಂತು. ಆಪಲ್ ರೂಪಿಸಿದ ಆಪಲ್-1, ಆಪಲ್-2 ಕಂಪ್ಯೂಟರ್‌ಗಳು ಕಂಪನಿಗೆ ಒಳ್ಳೆಯ ಹೆಸರು, ಹಣ ತಂದುಕೊಟ್ಟವು. ಈ ಮಧ್ಯೆ 1981ರಲ್ಲಿ ನಡೆದ ವಿಮಾನ ದುರ್ಘಟನೆಯೊಂದರಲ್ಲಿ ವೋಝ್ನಿಯಾಕ್ ಗಾಯಗೊಂಡರು. ಹಾಗಾಗಿ ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ(ಸಿಇಓ) ಜಾಬ್ಸ್ ಜವಾಬ್ದಾರಿ ವಹಿಸಿಕೊಂಡರು. ಹಾಗೆ ಅಧಿಕಾರ ವಹಿಸಿಕೊಂಡ ಜಾಬ್ಸ್‌ಗೆ ಕಂಪನಿಯನ್ನು ಇನ್ನೂ ವಿಸ್ತಾರಗೊಳಿಸಲು, ಯಶಸ್ಸಿನತ್ತ ಕೊಂಡೊಯ್ಯಲು ಸೂಕ್ತ ವ್ಯಕ್ತಿಯೊಬ್ಬರ ಸಾಥ್ ಬೇಕೆನಿಸತೊಡಗಿತು. ಆಗ ಕಣ್ಣಿಗೆ ಕಂಡಿದ್ದೇ ಪೆಪ್ಸಿ ಕಂಪನಿಯ ಸಿಇಓ ಜಾನ್ ಸ್ಕೂಲಿ. ಆದರೆ ಪೆಪ್ಸಿಯಂತಹ ಕಂಪನಿಯನ್ನು ಬಿಟ್ಟು ಯಾರು ತಾನೇ ಆಪಲ್‌ನಂತಹ ಅದಾಗತಾನೇ ಹೊರಹೊಮ್ಮುತ್ತಿರುವ ಕಂಪನಿಗೆ ಬರುತ್ತಾರೆ? ಹಾಗಂತ ಜಾಬ್ಸ್ ಸುಮ್ಮನಾಗಲಿಲ್ಲ. ಸ್ಕೂಲಿಯನ್ನು ಮನವೊಲಿಸಲು ಮುಂದಾದ. Do you want to spend the rest of your life selling sugared water, or do you want a chance to change the world? ಎಂಬ ಜಾಬ್ಸ್‌ನ ಮಾತುಗಳು ಸ್ಕೂಲಿಯನ್ನು ಯಾವ ರೀತಿ ಪ್ರಚೋದಿಸಿದವೆಂದರೆ ಪೆಪ್ಸಿ ಕಂಪನಿ ಬಿಟ್ಟ ಸ್ಕೂಲಿ 1983ರಲ್ಲಿ ಆಪಲ್ ಸೇರಿಬಿಟ್ಟ. 1984ರಲ್ಲಿ ಆಪಲ್ ಕಂಪನಿ ಅತ್ಯಂತ ಆಕರ್ಷಕ ಟಿವಿ ಜಾಹೀರಾತೊಂದನ್ನು ಹೊರತಂದಿತು. ಇದಾಗಿ ಎರಡು ದಿನಗಳಲ್ಲೇ ಅಂದರೆ 1984, ಜನವರಿ 24ರಂದು ನಡೆದ ಆಪಲ್ ಕಂಪನಿಯ ಷೇರುದಾರರ ಸಭೆಯಲ್ಲಿ ಜಾಬ್ಸ್ `ಮ್ಯಾಕಿಂತೋಷ್' (ಪಿಸಿ) ಕಂಪ್ಯೂಟರನ್ನು ಅನಾವರಣಗೊಳಿಸಿದರು. ನಾವು ಬಳಸುವ `ಮೌಸ್' ಮೊದಲಿಗೆ ಬಳಕೆಗೆ ಬಂದಿದ್ದೇ ಮ್ಯಾಕಿಂತೋಷ್‌ನೊಂದಿಗೆ! ಇಂತಹ ನವೀನ ಸಂಶೋಧನೆಯಿಂದಾಗಿ ಆಪಲ್ 2 ಶತಕೋಟಿ ಡಾಲರ್ ಮೌಲ್ಯದ ಕಂಪನಿಯಾಗಿ ಹೊರಹೊಮ್ಮಿತು. ಈ ನಡುವೆ ಜಾಬ್ಸ್ ಮತ್ತು ಸ್ಕೂಲಿ ನಡುವೆ ಭಿನ್ನಾಭಿಪ್ರಾಯ ಕಾಣಿಸತೊಡಗಿತು. ಅದು ಯಾವ ಮಟ್ಟಕ್ಕೆ ಹೋಯಿತೆಂದರೆ ಆಡಳಿತ ಮಂಡಳಿಯ ಸದಸ್ಯರು ಸ್ಕೂಲಿ ಪರ ನಿಂತ ಕಾರಣ ಕಂಪನಿಯ ಸ್ಥಾಪಕನಾದ ಜಾಬ್ಸ್‌ನನ್ನೇ ಹೊರಹಾಕಲಾಯಿತು!

ಅವನ ಸ್ಥಾನದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಸಿಟ್ಟಿಗೆದ್ದು ಯಾರನ್ನಾದರೂ ಕೊಲ್ಲುತ್ತಿದ್ದರು, ಇಲ್ಲವೇ ಹುಚ್ಚರಾಗುತ್ತಿದ್ದರು. ಆದರೆ ಅಂತಹ ಆಘಾತದಿಂದಲೂ ಸಾವರಿಸಿಕೊಂಡ ಜಾಬ್ಸ್ ``ನೆಕ್ಸ್ಟ್"ಎಂಬ ಕಂಪನಿ ಪ್ರಾರಂಭಿಸಿದ. ಅಲ್ಲದೆ ಜಾರ್ಜ್ ಲುಕಾಸ್ ಎಂಬುವವರಿಂದ ``ಪಿಕ್ಸರ್" ಎಂಬ ಡಿಜಿಟಲ್ ಗ್ರಾಫಿಕ್ಸ್ ಕಂಪನಿಯನ್ನೂ ಖರೀದಿ ಮಾಡಿದ. ಆ ಕಂಪನಿ Toy Story ಎಂಬ ಆನಿಮೇಷನ್ ಚಿತ್ರವನ್ನು ರೂಪಿಸಿತು. ಅದು ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಯಶಸ್ಸು ಕಂಡಿತು. ಕಂಪನಿಗೂ ಒಳ್ಳೆಯ ಹೆಸರು ಬಂತು. ಇದನ್ನು ಗಮನಿಸಿದ ವಿಶ್ವವಿಖ್ಯಾತ `ಡಿಸ್ನಿ' ಕಂಪನಿ 7.4 ಶತಕೋಟಿ ಡಾಲರ್ ಕೊಟ್ಟು `ಪಿಕ್ಸರ್' ಅನ್ನೇ ಖರೀದಿ ಮಾಡಿತು. ಸ್ಟೀವ್ ಜಾಬ್ಸ್‌ನ ಗ್ರಹಗತಿಯೇ ಬದಲಾಯಿತು. ಇತ್ತ ಜಾಬ್ಸ್ ಅನುಪಸ್ಥಿತಿಯಲ್ಲಿ ಐಬಿಎಂ, ಮೈಕ್ರೊಸಾಫ್ಟ್‌ಗಳ ಜತೆ ಸ್ಪರ್ಧೆ ಮಾಡಲಾಗದೆ, ಹೊಸ ಹೊಸ `ಆಪರೇಟಿಂಗ್ ಸಿಸ್ಟಮ್'ಗಳನ್ನು ಹೊರತರಲಾಗದೆ ಆಪಲ್ ಕಂಪನಿ ನಷ್ಟ ಅನುಭವಿಸಲಾರಂಭಿಸಿತು. ಮತ್ತೆ ಆಪಲ್ ತಲೆಯೆತ್ತಬೇಕಾದರೆ ಜಾಬ್ಸ್‌ನ `ನೆಕ್ಸ್ಟ್' ಕಂಪನಿಯ ಜತೆ ಕೈಜೋಡಿಸುವುದು ಮಾತ್ರವಲ್ಲ, ಜಾಬ್ಸ್‌ನ ನಾಯಕತ್ವದ ಅಗತ್ಯವೂ ಅನಿವಾರ್ಯವಾಯಿತು!! 1997ರಲ್ಲಿ ನೆಕ್ಸ್ಟ್ ಕಂಪನಿಯನ್ನು ಖರೀದಿ ಮಾಡಿದ ಆಪಲ್, ಜಾಬ್ಸ್ ಅವರನ್ನೇ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನಾಗಿ ನೇಮಕ ಮಾಡಿಕೊಂಡಿತು!!

ಆಪಲ್‌ಗೆ ಹಿಂದಿರುಗಿದ ಜಾಬ್ಸ್ "Mac OS X" ಹೊಸ ಆಪರೇಟಿಂಗ್ ಸಿಸ್ಟಮ್ ಅನ್ನು ಹೊರತರುವ ಮೂಲಕ ಕಂಪನಿಗೆ ಮತ್ತೆ ಜೀವ ತುಂಬಲಾರಂಭಿಸಿದ. ಆನಂತರ ಐಮ್ಯಾಕ್ ಬಂತು, ಐಪಾಡ್, ಐಟ್ಯೂನ್‌ನೊಂದಿಗೆ ಸಂಗೀತ ಕ್ಷೇತ್ರಕ್ಕೂ ಕಾಲಿರಿಸಿದ. ಅಲ್ಲದೆ ಈಚೆಗೆ ಆತ ಹೊರತಂದ ಐಫೋನ್ ವರ್ಷ ತುಂಬುವುದಕ್ಕೂ ಮೊದಲೇ ಜಗತ್ತಿನ ಮೆಚ್ಚುಗೆ ಗಳಿಸಿದೆ, ಮೊಬೈಲ್ ಕ್ಷೇತ್ರಕ್ಕೆ ಹೊಸ ಭಾಷ್ಯ ಬರೆದಿದೆ. ಇವತ್ತು ಜಾಬ್ಸ್ ಮಾಡುವ ಭಾಷಣಗಳು ``Stevenotes" ಎಂದೇ ಪ್ರಸಿದ್ಧಿಯಾಗುತ್ತಿವೆ. ಆತ ಕಾಲೇಜು ಓದದಿದ್ದರೇನಂತೆ, ಜಗತ್ತಿನ ಅತ್ಯುತ್ತಮ ಕಾಲೇಜುಗಳು ಜಾಬ್ಸ್‌ನನ್ನು ಉಪನ್ಯಾಸಕ್ಕಾಗಿ ಕರೆಯುತ್ತಿವೆ. ಅಂತಹ ಕಾಲೇಜುಗಳಲ್ಲಿ ವಿಶ್ವವಿಖ್ಯಾತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವೂ ಒಂದು. 2005, ಜೂನ್ 12ರಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲು ನಿಂತ ಜಾಬ್ಸ್, ``ಜಗತ್ತಿನ ಅತ್ಯುತ್ತಮ ವಿವಿಗಳಲ್ಲಿ ಒಂದಾದ ಸ್ಟ್ಯಾನ್‌ಫೋರ್ಡ್‌ನ ವಿದ್ಯಾರ್ಥಿಗಳಾದ ನಿಮ್ಮನ್ನುದ್ದೇಶಿಸಿ ಮಾತನಾಡುವ ಅವಕಾಶ ದೊರೆತಿರುವುದು ನನಗೆ ಸಂದ ದೊಡ್ಡ ಗೌರವ. ಆದರೆ ನಾನೆಂದೂ ಕಾಲೇಜಿನಿಂದ ಪದವಿ ಪಡೆದು ಹೊರಹೋದವನಲ್ಲ. ಇಂದು ನಾನು ನಿಮಗೆ ನನ್ನ ಜೀವನದ ಮೂರು ಕಥೆಗಳನ್ನು ಹೇಳಲು ಬಯಸುತ್ತೇನೆ. ಅವುಗಳಲ್ಲಿ ವಿಶೇಷವೇನಿಲ್ಲ. ಬರೀ ಮೂರು ಕಥೆಗಳಷ್ಟೆ...."

ಅಂದು ಆತ ಹೇಳಿದ ಮೊದಲ ಕಥೆ ಆತನ ದತ್ತು ಸ್ವೀಕಾರ ಹಾಗೂ ಕಾಲೇಜಿಗೆ ತಿಲಾಂಜಲಿ ಇತ್ತ ಘಟನೆಯ ಬಗ್ಗೆ. ಎರಡನೆಯದ್ದು ತಾನೇ ಪ್ರಾರಂಭಿಸಿದ ಕಂಪನಿಯಿಂದ ತನ್ನನ್ನೇ ಕಿತ್ತೊಗೆದಿದ್ದು ಹಾಗೂ ಅದನ್ನು ಸವಾಲಿನಂತೆ ತೆಗೆದುಕೊಂಡು ಪರಿಸ್ಥಿತಿಯನ್ನು ಎದುರಿಸಿದ ಘಟನೆಗೆ ಸಂಬಂಧಿಸಿದ್ದು. ಮೂರನೆಯದ್ದನ್ನು ಅವರ ಮಾತಿನಲ್ಲೇ ಕೇಳೋಣ.

``ಇದೇ ನಿನ್ನ ಕೊನೆಯ ದಿನ ಎಂಬಂತೆ ನೀನು ಪ್ರತಿದಿನವನ್ನೂ ಕಳೆದರೆ ಒಂದಲ್ಲ ಒಂದು ದಿನ ಅದು ನಿಜವಾಗುತ್ತದೆ ಎಂಬ ಯಾರೋ ಹೇಳಿದ್ದ ಮಾತು 17 ವರ್ಷದವನಾಗಿದ್ದ ನನ್ನ ಮೇಲೆ ತುಂಬಾ ಪ್ರಭಾವ ಬೀರಿತ್ತು. ಆನಂತರ ಪ್ರತಿದಿನವೂ ಬೆಳಗ್ಗೆ ಎದ್ದು ಕನ್ನಡಿಯ ಮುಂದೆ ನಿಂತು, ಇವತ್ತೇ ನನ್ನ ಜೀವಮಾನದ ಕಡೆಯ ದಿನ ಎಂದಾಗಿದ್ದರೆ ಇಂದು ಮಾಡಲು ಹೊರಟಿರುವ ಕೆಲಸವನ್ನು ಮಾಡುತ್ತಿದ್ದೆನೇ? ಎಂದು ನನ್ನನ್ನು ನಾನೇ ಕೇಳಿಕೊಳ್ಳುತ್ತಿದ್ದೆ. ಅಷ್ಟಕ್ಕೂ ಸಾವು ಎದುರಿಗೆ ನಿಂತಿದ್ದಾಗ ಎಲ್ಲವೂ ನಗಣ್ಯವಾಗಿ ಬಿಡುತ್ತದೆ. ಒಂದು ವರ್ಷದ ಹಿಂದೆ ನನಗೆ ಕ್ಯಾನ್ಸರ್ ಬಂದಿರುವುದು ಪತ್ತೆಯಾಯಿತು. ಬೆಳಗ್ಗೆ 7.30ಕ್ಕೆ ವೈದ್ಯಕೀಯ ತಪಾಸಣೆ ನಡೆಯಿತು. ಅದರಲ್ಲಿ ಕ್ಯಾನ್ಸರ್ ಗಡ್ಡೆ ಇರುವುದು ಸ್ಪಷ್ಟವಾಗಿ ಗೋಚರಿಸಿತು. ಅದು ವಾಸಿಯಾಗದ ವಿಧದ ಕ್ಯಾನ್ಸರ್ ಆಗಿತ್ತು. ಆರು ತಿಂಗಳಿಗಿಂತ ಹೆಚ್ಚು ಕಾಲ ನಾನು ಬದುಕುವುದಿಲ್ಲ ಎಂದು ವೈದ್ಯರು ಹೇಳಿಯೂ ಬಿಟ್ಟರು. ಮನೆಗೆ ಹೋಗಿ ಬಾಕಿ ಉಳಿದಿರುವ ಕೆಲಸಗಳನ್ನು ಮುಗಿಸಿಬಿಡು ಎಂದ ಸಲಹೆ ನೀಡಿದರು. ವೈದ್ಯರು ನಮ್ಮನ್ನು ಸಾವಿಗೆ ಅಣಿಗೊಳಿಸುವುದೇ ಹಾಗೆ. ಅಂದರೆ ನಿನ್ನ ಹೆಂಡತಿ, ಮಕ್ಕಳ ಜತೆ ಏನೇನು ಮಾತನಾಡಿಕೊಳ್ಳಬೇಕು ಅದನ್ನೆಲ್ಲ ಮಾತಾಡಿ ಮುಗಿಸು, ಅವರ ಭವಿಷ್ಯಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡು, ನೀನು ಸತ್ತ ನಂತರವೂ ಅವರು ಖುಷಿಯಿಂದ ಇರಲು ಬೇಕಾದ ಮುಂಜಾಗ್ರತೆಗಳನ್ನು ತೆಗೆದುಕೋ ಅಂತ. ಆದರೆ ಕ್ಯಾನ್ಸರ್ ಬಂದಿರುವ ವಿಚಾರ ನನ್ನನ್ನು ಸಂಪೂರ್ಣವಾಗಿ ಆವರಿಸಿತ್ತು. ಅದೇ ದಿನ ಸಂಜೆ ವೇಳೆಗೆ ಬಯಾಪ್ಸಿ ಮಾಡಿದರು. ಸೂಜಿ ಹಾಕಿ ಕ್ಯಾನ್ಸರ್ ಗಡ್ಡೆಯ ಕೆಲವು ಸೆಲ್‌ಗಳನ್ನು ಹೊರತೆಗೆದು, ಪರೀಕ್ಷಿಸಿದರು. ಅದೃಷ್ಟವಶಾತ್, ಅದು ಶಸ್ತ್ರಚಿಕಿತ್ಸೆಯ ಮೂಲಕ ಗುಣಪಡಿಸಬಹುದಾದ ಕ್ಯಾನ್ಸರ್ ಆಗಿತ್ತು! ಅಂದು ನಾನು ಸಾವನ್ನು ಮುಟ್ಟಿನೋಡಿ ಬಂದಿದ್ದೆ!

ಅಂತಹ ಅನುಭವದ ಬಲದಿಂದ ಹೇಳುವುದಾದರೆ ಸಾವು ಕೂಡ ಒಂದು ಉಪಯುಕ್ತ ಅನುಭವ. ಆದರೆ ಅದು ಬುದ್ಧಿಗೆ ಮಾತ್ರ ನಿಲುಕುವಂಥದ್ದು. ಅಷ್ಟಕ್ಕೂ ಯಾರೂ ಸಾಯಲು ಬಯಸುವುದಿಲ್ಲ. ಸ್ವರ್ಗಕ್ಕೆ ಹೋಗಬೇಕು ಎಂದು ಬಯಸುವವರೂ ಸಾಯಲು ಇಷ್ಟಪಡುವುದಿಲ್ಲ. ಆದರೆ ನಾವೆಲ್ಲ ಸೇರುವ ಅಂತಿಮ ತಾಣ ಸಾವು. ಇದುವರೆಗೂ ಸಾವಿನಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಾಗಿಲ್ಲ. ಅದು ಹಾಗೆಯೇ ಇರಬೇಕು. Death is very likely the single best invention of Life! ಜೀವನದಲ್ಲಿ ಸಾವು ಬದಲಾವಣೆಯ ಏಜೆಂಟ್. ಹಳಬರನ್ನು ಜಾಗ ಖಾಲಿ ಮಾಡಿಸಿ, ಹೊಸಬರಿಗೆ ಅವಕಾಶ ಮಾಡಿಕೊಡುತ್ತದೆ. ಇವತ್ತು ನೀವು ಹೊಸಬರು. ಆದರೆ ಮುಂದೊಂದು ದಿನ ನೀವು ಕೂಡ ಹಳಬರಾಗಿ ಜಾಗ ಖಾಲಿ ಮಾಡಬೇಕಾಗುತ್ತದೆ! ನಿಮಗಿರುವ ಅವಧಿ ತೀರಾ ಕ್ಷಣಿಕ. ಬೇರೆಯವರಿಗಾಗಿ ನಿಮ್ಮ ಬದುಕನ್ನು ಸವೆಸಿ ಆ ಸಮಯವನ್ನು ವ್ಯರ್ಥ ಮಾಡಬೇಡಿ. ಯಾವುದೋ ಸಿದ್ಧಾಂತಕ್ಕೆ ಸಿಕ್ಕಿಬಿದ್ದು ಬೇರೊಬ್ಬರ ಚಿಂತನೆಗಳ ಬಗ್ಗೆ ಚಿಂತೆ ಮಾಡುತ್ತಾ ಚಿತೆ ಏರಬೇಡಿ. ಇತರರ ಗದ್ದಲ ನಿಮ್ಮ ಅಂತರಾತ್ಮದ ಧ್ವನಿಯನ್ನು ಹೊಸಕಿಹಾಕಲು ಬಿಡಬೇಡಿ. ನಿಮ್ಮ ಮನಸ್ಸು ಮತ್ತು ಅಂತಃಧ್ವನಿಯನ್ನು ಹಿಂಬಾಲಿಸಿ. ನೀವೇನಾಗಬೇಕು ಎಂಬುದು ನಿಮ್ಮ ಅಂತರಾತ್ಮಕ್ಕೆ ಚೆನ್ನಾಗಿ ಗೊತ್ತಿರುತ್ತದೆ. ನಾನು ಪ್ರಾಪ್ತವಯಸ್ಕನಾಗಿದ್ದಾಗ "The Whole Earth Catalog'' ಎಂಬ ಅದ್ಭುತ ಪುಸ್ತಕವೊಂದಿತ್ತು. ನನ್ನ ತಲೆಮಾರಿನವರ ಬೈಬಲ್ ಅದಾಗಿತ್ತು. ಆದರೆ ಕಾಲಾಂತರದಲ್ಲಿ ಅದು ಕಾಲಗರ್ಭದಲ್ಲಿ ಸೇರುವ ಸಮಯ ಬಂತು. 1970ರ ದಶಕದ ಮಧ್ಯ ಭಾಗದಲ್ಲಿ "The Whole Earth Catalog''ನ ಕೊನೆಯ ಪ್ರಕಟಣೆ ಹೊರಬಿತ್ತು. ಅದರ ಹಿಂಬದಿಯ ಪುಟದ ಮೇಲೆ ಹಳ್ಳಿಯ ರಸ್ತೆಯೊಂದರ ಮುಂಜಾವಿನ ಫೋಟೊ ಇತ್ತು. ಅದರ ಮೇಲೆ ವಿದಾಯದ ಒಕ್ಕಣೆಯೊಂದಿತ್ತು- Stay Hungry, Stay Foolish! ನಾನು ನಿಮಗೆ ಹಾರೈಸುವುದೂ ಅದನ್ನೇ - Stay Hungry, Stay Foolish! ಮನದ ತುಂಬ ಕಲಿಕೆಯ ಹಸಿವಿರಲಿ, ಮನದಾಸೆಯಂತೆ ನಡೆದುಕೊಳ್ಳಿರಿ".

ಜಾಬ್ಸ್ ಭಾಷಣದಲ್ಲಿ ನಮಗೂ ಒಂದು ಕಿವಿಮಾತಿದೆ. ಕಾಲೇಜು ಓದದ ಜಾಬ್ಸ್ ಇಷ್ಟೆಲ್ಲಾ ಮಾಡಬಹುದಾಗಿದ್ದರೆ ಮಾರ್ಕ್ಸ್ ಕಡಿಮೆ ಬಂತು, ಫೇಲಾಯಿತು ಅಂತ ನೇಣುಹಾಕಿಕೊಳ್ಳುವ ನಾವೇಕೆ ಜೀವನವನ್ನು ಸಕಾರಾತ್ಮಕವಾಗಿ ನೋಡಬಾರದು? ಸೋಲನ್ನೇಕೆ ಸವಾಲಾಗಿ ಸ್ವೀಕರಿಸಬಾರದು? ಜಾಬ್ಸ್‌ನಂತೆ ಸಾವಿರಾರು ಜನರಿಗೆ ಉದ್ಯೋಗ ನೀಡಿ ಅವರ ಬದುಕನ್ನು ಬದಲಾಯಿಸಲಾಗದಿದ್ದರೂ ಕನಿಷ್ಠ ನಮ್ಮ ಬದುಕು ಮತ್ತು ಭವಿಷ್ಯವನ್ನಾದರೂ ಹಸನಾಗಿಸಿಕೊಳ್ಳಬಹುದಲ್ಲವೆ? ಆದರೆ ಅದಕ್ಕೆ ಕಲಿಯುವ ಹಸಿವು, ಏನಾದರೂ ಮಾಡಬೇಕೆಂಬ ಹಂಬಲ, ಯಾರನ್ನೂ ಲೆಕ್ಕಿಸದೆ ತೋಚಿದ್ದನ್ನು ಸಾಧಿಸುವ ಎದೆಗಾರಿಕೆ ಬೇಕು. ಅದಕ್ಕೇ ಜಾಬ್ಸ್ ಹೇಳಿದ್ದು Stay Hungry, Stay Foolish!

ಅಂಕಣಕಾರ : ಪ್ರತಾಪ್ ಸಿಂಹ
ಸಂಗ್ರಹ : ರವಿ ಎನ್ ರಾವ್

Monday, July 27, 2009

ನಗೆ ಬುಗ್ಗೆಗಳು --> ಹಾಗೆ ಸುಮ್ಮನೆ ಟೈಮ್ ಪಾಸು ಮಾಡಿ

1)ಟೀಚರ್: ನಿಮ್ಮ ಮಗನಿಗೆ ಟಿ.ವಿ.ಯಲ್ಲಿ ಕ್ವಿಜ್ ತೋರಿಸಬೇಡಿ !
ತಂದೆ: ಯಾಕೆ ?
ಟೀಚರ್: ನಿನ್ನ ತಂದೆ ಯಾರು ಅಂತ ಕೇಳಿದ್ರೆ ೪ ಆಯ್ಕೆ ಕೊಡಿ ಅಂತಾನೆ !!!

2)ಟೀಚರ್: ನಿಮ್ಮ ಮಗ ಸಿಗರೇಟ್ ಸೇದುತ್ತಾನೆ ನೀವು ಕೇಳುವುದಿಲ್ಲವೆ ?
ಅಪ್ಪ: ನಾನು ಕೇಳಿದರೆ ಅವನು ಕೊಡಲ್ಲ ಅನ್ನುತ್ತಾನೆ !!!

3)ಅಧ್ಯಾಪಕರು: ನಿನ್ನ ಮತ್ತು ತಂದೆಯ ಹೆಸರೇನು?
ರಮೇಶ: ನನ್ನ ಹೆಸರು ಸೂರ್ಯ ಪ್ರಕಾಶ. ತಂದೆಯ ಹೆಸರು ಬಾಲ ಜೀವನ್ ಸಾರ್.
ಅಧ್ಯಾಪಕರು: ಹಾಗಾದರೆ ನಿನ್ನ ಮತ್ತು ತಂದೆಯ ಹೆಸರನ್ನು ಇಂಗ್ಲೀಷ್‌ನಲ್ಲಿ ಉತ್ತರಿಸು?
ರಮೇಶ: ಮೈ ನೇಮ್ ಈಸ್ ಸನ್ ಲೈಟ್. ಮೈ ಫಾದರ್ ನೇಮ್ ಈಸ್ ಲೈಫ್ ಬಾಯ್ !

4)ಟೀಚರ್ : ನಿಜವಾದ ಕನ್ನಡಿಗ ಯಾರು ? ಗುಂಡ ನೀನು ಹೇಳು ?
ಗುಂಡ : ಇಂಗ್ಲೀಷ್ SUBJECTನಲ್ಲಿ ಫೇಲ್ ಆದವರು ಟೀಚರ್ !!!

5)ಟೀಚರ್ ಗುಂಡನಿಗೆ ಚೆನ್ನಾಗೆ ಹೊಡಿತ್ತಾಯಿದ್ದರು....
ಪ್ರಾಂಶುಪಾಲರು ಯಾಕೆ ಅವನಿಗೆ ಹೊಡಿತ್ತಾಯಿದ್ದೀರ...?
ಟೀಚರ್ : ನಾನು ಗಾಂಧಿ ಬಗ್ಗೆ ಏನಾದರೂ ಬರೀ ಅಂದ್ರೆ, ಇವನು ಪೂಜಾ ಗಾಂಧಿ ಬಗ್ಗೆ ಎರಡು ಪುಟಗಳನ್ನು ಬರೆದಿದ್ದಾನೆ...!

6)ಪರೀಕ್ಷೆಯಲ್ಲಿ ಗುಂಡ ಬೇಜಾರಾಗಿದ್ದ.
ಎಕ್ಸಾಮಿನರ್ ಬಂದು ಕೇಳಿದರು : ಯಾಕ್ರೀ, ಪ್ರಶ್ನೆಗಳು ಟಫ್ ಆಗಿವೆಯಾ ?
ಗುಂಡ ಹೇಳಿದ : ಇಲ್ಲ, ತಲೆ ಕೆಡ್ತಾ ಇದೆ. ಮೊದಲ ಪ್ರಶ್ನೆಗೆ ಯಾವ ಜೇಬಲ್ಲಿ ಉತ್ತರ ಇದೆ ಅಂತ ನೆನಪಾಗ್ತಾ ಇಲ್ಲ...!!!

7)ಟೀಚರ್ : ಆಪರೇಷನ್ ಮಾಡೋವಾಗ ಡಾಕ್ಟರ್‌ಗಳು, ಮಾಸ್ಕ್ ಯಾಕೆ ಹಾಕಿಕೊಳ್ತಾರೆ ಗೊತ್ತಾ??
ಚಿಂಟೂ : ಆಪರೇಷನ್ ಫೇಲಾದ್ರೆ ಪೇಷಂಟ್ ಗುರುತು ಹಿಡಿಬಾರದಲ್ವ!! ಅದಕ್ಕೆ ಟೀಚರ್

8) ಮಾಥ್ಸ್ ಟೀಚರ್ : ಗುಂಡ ನಿನ್ನ ಹತ್ತಿರ ವಿರುವ 12 ಚಾಕಲೇಟ್ ನಲ್ಲಿ ,4ನ್ನು ರೀನಾ ಗೆ, 3ನ್ನು ವೀಣಾಳಿಗೆ ಮತ್ತು 2ನ್ನು ಮೀನಾಳಿಗೆ ಕೊಟ್ಟಾಗ ನಿನಗೇನು ಉಳಿಯುತ್ತದೆ ?
ಗುಂಡ: ನನಗೆ ಮೂರು ಚಾಕಲೇಟ್ ಮತ್ತು ಮೂರು ಗರ್ಲ್ ಫ್ರೆಂಡ್ ಸಿಗುತ್ತಾರೆ .

9)ಗುಂಡ ಮತ್ತು ಸೀನ ಪ್ರಾಣ ಸ್ನೇಹಿತರು. ಒಂದು ದಿನ ಸೀನ ಮೃತಪಟ್ಟ.
ಆಗ ಪೊಲೀಸರು ಸಾವಿನ ತನಿಖೆಗೆ ಬಂದರು.
ಪೊಲೀಸ್ : ನಿಮ್ಮ ಸ್ನೇಹಿತ ಹೇಗೆ ಸತ್ತರು ?
ಗುಂಡ : ಹೊಟ್ಟೆಯೊಳಗೆ ಇಲಿ ಓಡಾಡಿದ ಹಾಗಾಗ್ತಿದೆ ಅಂತ ಕೂಗ್ತಿದ್ದ. ಅದಕ್ಕೆ ಇಲಿ ಪಾಷಣ ಕೊಟ್ಬಿಟ್ಟೆ. !!!

10)ಹುಚ್ಚರಿಬ್ಬರು ಮಾತನಾಡುತ್ತಿದ್ದರು.
ಮೊದಲನೇ ಹುಚ್ಚ : ಲೋ ನೋಡ್ತಾ ಇರು ಸದ್ಯದಲ್ಲೇ ನಾನು ಭಾರತದ ಪ್ರಧಾನ ಮಂತ್ರಿಯಾಗುತ್ತೇನೆ.
ಎರಡನೇ ಹುಚ್ಚ : ಅದು ಸಾಧ್ಯವಿಲ್ಲ.
ಮೊದಲನೇ ಹುಚ್ಚ : ಏಕೆ ಸಾಧ್ಯವಿಲ್ಲ?
ಎರಡನೇ ಹುಚ್ಚ : ನಾನು ಆ ಸ್ಥಾನಕ್ಕೆ ರಾಜಿನಾಮೆ ನೀಡಲು ತಯಾರಿಲ್ಲ. ! !

11)ಸದ್ದಾಮ್ : ಪಾಕಿಸ್ತಾನಲ್ಲೆ ಒಂದು ಕರೆ ಮಾಡಲೇ ?
ಯಮ : ಮಾಡು
ಸದ್ದಾಮ್ : ಬಿಲ್ ಎಷ್ಟಾಯಿತು ?
ಯಮ : ಸೊನ್ನೆ ರೂಪಾಯಿ.
ಸದ್ದಾಮ್ : ಯಾಕೆ ?
ಯಮ : ಏಕೆಂದರೆ, ನರಕದಿಂದ ನರಕಕ್ಕೆ ಉಚಿತ ಕರೆ (Free Call)

Thursday, July 23, 2009

Certified by FTC TCS


Guys/Gals,

I have been certified from TCS as above. It was a Domain Certification on US Mortgages.

Wednesday, July 22, 2009

ಹುಡುಗಿ ಬೇಕಾಗಿದ್ದಾಳೆ !!! -- Require a GIRL

ಹುಡುಗಿ ಬೇಕಾಗಿದ್ದಾಳೆ !!!
ಹುಡುಗಿಬೇಕಾಗಿದ್ದಾಳೆ ಇರಬೇಕು ತುಂಬಾ ಸಿಂಪಲ್ !
ನಕ್ಕರೆ ಗಲ್ಲದ ಮೇಲೆ ಬೀಳಬೇಕು ಡಿಂಪಲ್ !
ಅವಳ ತಲೆಯಲ್ಲಿ ಇರಬೇಕು ಪುಟ್ಟ ಪ್ರೊಸೆಸರ್ ಇಂಟೆಲ್ !
ಅವಳ ರೂಪ-ಲಾವಣ್ಯ ಕಂಡು ಬಾಯಿಬಿಡಬೇಕು ಪಕ್ಕದ್ಮನೆ ಅಂಕಲ್ !
ಅವಳು ಸ್ನಾನಕ್ಕೆ ಹಚ್ಚಬೇಕು ದಿನಾ ಸೋಪು ಸಿಂಥಾಲ್ !
ಅವಳ ಅಂದ ಹೊಗಳುತ್ತಾ ಕವಿಯಾಗಬೇಕು ಮೆಂಟಲ್ !
ಎತ್ತರದಲ್ಲಿ ಅವಳಾಗಿರಬೇಕು ರಾಜಸ್ತಾನದ ಕ್ಯಾಮೆಲ್ !
ಅವಳಗಲ್ಲ ನೋಡಿ ನೆನಪಾಗಬೇಕು ಕಾಶ್ಮೀರದ ಸಿಹಿ ಆಪಲ್ !
ಅವಳು ಬೀದಿಯಲ್ಲಿ ನಡೆದರೆ ಕಾಮೆಂಟ್ರಿ ಹೇಳಬೇಕು ಇಯಾನ್ ಚಾಪೆಲ್ !
ಮುಖದ ಮೇಲೆ ಇರಲಿ ಒಂದೇಒಂದು ಹರೆಯದ ಪಿಂಪಲ್ !
ನಮ್ಮ ಪ್ರೀತಿಯೆಂಬ ಧರ್ಮಕ್ಕೆ ಅವಳಾಗಬೇಕು ಗೀತಾ-ಕುರಾನ್ಬೈಬಲ್ !
ಅವಳು ಪ್ರೀತಿಮೆಚ್ಚಿ ನಾ ಕಟ್ಟಬೇಕು ಇನ್ನೊಂದು ತಾಜ್ಮಹಲ್ !
ಎಲ್ಲದಕ್ಕೂ ಮೊದಲ ಅವಶ್ಯಕತೆ ಅವಳಾಗಿರಬೇಕು ಸಿಂಗಲ್ !
ಇವಳೇನಾದರು ನಿಮಗೆ ಸಿಕ್ಕರೆಮಾಡಿ ನಂಗೆ ಈ-ಮೇಲ್ !
(ಬರೆದ ಪುಣ್ಯಾತ್ಮ ಯಾರೋ ಗೊತ್ತಿಲ್ಲ ... ಈ -ಮೇಲ್ ಮಾಡಿ ಅಂತ ಹೇಳಿ Mail ID ಸಹ ಕೊಟ್ಟಿಲ್ಲ .. )

Tuesday, July 21, 2009

ಕನ್ನಡ ಗಾದೆಗಳು -- ಬ್ಲಾಗ್ ಬರಹಗಾರನಿಗೆ ವರುಷ , ಕಾಮೆಂಟ್ ಮಾಡೋರಿಗೆ ನಿಮಿಷ--> ಬ್ಲಾಗ್ ಬಣ್ಣ ಕಾಮೆಂಟ್ ಓದಿದ ಮೇಲೆ

ಇಲ್ಲಿದೆ ನೋಡಿ ಕನ್ನಡ ಗಾದೆಗಳು, ನಿಮ್ಮ ಹತ್ತಿರ ಇನ್ನೂ ಇದ್ದರೆ ಈಲಿ ಸ್ವಲ್ಪ ಬರೀತೀರ

ಗಾದೆಮಾತುಗಳು ಜನರ ಅನುಭವದ ಸಾರ ಸಂಗ್ರಹ. 'ವೇದ ಸುಳ್ಳಾದರೂ ಗಾದೆ ಸುಳ್ಳಾಗದು' ಎಂಬ ಗಾದೆಯೇ ಗಾದೆಗಳ ಮಹತ್ವವನ್ನು ನೋಡುತ್ತದೆ. ಸಾಮಾನ್ಯ ಜನರ ನಡುವೆ ಬಳಕೆಯಲ್ಲಿರುವ ಈ ಮಾತುಗಳಲ್ಲಿ ಜೀವನಾನುಭವ ಅಷ್ಟೇ ಅಲ್ಲದೇ ಕಾವ್ಯ ಗುಣವನ್ನೂ ಅಲ್ಲಲ್ಲಿ ಕಾಣಬಹುದು. ನಾನು ಇಲ್ಲಿ ಕೊಡುತ್ತಿರುವ ಗಾದೆಮಾತುಗಳನ್ನು ಬೇರೆ ಬೇರೆ ಕಾರಣಗಳಿಗಾಗಿ ಆರಿಸಿದ್ದೇನೆ.

ಹಪ್ಪಳ ಮುರಿಯೋಕೆ ಡೊಗ್ಗಾಲು ಹಾಕಬೇಕೇ?
ಎಂಥೆಂತದ್ದೊ ಅಂತರಿಸಿದ ಮೇಲೆ ಸಂಕ್ರಾಂತಿ ಬಂತಂತೆ .. ಮೂಸೋಕೆ
ಉರಿದು ಉಪ್ಪಾಗಿ ತಿಂದು ಮಣ್ಣಾದಳು
ತುಪ್ಪದಂಥಾ ಮಾತಿಗೆ ಒಪ್ಪಿಕೊಂಡು ತಿಪ್ಪೇ ಪಾಲಾದ
ನರಿ ಕೊಂಬಿದ್ದರೂ ನರರಿಗೆ ಹೆದರಬೇಕು
ನರಿ ಮದುವೇಲಿ ಕತ್ತೇ ಪಾರುಪತ್ಯ (ಆಡಳಿತ, ಪೌರೋಹಿತ್ಯ)
ನಾಯಿ ಮುಟ್ಟಿದ ಮಡಕೆ ನಾಯಿ ಕೊಳ್ಳಿಗೆ (ಕೊರಳಿಗೆ) ಕಟ್ಟು
ಬಟ್ಟೆ ಮಾಸಿದರೆ ಅಗಸನಿಗೆ, ನಾಲಿಗೆ ಮಾಸಿದರೆ ಕೆರಕ್ಕೆ
ಪಿತ್ತ ನೆತ್ತಿಗೇರಿದವಗೆ ಶಂಖ ಕರ್ರಗೆ ಕಂಡರೆ ಅದರ ಬಣ್ಣ ಕೆಟ್ಟೀತೇ?
ಅತ್ತಿತ್ತಲ ಮಾರಿ ಬಂದು ಅತ್ತೆಯ ಬಡಕೊಂಡು (ಬಡಿದು ಕೊಂದು) ಹೋಗಲಿ
ಬಾಯಿಲ್ಲದೋನು ಬರದೇಲಿ ಸತ್ತನಂತೆ
ಕಲ್ಲಲ್ಲಿ ಇಟ್ಟವನ ಬೆಲ್ಲದಲ್ಲಿ ಇಡಬೇಕು
ಮಂಕುದಿಣ್ಣೆ ಮದಿವೆಗೆ ಹೋದರೆ ವಾಲಗದವರೆಲ್ಲಾ ಅಟ್ಟಾಡಿಕೊಂಡು ಹೊಡೆದರಂತೆ
ನಮ್ಮ ಮನೆ ರಾಗಿ ಕಲ್ಲಾಡಿದರೆ ನಾಡೆಲ್ಲಾ ನೆಂಟರು
ಹಚ್ಚಗಿದ್ದ ಕಡೆ ಮೇಯುವುದು ಬೆಚ್ಚಗಿದ್ದ ಕಡೆ ಮಲಗುವುದು
ಹಲ್ಲು ಹತ್ತಿದವ (ರುಚಿ ಹತ್ತಿದವ) ಒಳ್ಳು (ಒರಳು) ನೆಕ್ಕಿದ
ಹೀನ ಸುಳಿ (ದುಷ್ಟ ಬುದ್ದಿ) ಬೋಳಿಸಿದರೂ ಹೋಗದು
ಹೊತ್ತು (ಸೂರ್ಯ, ಬಿಸಿಲು) ಬಂದತ್ತ ಕೊಡೆ (ಛತ್ರಿ) ಹಿಡಿ
ಅಜ್ಜಿ ಸಾಕಿದ ಮಗ ಕಜ್ಜಕ್ಕೂ ಬಾರದು
ಅಲಲಾ ಅನ್ನೊ ಅಳ್ಳಿ-ಮರ ನಂಬಬಹುದು, ಮೆತ್ತಗಿರೊ ಕಳ್ಳಿ-ಗಿಡ ನಂಬಲಾಗದು
ಆಳು ನೋಡುದ್ರೆ ಅಬ್ಬಬ್ಬಾ! ಬಾಳು ನೋಡುದ್ರೆ ಬಾಯ್ ಬಡ್ಕೊಬೇಕು
ಆಳಿನ ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಇದ್ದಲಿನವನ ಸ್ನೇಹಕ್ಕಿಂತ ಗಂಧದವನ ಗುದ್ದಾಟ ಲೇಸು
ಇರಲಾರದೆ ಇರುವೆ ಬಿಟ್ಟುಕೊಂಡು ಕಿರಂಗೂರಿಗೆ ಹೋಗಿ ಕಣಿ ಕೇಳಿದ
ಉಪ್ಪು ಬರುವ ಹೊತ್ತಿಗೆ (ನೆಮ್ಮದಿ ಬರುವ ಕಾಲಕ್ಕೆ) ಸೊಪ್ಪಿನಾಟ ಪೂರೈಸಿತು
ಎತ್ತೋರ್ ಇಲ್ಲದ ಮಕ್ಕಳ ಹೆತ್ತೇನು ಫಲ
ಹೆಣ್ಣು ಕೊಟ್ಟ ಮಾವ ಕಣ್ಣು ಕೊಟ್ಟ ದೇವರ ಸಮಾನ
ಗುಟ್ಟು ನಿಲ್ಲದ ಬಾಯಿಗೆ ಮುತ್ತು ಕೊಟ್ಟ ಹಾಗೆ
ಕಡಲೆ ಕಾಯೋಕೆ ಕಾಗೆ ಕಾವಲು ಹಾಕಿದಂತೆ
ದಾನ ದಾನಕ್ಕಿಂತ ನಿದಾನ ದೊಡ್ಡದು
ದಿಕ್ಕು ದಿಕ್ಕಿಗೆ ಹೋದರೂ ದುಕ್ಕ ತಪ್ಪದು
ಉರಿದ ಹೊಟ್ಟೆಗೆ ಉಪ್ಪು ತುಂಬಿಸಿದಂಗೆ
ಇರುಳು ಚಿಂತೆ ನಿದ್ದೆಗೇಡು, ಹಗಲು ಚಿಂತೆ ಕೆಲಸಗೇಡು
ಆಡುವವ ಆಡಿದ್ರೆ ನೋಡುವವಗೆ ಸಿಗ್ಗು
ಅಂಜಿದವನ ಮೇಲೆ ಕಪ್ಪೆ ಹಾರಿದಂಗೆ
ಹೆಸರಿಗೆ ಹೆಂಡ್ರ ಕಾಣೆ ಮಗನ ಹೆಸರು ನಂಜುಂಡ
ಅಲ್ಲದ ಕನಸು ಕಂಡರೆ ಎದ್ದು ಕುಂಡ್ರು.
ನಮ್ಮ ಕಣ್ಣು ನಮಗೆ ಕೆಡಿಸಿತು
ನಾಯಿಗೆ ಹೇಳಿದರೆ ನಾಯಿ ತನ್ನ ಬಾಲಕ್ಕೆ ಹೇಳಿತು.
ದಾನಕ್ಕೆ ಕೊಟ್ಟ ಎಮ್ಮೆಯ ಹಲ್ಲು ಎಣಿಸಿದರು.
ಬಂದಷ್ಟು ಬಂತು ಬರಡೆಮ್ಮೆ ಹಾಲು.
ಮೂರು ಕೋಟಿ ಜನ ಸೇರಲ್ಲಿಲ್ಲ ಮೈಲಾರಲಿಂಗನ ಜಾತ್ರೆ ನಡೀಲ್ಲಿಲ್ಲ.
ಮೂರೂ ಬಿಟ್ಟವರು ಊರಿಗೆ ದೊಡ್ಡವರು.
ಎತ್ತು ಏರಿಗೆ ಎಳೆದರೆ ಕೋಣ ನೀರಿಗೆ ಎಳೀತು.
ಎಮ್ಮೆ ತಪ್ಪಿದರೆ ಕಪ್ಪೆ ಹೊಂಡ.
ಬೆಕ್ಕಿಗೆ ಚೆಲ್ಲಾಟ, ಇಲಿಗೆ ಪ್ರಾಣಸಂಕಟ.
ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ.
ಕೋತಿ ತಾನು ಕೆಡೋದಲ್ಲದೆ ವನನೆಲ್ಲ ಕೆಡಿಸಿತ್ತು.
ಕಪ್ಪೆ ಹಿಡಿದು ಕೊಳಗಕ್ಕೆ ತುಂಬಿದ ಹಾಗೆ.
ನೊಣ ತಿಂದು ಜಾತಿ ಕೆಡಿಸಿಕೊಂಡರು.
ಅನಿಷ್ಟಕ್ಕೆಲ್ಲ ಶನೀಶ್ವರನೇ ಕಾರಣ.
ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು.
ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ?
ಮನೆಗೆ ಮಾರಿ ಊರಿಗೆ ಉಪಕಾರಿ.
ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
ಓಡ್ಹೋಗುವನ ಚಡ್ಡಿ ಹರಕಂಡಷ್ಟೆ ಲಾಭ.
ಬರಗಾಲದಲ್ಲಿ ಅಧಿಕಮಾಸ ಬಂದ ಹಾಗೆ.
ತಾನೂ ತಿನ್ನ, ಪರರಿಗೂ ಕೊಡ.
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು.
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದ.
ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ.
ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
ಗಂಡಸರ ಕೈಯಲ್ಲಿ ಕೂಸು ನಿಲ್ಲದು ಹೆಂಗಸರ ಕೈಯಲ್ಲಿ ಮಾತು ನಿಲ್ಲದು
ಎಳ್ಳಿನಲ್ಲಿ ಎಣ್ಣೆ ಅಡಕ ಹಾಲಿನಲ್ಲಿ ಬೆಣ್ಣೆ ಅಡಕ
ಮೇಲೆ ಬಸಪ್ಪ ಒಳಗೆ ವಿಷಪ್ಪ
ಹೊರಗೆ ಬೆಳಕು ಒಳಗೆ ಕೊಳಕು
ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
ಒಪ್ಪವಿಲ್ಲದ ಮಾತು ತುಪ್ಪವಿಲ್ಲದ ಊಟ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಇದ್ದಾಗ ಹಿರಿಯಣ್ಣ ಇಲ್ಲದಾಗ ತಿರಿಯಣ್ಣ
ಒಕ್ಕುವುದು ರೈತನ ಗುಣ ನೆಕ್ಕುವುದು ನಾಯಿಯ ಗುಣ
ಅರಮನೆಯ ಮುಂದಿರಬೇಡ ಕುದುರೆಯ ಹಿಂದಿರಬೇಡ
ತಾಯಿಯಂತೆ ಮಗಳು ನೂಲಿನಂತೆ ಸೀರೆ

ಕತ್ತೆಯಂಥ ಅತ್ತೆ ಬೇಕು ಮುತ್ತಿನಂಥ ಗಂಡ ಬೇಕು
ಅರಿತರೆ ಮಾತನಾಡು ಮರೆತರೆ ಕೂತು ನೋಡು
ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
ಹಾಲಿದ್ದ ಕಡೆ ಬೆಕ್ಕು ಕೂಳಿದ್ದ ಕಡೆ ನಾಯಿ
ಆಪತ್ತಿಗಾದವನೇ ನೆಂಟ ಕೆಲಸಕ್ಕಾದವನೇ ಭಂಟ
ಗಂಜಿಯ ಕುಡಿದರೂ ಗಂಡನ ಮನೆ ಲೇಸು
ಒಲಿದರೆ ನಾರಿ ಮುನಿದರೆ ಮಾರಿ
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಕಚ್ಚೋ ನಾಯಿ ಬೊಗಳುವುದಿಲ್ಲ
ತುಂಬಿದ ಕೊಡ ತುಳುಕುವುದಿಲ್ಲ
ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ
ತಾಳಿದವನು ಬಾಳಿಯಾನು
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?
ಆರಕ್ಕೆ ಏರಲಿಲ್ಲ ಮೂರಕ್ಕೆ ಇಳಿಯಲಿಲ್ಲ
ಮುದುಕರಿಗೆ ಮುದ್ದೆ ಕೇಡು ಹಳೇ ಬಟ್ಟೆಗೆ ನೂಲು ಕೇಡು
ಲಾಲಿಸಿದರೆ ಮಕ್ಕಳು ಪೂಜಿಸಿದರೆ ದೇವರು
ಉತ್ತರೆ ಹೊಲ ಚಂದ ಬಿತ್ತರೆ ಬೆಳೆ ಚಂದ
ಅಂಗೈ ಹುಣ್ಣಿಗೆ ಕನ್ನಡಿ ಬೇಕೇ?
ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
ಹಸಿದು ಹಲಸು ಉಂಡು ಮಾವು

ಕಂತೆಗೆ ತಕ್ಕಂತೆ ಬೊಂತೆ
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ
ಕಾಸಿಗೆ ತಕ್ಕ ಕಜ್ಜಾಯ
ಮೋಟಾಳಿಗೊಂದು ಚೋಟಾಳು
ಅಡಿಕೆಗೆ ಹೋದ ಮಾನ ಆನೆ ಕೊಟ್ರು ಬರಲ್ವಂತೆ
ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ"
ಬ್ಲಾಗ್ ಬರಹಗಾರನಿಗೆ ವರುಷ , ಕಾಮೆಂಟ್ ಮಾಡೋರಿಗೆ ನಿಮಿಷ
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸಂಕಟ
ಕಾಮೆಂಟ್ ಮಾಡೊರಿಗೆ ಚೆಲಾಟ, flag ಮಾಡಿದಾಗ moderators ಗೆ
ಅಳಿಯನ ಕುರುಡು ಬೆಳಗಾದ ಮೇಲೆ...
ಬ್ಲಾಗ್ ಬಣ್ಣ ಕಾಮೆಂಟ್ ಓದಿದ ಮೇಲೆ
ಆಸೆ ಪಟ್ಟು ಅಕ್ಕನ ಮನೆಗೆ ಹೋದರೆ ಹಾಸೋಕ್ಕೆ ಕೊಟ್ಟಿದ್ದಳಂತೆ ಹಳೇ ಕಂಬ್ಳೀನ.
ಅಜ್ಜೀಗೆ ಅರಿವೆ ಚಿಂತೆ ಮೊಮ್ಮಗಳೀಗೆ ಗೆಳೆಯನ ಚಿಂತೆ.
ಏನೆ ಶಂಕರಿ ಓಡಾಟ ಅಂದ್ರೆ ಶ್ಯಾನುಭೋಗರ ಮನೇಲಿ ದ್ಯಾವ್ರೂಟ ಅಂದ್ಲಂತೆ
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ
ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
ಊಟ ತನ್ನಿಚ್ಚೆ, ನೋಟ ಪರರಿಚ್ಚೆ.
ಹಲ್ಲಿದ್ದರೆ ಕಡಲೆ ಇಲ್ಲ. ಕಡಲೆ ಇದ್ದರೆ ಹಲ್ಲಿಲ್ಲ
ದೇವರು ವರ ಕೊಟ್ರೆ ಪೂಜಾರಿ ವರ ಕೊಡೊದಿಲ್ಲ.
ದೇವರೇ ಹಗ್ಗ ತಿಂತಾ ಇದ್ದನಂತೆ ಪೂಜಾರಿ ಬಯಸಿದನಂತೆ ಶ್ಯಾವಿಗೇನ.
ನವಿಲು ಜಾಗರವಾಡೋದನ್ನ ನೋಡಿ ಕೆಂಭೂತ ಪುಕ್ಕ ಕೆದರಿಕೊಂಡಿತಂತೆ.
ಮೆದೆಗೆ ಬೆಂಕಿ ಹಾಕಿ ಅರಳು ಆರಿಸಿಕೊಂಡರಂತೆ.
ಹೇಳ್ತಾ ಹೇಳ್ತಾ ಮಗಳು ಹೆಣ್ಣನ್ನೇ ಹಡೆದಳಂತೆ.
ಬೆಣ್ಣೆ ಇಟ್ಟುಕೊಂಡು ತುಪ್ಪಕ್ಕೆ ಅತ್ತರಂತೆ.
ಕರೆವಾಗ ಹಾಲು ಕೊಡದವರು ಹೆಪ್ಪಿಟ್ಟು ಮೊಸರು ಕೊಟ್ಟಾರೆಯೇ?
ಇಬ್ಬರ ಜಗಳ ಮೂರನೆಯವನಿಗೆ ಲಾಭ
ಎತ್ತುಯೀತು ಅಂದ್ರೆ ಕೊಟ್ಟಿಗೆಗೆಕಟ್ಟು ಅಂದ್ರಂತೆ
ಬೆರಳು ತೋರಿಸಿದ್ರೆ ಹಸ್ತಾನೇ ನುಂಗಿದ್ರಂತೆ
ಆಪತ್ಕಾಲದಲ್ಲಿ ಆದವನೇ ನೆಂಟ
ಕಲಿಯೋ ತನಕ ಬ್ರಹ್ಮ ವಿದ್ಯೆ ಕಲಿತ ಮೇಲೆ ಕೋತಿ ವಿದ್ಯೆ.....
ವೇದ ಸುಳ್ಳಾದರು ಗಾದೆ ಸುಳ್ಳಾಗದು
ಅಮ್ಮಂನಂತೆ ಮಗಳು ನೂಲಿನಂತೆ ಸೀರೆ
ಬಡವರ ಮನೆ ಊಟ ಚಂದ ಬಲ್ಲಿದರ ಮನೆ ನೋಟ ಚಂದ
ಎದ್ದು ಬಂದು ಎದೆಗೆ ಒದ್ದರೆ, ಇದ್ದಿದ್ದು ಇದ್ದಂಗೆ ಹೇಳಿದ್ರಂತೆ
ಅರ್ಧ ರಾತ್ರೀಲಿ ಕೊಡೆ ಹಿಡಿದರೆ ಅಲ್ಪನಿಗೆ ಐಶ್ವರ್ಯ ಸಿಕ್ಕಿದಳಂತೆ
ಮೀಸೆ ಮಣ್ಣಾದ್ರು ಜಟ್ಟಿ ಕೆಳಗೆ ಬೀಳಲಿಲ್ಲವಂತೆ
ಕುಲಾವಿ ಹೊಲಿಸೋಕೆ ಮುಂಚೆ ಕೂಸು ಹುಟ್ತಿಸಿದರು
ಬೇವಿನ ಕಾಯಿಗೆ ಹಾಗಲ ಕಾಯಿ ಸಾಕ್ಷಿ
ನಮ್ಮ ಮನೆ ಕಾವಲಿ ತೂತಾದರೆ ಎಲ್ಲಾರ ಮನೆ ದೋಸೆ ತೂತು
ಚಂಡಾಲ ಶಿಶ್ಯರು ಚೋರ ಗುರು

ಪೂಜಾರಿ ವರ ಕೊಟ್ರು ದೇವ್ರು ವರ ಕೊಡ
ತುಸು ತಿನ್ನೋದಕ್ಕಿಂತ ಕಸ ತಿನ್ನು
ಗಾದೆ ಸುಳ್ಳಾದರೂ ವೇದ ಸುಳ್ಳಾಗದು

ನೀರು ಕುಡಿದ ಮೇಲೆ ಉಪ್ಪು ತಿನ್ನಲೇ ಬೇಕು
ಬುದ್ದಿ ಬಂದ ಮೇಲೆ ಕೆಟ್ಟಿದ್ದಾಯ್ತು
ಮುನಿದರೆ ಮಾರಿ ಅಗುತ್ತಾಳೆ ನಾರಿ
ಬೆಳಿಗ್ಗೆ ಎದ್ದು ರಾಮನಿಗು ಸೀತೆಗು ಏನು ಸಂಬಂಧ ಅಂದಿದ್ದಕ್ಕೆ ರಾತ್ರಿ ಎಲ್ಲಾ ರಾಮಯಣ ನೋಡಿದ್ರಂತೆ
ಮೂರನೆಯವನಿಗೆ ಲಾಭ ಅಗಿದ್ದಕ್ಕೆ ಇಬ್ಬರ ಜಗಳ
ಕೋಲು ಮುರಿದರೂ ಹಾವು ಸಾಯಬಾರದು
ಹೆಂಡ ಕುಡಿಸಿದರೆ ಕೋತಿಯಂತೆ
ಎಮ್ಮೆಗೆ ಬರೆ ಎಳೆದಿದ್ದಕ್ಕೆ ಎತ್ತಿಗೆ ಜ್ವರ ಬಂತಂತೆ
ಕಜ್ಜಾಯಕ್ಕೆ ತಕ್ಕ ಕಾಸು
ಹಸ್ತ ನುಂಗಿದರೆ ಬೆರಳು ತೋರಿಸಿದನಂತೆ
ಯಥಾ ಪ್ರಜಾ ತಥಾ ರಾಜ
ಹೆಗಲು ಮುಟ್ತಿ ನೋಡಿಕೊಂಡಿದ್ದಕ್ಕೆ ಕುಂಬಳ ಕಾಯಿ ಕಳ್ಳ ಅಂದ್ರಂತೆ
ಆನೆಗೆ ಹೋದ ಮಾನ ಅಡಿಕೆ ಕೊಟ್ಟರೂ ಬರೊಲ್ಲ
ದೇವ ಲೋಕ ಹಾಳಾದರೆ ನಾಯಿ ಬೊಗಳುತ್ತದೆಯೆ ?

ದಡ್ಡನಿಗೆ ಮಾತಿನ ಪೆಟ್ಟು ಜಾಣನಿಗೆ ದೊಣ್ಣೆ ಪೆಟ್ಟು
ಕೈಲಾಸ ಇದ್ರೆ ಕಾಸು

ಬಾಯಿ ಮೊಸರಾದರೆ ಕೈ ಕೆಸರು
ಇಲಿ ಹಿಡಿದು ಬೆಟ್ಟ ಅಗೆದ್ರಂತೆ
ಹುಲಿ ಬಂದ್ರೆಇಲಿ ಬಂತು ಅಂದ್ರಂತೆ
ಸುಳ್ಳಿಗೆ ಸಾವಿಲ್ಲ ಸತ್ಯಕ್ಕೆ ಸುಖವಿಲ್ಲ
ಕೊಟ್ಟವನು ವೀರಭದ್ರ ಇಸ್ಕೊಂಡವನು ಈರಭದ್ರ (ಕೋಡಂಗಿ )
ಕುರುಬನಿಗೆ ಲಾಭ ಆದಷ್ಟೂ ಕುರಿ ಕೊಬ್ಬಿತು
ತೋಳ ಕಾಯೋದಕ್ಕೆ ಕುರಿ ಕಳಿಸಿದರಂತೆ
ಇರುವೆ ಬಿಟ್ಕೊಂಡು ಇರಲಾರದಾದರು
ಕರುಳರಿಯದಿದ್ದರ್ರೂ ಕಣ್ಣರಿಯಿತು
ಶಸ್ತ್ರಾಭ್ಯಾಸ ಸಮಯದಲ್ಲಿ ಯುದ್ಢ
ದ್ರಾಕ್ಷಿ ಹುಳಿಯಾದರೆ ಕೈಗೆ ಎಟುಕುವುದಿಲ್ಲ
ಗುಡಿಸಲಿಗಿಂತ ಹಂಗಿನ ಅರಮನೆಯೆ ಲೇಸು
ಪಟ್ಟಣ ಸೇರಿ ಕೆಡು
ಬಚ್ಚಿಟ್ಟದ್ದು ತನಗೆ ಕೊಟ್ಟದ್ದು ಪರರಿಗೆ
ವಿಷ ಕುಡಿದ ಮಕ್ಕಳೆ ಬದುಕೊಲ್ಲ ಇನ್ನು ಹಾಲು ಕುಡಿದ ಮಕ್ಕಳು ಬದುಕುತ್ತಾರ ?
ಅಂಗಾಲಿಗೆ ತ್ರಾಣವಿದ್ದರೆ ಬಂಗಾಲಕ್ಕೆ ಹೋಗಬಹುದು.
ಅಂಗಡಿ ಮಾರಿ ಗೊಂಗಡಿ ಹೊದ್ದ ಹಾಗೆ.
ಅಂಗಾಲಿಗೆ ಹೇಸಿಕೆಯಿಲ್ಲ , ಕರುಳಿಗೆ ನಾಚಿಕೆಯಿಲ್ಲ .
ಅಂಗೈ ಹಾಗೆ ಹೊಲ ಮಾಡಿದರೆ , ಮುಂಗೈ ತುಂಬ ತುಪ್ಪ.
ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ .
ಅಂಬಲಿ ಊಟ ; ಕಂಬಳಿ ಹೊದಿಕೆ.
ಅಕ್ಕ ಇದ್ದರೆ ಭಾವ ; ರೊಕ್ಕ ಇದ್ದರೆ ಸೂಳೆ.
ಅಕ್ಕರೆಯಿಂದಲ್ಲದಿದ್ದರೂ ಅಪವಾದಕ್ಕೆ ಹೆದರಿ ಕರೆಯಬೇಕು.
ಅಕ್ಕರೆಯಿಲ್ಲದ ಉಪ್ಪರಿಗೆಗಿಂತ ಅಕ್ಕರೆಯ ತಿಪ್ಪೆಯೇ ಲೇಸು.
ಅಕ್ಕಿ ಕೊಟ್ಟು ಅಕ್ಕನ ಮನೆಯೇ?
ಸಾಲ ಮಾಡಿದವನು ತೀರಿಸಿ ಸಾಯಲ್ಲಿಲ್ಲ, ಮೂಲ ಮಾಡಿದವನು ತಿಂದು ಸಾಯಲ್ಲಿಲ್ಲ.
ಹುಟ್ಟಿದ ಲಾಗಾಯ್ತೂ ಯಜ್ಞಕಾರ್ಯ ಮಾಡದಿದ್ದವನು ಗಡ್ಡಕ್ಕೆ ಬೆಂಕಿ ಹಚ್ಚಿಕೊಂಡನಂತೆ.
ಬಳಸದೇ ಬಾವಿ ಕೆಟ್ಟಿತು, ಹೋಗದೇ ನೆಂಟಸ್ತನ ಕೆಟ್ಟಿತು.
ಮನೆಗೊಬ್ಬ ಅಜ್ಜಿ, ಒಲೆಗೊಂದು ಕುಂಟೆ.
ಚೇಳಿನ ಮಂತ್ರವೂ ಗೊತ್ತಿಲ್ಲ, ಹಾವಿನ ಬುಟ್ಟಿಗೆ ಕೈ ಹಾಕಿದಂತೆ.
ಲಂಕೆ ಸುಟ್ಟರೂ ಹನುಮಂತ ಹೊರಗೆ.
ತಲೆ ಬೋಳಿಸಿದರೆ ಸುಳಿ ಹೋಗುತ್ತದೆಯೆ?
ದಿವಾಳಿ ತೆಗೆಯುವವನ ವ್ಯಾಪಾರ ಹೆಚ್ಚಂತೆ, ಆಚಾರ ಕೆಟ್ಟವನ ಪೂಜೆ ಹೆಚ್ಚಂತೆ.
ಇಪ್ಪತ್ತಕ್ಕೆ ಯಜಮಾನಿಕೆ, ಎಪ್ಪತ್ತಕ್ಕೆ ಅತಿಸಾರ ಬರಬಾರದು.
ಮಾಡುವವರಿದ್ದರೆ ನೋಡು ನನ್ನ ವೈಭೋಗ.
ಆಳ ನೋಡಿ ಹಾರು .
ಆಳುದ್ದದ ಬಾವಿ ಮುಚ್ಚಬಹುದು , ಗೇಣುದ್ದದ ಹೊಟ್ಟೆ ಮುಚ್ಚಲಾಗದು.
ಆಳೋರಿಲ್ಲದೆ ನಾಡು ಕೆಟ್ಟಿತು.
ಇಕ್ಕಟ್ಟಾದರೂ ತನ್ನ ಮನೆಯೇ ಚೆಂದ .
ಇಕ್ಕುವವಳು ನಮ್ಮವಳಾದರೆ ಕೊಟ್ಟಿಗೆಯಲ್ಲಾದರೂ ಉಂಡೇನು.
ಇಟ್ಟರೆ ತೊಟ್ಟರೆ ಪುಟ್ಟಕ್ಕನೂ ಚೆಂದ. (--ಬಟ್ಟೆ ,ಒಡವೆ )
ಇತ್ತತ್ತ ಬಾ ಅಂದರೆ ಹೆಗಲೇರಿ ಕೂತ .
ಇದ್ದ ಮಕ್ಕಳಿಗೇ ಕೂಳಿಲ್ಲ ; ಮತ್ತೊಂದು ಕೊಡೋ ಶಿವರಾಯ ಅಂದರಂತೆ.
ಇದ್ದರೆ ಈ ಊರು . ಎದ್ದರೆ ಮುಂದಿನೂರು . ( ನಿಶ್ಚಿಂತಾತ್ಮನ ಪರಿ!)
ಇದ್ದಾಗ ನವಾಬ ; ಇಲ್ಲದಾಗ ಫಕೀರಸಾಬ ( ಹಣ ಇದ್ದಾಗ ಧಾರಾಳತನದಿಂದ ಇದ್ದು ಇಲ್ಲದಾಗ ಬಡ ಫಕೀರನಂತಿರುವದು )
ಅಂಗೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡ ಹಾಗೆ.
ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಂಡ.
ಕಳ್ಳನ ಮನಸ್ಸು ಹುಳ್ ಹುಳ್ಳಗೆ.
ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ.
ದಿನಾ ಸಾಯೋರಿಗೆ ಅಳೋರು ಯಾರು.
ಅಕ್ಕನ ಚಿನ್ನವಾದರೂ ಅಕ್ಕಸಾಲಿಗ ಬಿಡ.
ರಾಮೇಶ್ವರಕ್ಕೆ ಹೋದರೂ ಶನೀಶ್ವರ ಬಿಡಲಿಲ್ಲ.
ಎತ್ತಿಗೆ ಜ್ವರ, ಎಮ್ಮೆಗೆ ಬರೆ.
ಕೆಲಸವಿಲ್ಲದ ಆಚಾರಿ ಮಗಳ ಕಾಲು ಕೆತ್ತಿದ.
ಸಾವಿರ ಕಾಲ ಸಾಮ ಓದಿದ ಮಗ ಮನೆ ಅಜ್ಜಿ ಸೊಂಟ ಮುರಿದ.

Wednesday, July 15, 2009

The Youngest Hacker of INDIA - ಠಕ್ಕರನ್ನು ಹೆಕ್ಕಿ ಹಿಡಿಯುತ್ತಿರುವ ಟೆಕ್ಕಿ - The Techie Caught Thieves

Guys/Gals,
Once more one more good article from Pratap Sinha Sir.
Read and put your comments.
ಅಂಕಿತ್ ಗುಜರಾತಿನವನು. ಆತನ ವಿವಾಹ ನಿಶ್ಚಿತಾರ್ಥವಾಯಿತು. ಅದರ ಜತೆಗೆ ವಿಚಿತ್ರ ಸಮಸ್ಯೆಯೂ ಶುರುವಾಯಿತು. ಅಂಕಿತ್‌ನ ಸೆಲ್‌ಫೋನ್‌ಗೆ ಆತ ವಿವಾಹವಾಗಲಿದ್ದ ವಧುವಿನ ಸೆಲ್‌ನಿಂದ ದಿನಕ್ಕೆ ಐದಾರು ಎಸ್ಸೆಮ್ಮೆಸ್‌ಗಳು ಬರಲಾರಂಭಿಸಿದವು. ಆದರೆ ಅವು ಪ್ರೀತಿ, ಕಾಳಜಿಯ ಸಂದೇಶಗಳಾಗಿರಲಿಲ್ಲ. ಎಚ್ಚರಿಕೆಯ ಗಂಟೆಗಳಾಗಿದ್ದವು. ನನಗೆ ಬೇರೊಬ್ಬನ ಜತೆ ಸಂಬಂಧವಿದೆ. ನನ್ನನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹುಶಾರ್. ಇಂತಹ ಎಸ್ಸೆಮ್ಮೆಸ್‌ಗಳನ್ನು ಕಂಡು ಆಶ್ಚರ್ಯಚಕಿತನಾದ ಅಂಕಿತ್, ಕಾರಣ ತಿಳಿದುಕೊಳ್ಳುವ ಸಲುವಾಗಿ ನೇರವಾಗಿ ವಧುವನ್ನು ಕಂಡು ವಿಚಾರಿಸಿದಾಗ ಅಂತಹ ಎಸ್ಸೆಮ್ಮೆಸ್‌ಗಳನ್ನು ಆಕೆ ಕಳುಹಿಸಿಯೇ ಇರಲಿಲ್ಲ!

ಅದರ ಬಗ್ಗೆ ಆಕೆಗೆ ಅರಿವೂ ಇರಲಿಲ್ಲ. ಇದೆಂಥ ವಿಚಿತ್ರ ಎಂದು ಸುಮ್ಮನಾಗುವಂತೆಯೂ ಇಲ್ಲ. ಇಬ್ಬರಿಗೂ ಪರಸ್ಪರರ ಮೇಲೆ ವಿಶ್ವಾಸವಿದ್ದರೂ ನಿತ್ಯವೂ ಬರುತ್ತಿದ್ದ ಎಸ್ಸೆಮ್ಮೆಸ್‌ಗಳು ಮನಃಶಾಂತಿಯನ್ನು ಕೆಡಿಸುತ್ತಿದ್ದವು. ಅಂಕಿತ್ ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್‌ನ ಮೊರೆ ಹೋದ. ಆತ ನೀಡಿದ ದೂರಿನ ತನಿಖೆಯ ಜವಾಬ್ದಾರಿ ಸನ್ನಿ ವಾಘೇಲಾನ ಹೆಗಲಿಗೆ ಬಿತ್ತು. ಎಸ್ಸೆಮ್ಮೆಸ್ ಸೆಂಟರ್‌ನ ನಂಬರ್ ತೆಗೆದುಕೊಂಡ ಸನ್ನಿ ತನಿಖೆ ಆರಂಭಿಸಿದ. ಆ ಎಸ್ಸೆಮ್ಮೆಸ್‌ಗಳನ್ನು ವೈಬ್‌ಸೈಟೊಂದರ ಮೂಲಕ ಕಳುಹಿಸಲಾಗಿದೆ ಎಂಬುದನ್ನು ಪತ್ತೆ ಮಾಡಿದ. ಆ ಮೂಲಕ ಯಾವ ಕಂಪ್ಯೂಟರ್‌ನಿಂದ ಕಳುಹಿಸಲಾಗುತ್ತಿದೆ ಎಂಬುದನ್ನು ‘ಐಪಿ’ ಅಡ್ರೆಸ್ ಮೂಲಕ ಕಂಡು ಹುಡುಕಿದ. ಒಂದೇ ದಿನದಲ್ಲಿ ಇಷ್ಟೆಲ್ಲಾ ಕಸರತ್ತುಗಳನ್ನು ಮುಗಿಸಿದ ಸನ್ನಿ, ಅಪರಾಧಿಯನ್ನೂ ಸಿಕ್ಕಿಬೀಳಿಸಿದ. ಆತ ಮತ್ತಾರೂ ಆಗಿರಲಿಲ್ಲ, ಅಂಕಿತ್‌ನೊಂದಿಗೆ ನಿಶ್ಚಿತಾರ್ಥವಾಗಿದ್ದ ಹುಡುಗಿಯ ಪಕ್ಕದ ಮನೆಯ ಗೆಂಡೇತಿಮ್ಮ!
ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಈ ಮಧ್ಯೆ ಪ್ರತಿಷ್ಠಿತ ಕಾಲೇಜಾದ ‘ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಗುಜರಾತ್’ನ ನಾಲ್ವರು ವಿದ್ಯಾರ್ಥಿನಿ ಯರು ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್‌ನ ಮುಂದೆ ದೂರೊಂದನ್ನು ಸಲ್ಲಿಸಲು ಬಂದರು. ಯಾರೋ ಕಿಡಿಗೇಡಿಗಳು “ಆರ್ಕಟ್ ಡಾಟ್‌ಕಾಮ್”ನಲ್ಲಿ ಈ ವಿದ್ಯಾರ್ಥಿನಿಯರ ಪ್ರೊಫೈಲ್ ಸೃಷ್ಟಿಸಿ, ಅಶ್ಲೀಲ ಚಿತ್ರಗಳನ್ನು ಹಾಕಿದ್ದರು. ಜತೆಗೆ ಆರ್ಕಟ್‌ಗೆ ಇಣುಕುವವರಿಗೆ ಸ್ನೇಹದ ಬಲೆ ಬೀಸಿ ಅವರೊಂದಿಗೆ ಅಶ್ಲೀಲ ಸಂಭಾಷಣೆಯನ್ನೂ ನಡೆಸುತ್ತಿದ್ದರು. ಅಲ್ಲದೆ ಆ ವಿದ್ಯಾರ್ಥಿನಿಯರ ನೈಜ ಸ್ನೇಹಿತರನ್ನೂ ‘ಫ್ರೆಂಡ್ಸ್ ಲಿಸ್ಟ್’ಗೆ ಸೇರಿಸಿಕೊಂಡು ಸ್ಕ್ರ್ಯಾಪ್ ಬುಕ್‌ನಲ್ಲಿ ಸರಸ ಸಲ್ಲಾಪ ನಡೆಸುತ್ತಿದ್ದರು. ಹೀಗೆ ತಮ್ಮ ಚಾರಿತ್ರ್ಯಕ್ಕೆ ಯಾರೋ ಮಸಿ ಬಳಿಯಲು ಯತ್ನಿಸುತ್ತಾರೆ ಎಂಬುದು ಅರಿವಾದ ಕೂಡಲೇ ಆ ವಿದ್ಯಾರ್ಥಿನಿಯರು ದಾರಿ ಕಾಣದೆ ಕ್ರೈಮ್ ಬ್ರ್ಯಾಂಚ್‌ಗೆ ಬಂದಿದ್ದರು. ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೂ ಸನ್ನಿ ವಾಘೇಲಾನೇ. ಆರ್ಕಟ್‌ನ ಮೇಲೆ ನಿಗಾ ಇಡಲು ಆರಂಭಿಸಿದ ಸನ್ನಿ, ಆ ಕಿಡಿಗೇಡಿ ಆನ್‌ಲೈನ್‌ಗೆ ಬರುವುದನ್ನೇ ಕಾದು ಕುಳಿತ. ಆನ್‌ಲೈನ್‌ಗೆ ಬಂದ ಕೂಡಲೇ ತಂತ್ರeನದ ಸಹಾಯದಿಂದ ಆರ್ಕಟ್‌ಗೆ ಲಾಗ್ ಇನ್ ಆಗುತ್ತಿದ್ದ ಕಂಪ್ಯೂಟರ್‌ನ ಐಪಿ ಅಡ್ರೆಸ್ ತಿಳಿದುಕೊಂಡ. ಕೂಡಲೇ ಸೇವಾ ಪೂರೈಕೆದಾರರನ್ನು ಸಂಪರ್ಕಿಸಿ, ಅಪರಾಧಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದುಬಿಟ್ಟ. ಈ ಬಾರಿ ಸನ್ನಿ ತೆಗೆದುಕೊಂಡಿದ್ದು ೫ ದಿನಗಳನ್ನು.

ಸನ್ನಿಯೇನು ಸಾಮಾನ್ಯ ವ್ಯಕ್ತಿ ಎಂದು ಭಾವಿಸಬೇಡಿ.

ಕಳೆದ ಕೆಲವು ತಿಂಗಳುಗಳಲ್ಲಿ ಜೈಪುರ, ಬೆಂಗಳೂರು, ಅಹಮದಾಬಾದ್, ಸೂರತ್, ದಿಲ್ಲಿ ಹೀಗೆ ಒಂದರ ಹಿಂದೆ ಒಂದರಂತೆ ಸಂಭವಿಸಿದ ಬಾಂಬ್ ಸ್ಫೋಟಗಳನ್ನು ನೆನಪು ಮಾಡಿಕೊಳ್ಳಿ. ಹಾಗೆ ಪ್ರತಿ ಬಾರಿ ಸ್ಫೋಟಗಳಾದಾಗಲೂ ಅದರ ಬೆನ್ನಲ್ಲೇ, ಇಲ್ಲವೇ ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು “ಇಂಡಿಯನ್ ಮುಜಾಹಿದ್ದೀನ್” ಎಂಬ ಹೆಸರಿನಲ್ಲಿ ಎಲ್ಲ ಪತ್ರಿಕೆ, ಪೊಲೀಸ್ ಹಾಗೂ ಸರಕಾರಿ ಕಚೇರಿಗಳಿಗೂ ಇ-ಮೇಲ್‌ಗಳು ರವಾನೆಯಾಗುತ್ತಿದ್ದವು. ಆದರೆ ಐಪಿ ಅಡ್ರೆಸ್ ಕಂಡುಹಿಡಿದು ಆ ಇ-ಮೇಲ್‌ಗಳನ್ನು ಎಲ್ಲಿಂದ ಕಳುಹಿಸಲಾಗುತ್ತಿದೆ ಎಂದು ಪತ್ತೆಹಚ್ಚಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟಕ್ಕೂ ತನಿಖೆಯನ್ನು ದಾರಿ ತಪ್ಪಿಸುವ ಸಲುವಾಗಿ ಯಾರದ್ದೋ ಅಸುರಕ್ಷಿತ “Wi-Fi”(ಕೇಬಲ್ ರಹಿತ ಇಂಟರ್‌ನೆಟ್ ವ್ಯವಸ್ಥೆ) ನೆಟ್‌ವರ್ಕ್ ಮೂಲಕ ಇ-ಮೇಲ್‌ಗಳನ್ನು ಕಳುಹಿಸಲಾಗುತ್ತಿತ್ತು. ಹಾಗಾಗಿ ಪ್ರತಿಬಾರಿ ಬಾಂಬ್‌ಸ್ಫೋಟಗಳಾದಾಗಲೂ ಲಷ್ಕರೆ ತಯ್ಬಾ, ಜೈಶೆ ಮೊಹಮದ್, ಸಿಮಿ ಎಂಬ ಹೆಸರುಗಳನ್ನೇ ಹೇಳುತ್ತಿದ್ದ ಪೊಲೀಸರಿಗೆ, ಇದ್ಯಾವುದೀ ‘ಇಂಡಿಯನ್ ಮುಜಾಹಿದ್ದೀನ್’ ಎಂದು ತಲೆಕೆರೆದುಕೊಳ್ಳುವಂತಾಗಿತ್ತು.
ಅಂತಹ ಸಂದರ್ಭದಲ್ಲಿ ಉಪಯೋಗಕ್ಕೆ ಬಂದಿದ್ದೇ ಸನ್ನಿ ವಾಘೇಲಾನ ಬುದ್ಧಿಶಕ್ತಿ.

೧೯೯೬ರಲ್ಲೇ ಅನುಮಾನಕ್ಕೆಡೆಯಾಗಿದ್ದ ‘ಸಿಮಿ’ಯನ್ನು ನಿಷೇಧ ಮಾಡಿದ ನಂತರ ವಿವಿಧ ರೂಪಗಳಲ್ಲಿ ತಲೆಯೆತ್ತು ತ್ತಿರುವ ಭಯೋತ್ಪಾದಕ ಸಂಘಟನೆಗಳ ಇತ್ತೀಚಿನ ಅವತಾ ರವೇ ‘ಇಂಡಿಯನ್ ಮುಜಾಹಿದೀನ್’. ಇದರ ಒಂದು ವೈಶಿಷ್ಟ್ಯವೆಂದರೆ ಇದುವರೆಗೂ ದೇಶದ್ರೋಹಿಗಳು ಬಾಂಬ್ ಸ್ಫೋಟಿಸಿ ಪರಾರಿಯಾಗುತ್ತಿದ್ದರು, ಇಲ್ಲವೇ ತಲೆಮರೆಸಿಕೊಳ್ಳುತ್ತಿದ್ದರು. ಸ್ಫೋಟಕ್ಕೆ ಕಾರಣ ಯಾರು ಎಂಬುದರ ಸುಳಿವೇ ಸಿಗುತ್ತಿರಲಿಲ್ಲ. ಹಾಗಾಗಿ ನಮ್ಮ ಪೊಲೀಸರು ಹಾಗೂ ಗೃಹ ಇಲಾಖೆ ಸಿದ್ಧಸೂತ್ರವೊಂದನ್ನು ಇಟ್ಟುಕೊಂಡಿತ್ತು. ‘ಲಷ್ಕರೆ, ಜೈಶೆ’ ಎಂದು ಬಾಯಿಗೆ ಬಂದ ಒಂದು ಹೆಸರು ಹೇಳಿ ಆರೋಪ ಹೊರಿಸಿ ಬಿಡುತ್ತಿತ್ತು. ಅದನ್ನು ಕಾಲಾಂತರದಲ್ಲಿ ಜನರೂ ಮರೆಯುತ್ತಿದ್ದರು, ತನಿಖೆಯಿಂದಲೂ ಏನೂ ಸಾಬೀತಾಗುತ್ತಿರಲಿಲ್ಲ. ಮತ್ತೆ ಬಾಂಬ್ ಸ್ಫೋಟವಾದ ಕೂಡಲೇ ಅದೇ ಹೆಸರು, ಅದೇ ಆರೋಪಗಳನ್ನು ಪುನರುಚ್ಚರಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ತಲೆಯೆತ್ತಿರುವ ‘ಇಂಡಿಯನ್ ಮುಜಾಹಿದೀನ್’ ಮಾತ್ರ ತೀರಾ ಭಿನ್ನ ಕಾರ್ಯತಂತ್ರ ಅನುಸರಿಸುತ್ತಿದೆ. ಅದಕ್ಕೆ ಪ್ರಚಾರದ ಗೀಳು ಅಂಟಿಕೊಂಡಿದೆ. ಜನರನ್ನು ಭಯಭೀತಗೊಳಿಸುವ ಉದ್ದೇಶವನ್ನೂ ಹೊಂದಿದೆ. ಹಾಗಾಗಿ ಸ್ಫೋಟ ನಡೆಯುವುದಕ್ಕಿಂತ ಕೆಲವೇ ನಿಮಿಷ, ಸೆಕೆಂಡ್‌ಗಳ ಮೊದಲು ಇ-ಮೇಲ್ ಕಳುಹಿಸಿ ಎಲ್ಲಿ ಬಾಂಬ್ ಸ್ಫೋಟಿಸಲಿದೆ ಎಂಬುದರ ಸುಳಿವು ನೀಡುತ್ತಿತ್ತು. ಸ್ಫೋಟದ ನಂತರ ತಾನೇ ಜವಾಬ್ದಾರ ಎಂದು ಹೇಳಿಕೊಳ್ಳುತ್ತಿತ್ತು. ಹೀಗೆ ಪ್ರಚಾರದ ಹಿಂದೆ ಬಿದ್ದಿರುವ, ಆ ಮೂಲಕ ಜಗತ್ತಿನ ಗಮನ ಸೆಳೆಯಲು ಯತ್ನಿಸುತ್ತಿರುವ ಇಂಡಿಯನ್ ಮುಜಾಹಿದೀನ್ ತನ್ನದೇ ಆದ ಮಾಧ್ಯಮ ಕೇಂದ್ರವನ್ನು ಹೊಂದಿದೆ. ಜುಲೈ ೨೬ರಂದು ನಡೆದ ಅಹಮದಾಬಾದ್ ಸ್ಫೋಟಕ್ಕೆ ಸ್ವಲ್ಪ ಮೊದಲು ಅಂದರೆ ಸಾಯಂಕಾಲ ೬.೪೦ಕ್ಕೆ ಇ-ಮೇಲ್ ಕಳುಹಿಸಿದ್ದು ಈ ಮಾಧ್ಯಮ ಕೇಂದ್ರವೇ. ಅಂದು ‘alarbi_gujarat@yahoo.com’ ಎಂಬ ಐಡಿಯಿಂದ ಇ-ಮೇಲನ್ನು ಕಳುಹಿಸಲಾಗಿತ್ತು. ಅದರ ಐಪಿ ಅಡ್ರೆಸ್ “೨೧೦.೨೧೧.೧೩೩.೨೦೦” ಅನ್ನು ಬೆನ್ನುಹತ್ತಿ ಹೋದ ಪೊಲೀಸರು ತಲುಪಿದ್ದು ಮುಂಬೈನ ಕೆನೆತ್ ಹೇವುಡ್‌ನ ನಿವಾಸವನ್ನು. ಆದರೆ ಕೆನೆತ್ ಹೇವುಡ್ ಭಯೋತ್ಪಾದಕನೇನೂ ಆಗಿರಲಿಲ್ಲ. ಆತನ ಅಸುರಕ್ಷಿತ “Wi-Fi” ವ್ಯವಸ್ಥೆಯನ್ನು ಬಳಸಿಕೊಂಡು ಭಯೋತ್ಪಾದಕರು ಮೇಲ್ ಕಳುಹಿಸಿದ್ದರು. ಹಾಗಾಗಿ ಪೊಲೀಸರು ಚಳ್ಳೆಹಣ್ಣು ತಿನ್ನಬೇಕಾಯಿತು. ೨೦೦೮, ಜುಲೈ ೩೧ರಂದು “alarbi_gujarat@yahoo.com” ಎಂಬ ಐಡಿಯಿಂದ ಮತ್ತೆ ಟೆರರ್ ಇ-ಮೇಲ್ ಬಂತು. ಅದರ ಐಪಿ ಅಡ್ರೆಸ್ಸನ್ನು ಬೆನ್ನತ್ತಿ ಹೋದಾಗ ಬರೋಡಾ ಮೆಡಿಕಲ್ ಕಾಲೇಜಿಗೆ ಬಂದು ತಲುಪಬೇಕಾಯಿತು. ೨೦೦೮, ಆಗಸ್ಟ್ ೨೩ರಂದು “alarbi.alhindi@gmail.com”ನಿಂದ ಬಂದ ಮತ್ತೊಂದು ಇ-ಮೇಲ್‌ನ ಐಪಿ ಅಡ್ರೆಸ್ ಹುಡುಕಿಕೊಂಡು ಹೋದಾಗ ಮುಂಬೈನ ಖಾಲ್ಸಾ ಕಾಲೇಜು ಸಿಕ್ಕಿತು. ಅಂದರೆ ಭಯೋತ್ಪಾದಕರು ಯಾರದ್ದೋ “Wi-Fi” ವ್ಯವಸ್ಥೆಯ ಮೂಲಕ ಕದ್ದುಮುಚ್ಚಿ ಇ-ಮೇಲ್ ಮಾಡುತ್ತಿದ್ದರು. ಅದನ್ನು ಪತ್ತೆಹಚ್ಚಲು ಹೆಣಗುತ್ತಿದ್ದ ಗುಜರಾತ್ ಪೊಲೀ ಸರು ಮುಖ ಮಾಡಿದ್ದು ಸನ್ನಿ ವಾಘೇಲಾನತ್ತ. ಅಷ್ಟಕ್ಕೂ ಸಾಫ್ಟ್‌ವೇರ್ ಎಂಜಿನಿಯರ್‌ಗಳಂತಹ ಪ್ರತಿಭಾನ್ವಿತರ ಬುದ್ಧಿಶಕ್ತಿಯನ್ನು ಬಳಸಿಕೊಳ್ಳುತ್ತಿರುವ ಉಗ್ರರನ್ನು ಪತ್ತೆ ಹಚ್ಚುವುದು ಸುಲಭದ ಮಾತಾಗಿರಲಿಲ್ಲ. ಇಂತಹ ಜವಾಬ್ದಾರಿಯನ್ನು ಸವಾಲಾಗಿ ಸ್ವೀಕರಿಸಿದ ಸನ್ನಿ ವಾಘೇಲಾ, ತನ್ನೆಲ್ಲಾ ಜಾಣ್ಮೆಯನ್ನು ಪಣಕ್ಕಿಟ್ಟು ಶೋಧನೆ ಆರಂಭಿಸಿದ. ಭಯೋತ್ಪಾದಕರು ಯಾರದ್ದೋ “Wi-Fi” ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ದಾರಿ ತಪ್ಪಿಸುತ್ತಿದ್ದರೂ Media Access Control ಮೂಲಕ ಅವರು ಇ-ಮೇಲ್ ಕಳುಹಿಸುತ್ತಿದ್ದ ಕಂಪ್ಯೂಟರ್‌ಗಳನ್ನು ಪತ್ತೆಹಚ್ಚುವಲ್ಲಿ ಸನ್ನಿ ಸಫಲನಾದ. ಹಾಗೆ ಆತ ಕಲೆಹಾಕಿದ ಮಾಹಿತಿಯಿಂದಾಗಿಯೇ ಮೊನ್ನೆ ಅಕ್ಟೋಬರ್ ೬ರಂದು ಆಸಿಫ್ ಬಶೀರ್ ಶೇಕ್, ಮೊಹಮದ್ ಮನ್ಸೂರ್ ಅಸ್ಗರ್ ಪೀರ್‌ಭಾಯ್, ಮುಬಿನ್ ಖಾದರ್ ಶೇಕ್, ಮೊಹಮದ್ ಆತಿಕ್ ಮೊಹಮದ್ ಇಕ್ಬಾಲ್, ದಸ್ತಗಿರ್ ಫಿರೋಝ್ ಮುಜಾವರ್, ಮೊಹಮದ್ ಅಕ್ಬರ್ ಇಸ್ಮಾಯಿಲ್, ಅಹಮದ್ ಬಾವಾ ಅಬೂಬಕರ್ ಮುಂತಾದ ೧೫ ಜನರನ್ನು ನಮ್ಮ ಮಂಗಳೂರು, ಬಾಂಬೆ ಹಾಗೂ ಇತರೆಡೆಗಳಲ್ಲಿ ಪೊಲೀಸರು ಬಂಧಿಸಲು ಸಾಧ್ಯವಾಗಿದ್ದು. ಅದರಲ್ಲೂ ಇಂಡಿಯನ್ ಮುಜಾಹಿದೀನ್‌ನ ಮಾಧ್ಯಮ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಪುಣೆಯ ಮೊಹಮದ್ ಪೀರ್‌ಭಾಯ್ ಹಾಗೂ ಮುಬಿನ್ ಖಾದರ್ ಶೇಕ್‌ನನ್ನು ಬಂಧಿಸಿದ್ದಂತೂ ದೊಡ್ಡ ಸಾಧನೆಯೇ ಸರಿ. ಅದರ ಹೆಗ್ಗಳಿಕೆ ಸನ್ನಿಗೆ ಸಲ್ಲಬೇಕು.

ಇಂದು ಇಡೀ ದೇಶದ ಗಮನ ಸೆಳೆದಿರುವ ಸನ್ನಿಗೆ ಕೇವಲ ೨೧ ವರ್ಷ.

ಆತನೊಬ್ಬ ‘ಎಥಿಕಲ್ ಹ್ಯಾಕರ್’. ಆತನಿಗೆ ಹ್ಯಾಕಿಂಗ್ ಗೀಳು ಅಂಟಿಕೊಂಡಿದ್ದು ಪ್ರಥಮ ಪಿಯುಸಿಯಲ್ಲಿದ್ದಾಗ. ಒಮ್ಮೆ ಆತನ ಇ-ಮೇಲನ್ನು ಯಾರೋ ಹ್ಯಾಕ್ ಮಾಡಿ ಬಿಟ್ಟರು. ಆ ಘಟನೆಯ ನಂತರ ಹ್ಯಾಕಿಂಗ್ ಬಗ್ಗೆ ತಿಳಿದುಕೊಳ್ಳಲು ಆರಂಭಿಸಿದ ಸನ್ನಿ, ಹ್ಯಾಕಿಂಗ್ ಬಗ್ಗೆ ಆಸಕ್ತಿ ಹೊಂದಿರುವವರ ಆನ್‌ಲೈನ್ ಗುಂಪೊಂದನ್ನು ಕಟ್ಟಿಕೊಂಡ. ಅವರ ಜತೆ ಹ್ಯಾಕಿಂಗ್‌ನ ಒಳ-ಹೊರಗುಗಳ ಬಗ್ಗೆ ಚರ್ಚೆ ನಡೆಸಿದ. ಸೂಕ್ಷ್ಮಗಳನ್ನು ಅರ್ಥಮಾಡಿಕೊಂಡ. ಇ-ಮೇಲ್ ಹ್ಯಾಕಿಂಗ್ ಬಗ್ಗೆ ತಿಳಿದುಕೊಂಡ ನಂತರ, ‘ಲಾಗ್ ಆಫ್’ ಮಾಡಿದ ನಂತರವೂ ‘ಕುಕಿ’ಗಳ ಸಹಾಯದಿಂದ ಇತರರ ಆರ್ಕಟ್ ಐಡಿಯೊಳಕ್ಕೆ ಹೊಕ್ಕುವುದು ಹಾಗೂ ಖೊಟ್ಟಿ ಎಸ್ಸೆಮ್ಮೆಸ್ (SMS Spoofing)ನತ್ತ ಆತನ ಆಸಕ್ತಿ ತಿರುಗಿತು. ಯಾರದ್ದೋ ನಂಬರ್‌ನಿಂದ ಇನ್ಯಾರಿಗೋ ಎಸ್ಸೆಮ್ಮೆಸ್ ಕಳುಹಿಸುವ ವಿದ್ಯೆಯನ್ನೂ ಕರಗತ ಮಾಡಿಕೊಂಡ. ಆದರೆ ಅದನ್ನು ಪ್ರಯೋಗಿಸಿದ್ದು ಯಾರ ಮೇಲೆ ಗೊತ್ತೆ? ಒಮ್ಮೆ ಕಾಲೇಜಿನಲ್ಲಿ ಇಂಟರನಲ್ ಪರೀಕ್ಷೆ ಇತ್ತು. ಆದರೆ ಸನ್ನಿ ಓದಿಕೊಂಡಿರಲಿಲ್ಲ. ಹಾಗಾಗಿ ಪರೀಕ್ಷೆ ಬರೆಯುವ ಧೈರ್ಯವಿರಲಿಲ್ಲ. ಹಾಗಂತ ಚಕ್ಕರ್ ಹೊಡೆಯುವಂತೆಯೂ ಇರಲಿಲ್ಲ. ಆತ ವ್ಯಾಸಂಗ ಮಾಡುತ್ತಿದ್ದ ‘ನಿರ್ಮಾ’ ಕಾಲೇಜಿನಲ್ಲಿ ಕಟ್ಟುನಿಟ್ಟಾದ ನಿಯಮಗಳಿದ್ದವು. ಹಾಗಾಗಿ ತಾನು ಕಲಿತಿದ್ದ SMS Spoofing ವಿದ್ಯೆಯನ್ನು ಕಾಲೇಜಿನ ಪ್ರಾಂಶುಪಾಲರ ಮೇಲೆಯೇ ಪ್ರಯೋಗಿಸಲು ಮುಂದಾದ! “ಕಾರಣಾಂತರದಿಂದ ಇಂಟರ್ನಲ್ ಪರೀಕ್ಷೆ ಯನ್ನು ಮುಂದೂಡಲಾಗಿದೆ” ಎಂಬ ಸಂದೇಶವನ್ನು ಪ್ರಾಂಶುಪಾಲರ ನಂಬರ್‌ನಿಂದ ಎಲ್ಲ ವಿದ್ಯಾರ್ಥಿಗಳಿಗೂ ಕಳುಹಿಸಿದ ಸನ್ನಿ, ವಿದ್ಯಾರ್ಥಿಗಳು ಗೈರು ಹಾಜರಾಗುವಂತೆ ಮಾಡಿ ಪರೀಕ್ಷೆಯೇ ನಡೆಯದಂತೆ ಮಾಡಿದ್ದ! ಇಂತಹ ಫಟಿಂಗತನವನ್ನು ಆತ ಮಾಡಿರಬಹುದು. ಆದರೆ ಸನ್ನಿಗೆ ದೇಶದ ಬಗ್ಗೆ ಅಪಾರ ಕಾಳಜಿ ಇದೆ. ೨೦೦೮ನೇ ಸಾಲಿನಲ್ಲಿ ಗುಜರಾತ್‌ನ ‘ನಿರ್ಮಾ’ ಕಾಲೇಜಿನಿಂದ ಎಂಜಿನಿಯರಿಂಗ್ ಪದವಿ ಪಡೆದು ಹೊರಬಂದಿರುವ ಸನ್ನಿಗೆ ಭಾರೀ ಸಂಬಳ-ಸವಲತ್ತನ್ನು ನೀಡುವ ಹಲವಾರು ಉದ್ಯೋಗಗಳು ತಾವಾಗಿಯೇ ಅರಸಿಕೊಂಡು ಬಂದಿದ್ದವು. ಆದರೆ ಆತನಿಗೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಆಸೆಯಿತ್ತು. ಆ ಆಸೆ ಈಡೇರದಿದ್ದರೇನಂತೆ, ಅಹಮದಾಬಾದಿನಲ್ಲಿ “ಸೈಬರ್ ಕ್ರೈಮ್ ಸೆಲ್” ಸ್ಥಾಪನೆ ಮಾಡಿರುವ ಆತ, ಸೈಬರ್ ಕಳ್ಳರನ್ನು ಹುಡುಕಿ ಕೊಡುತ್ತಿದ್ದಾನೆ. ಅಮೆರಿಕ ಮೂಲದ ಐಟಿ ಕಂಪನಿ ‘ನೋಬೆಲ್ ವೆಂಚರ್‍ಸ್’ನಲ್ಲಿ ನಡೆದ ಅತಿದೊಡ್ಡ ಡೇಟಾ ಕಳವು ಪ್ರಕರಣದ ರೂವಾರಿಯನ್ನು ಪತ್ತೆಹಚ್ಚಿದ ಸನ್ನಿ, ‘ಇ-ಬೇ’ ಕ್ರೆಡಿಟ್ ಕಾರ್ಡ್ ಮೋಸ, ಖೊಟ್ಟಿ ಎಸ್ಸೆಮ್ಮೆಸ್ ಪ್ರಕರಣ, ಉದ್ಯಮ ವಲಯದಲ್ಲಿನ ಕಡತಗಳ ಕಳ್ಳತನ, ಆರ್ಕಟ್‌ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸುವುದು ಮುಂತಾದ ೧೬ ಸೈಬರ್ ಅಪರಾಧಗಳನ್ನು ಇದುವರೆಗೂ ಶೋಧಿಸಿದ್ದಾನೆ. ಟೆಕ್ ಹ್ಯಾಕಿಂಗ್, ಮೊಬೈಲ್ ಸೆಕ್ಯುರಿಟಿ, ವೆಬ್ ಸೆಕ್ಯುರಿಟಿ, ಸೈಬರ್ ಫಾರೆನ್ಸಿಕ್ಸ್ ಮುಂತಾದ ವಿಷಯಗಳ ಕುರಿತು ದೇಶಾದ್ಯಂತ ೩೦ ಉಪನ್ಯಾಸಗಳನ್ನು ನೀಡಿದ್ದಾನೆ. ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್ ಹಾಗೂ ಮುಂಬೈ ಭಯೋತ್ಪಾದನಾ ನಿಗ್ರಹ ದಳಗಳಿಗೆ ಸಹಾಯ ನೀಡುತ್ತಿರುವ ಆತ, ಮೊಹಮದ್ ಪೀರ್‌ಭಾಯ್‌ನಂತಹ ಪ್ರಚಂಡ ದೇಶದ್ರೋಹಿಗಳನ್ನು ಪತ್ತೆಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಹಾಗಾಗಿ ಆತನ ಜೀವಕ್ಕೂ ಅಪಾಯ ಎದುರಾಗಿದೆ. ಆತ ಮಾಡುತ್ತಿರುವ ಕೆಲಸದ ಬಗ್ಗೆ ಕುಟುಂಬ ವರ್ಗಕ್ಕೆ ತೀವ್ರ ಅಸಮಾಧಾನವಿದೆ. ಆದರೆ ಸನ್ನಿ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಅಹಮದಾಬಾದ್ ಕ್ರೈಮ್ ಬ್ರ್ಯಾಂಚ್‌ಗೆ ತನ್ನೆಲ್ಲಾ ಪ್ರತಿಭೆಯನ್ನು ಧಾರೆ ಎರೆಯುತ್ತಿದ್ದಾನೆ, ಜೀವ ಬೆದರಿಕೆಯನ್ನೂ ಲೆಕ್ಕಿಸದೆ ಉಗ್ರರ ಜಾಲವನ್ನು ಪತ್ತೆ ಹಚ್ಚಿ ನಾಶಪಡಿಸಲು ಸಹಾಯ ಮಾಡುತ್ತಿದ್ದಾನೆ. ಆತನ ಸೇವೆಯನ್ನು ಗುರುತಿಸಿ ‘ರಾಜೀವ್ ಗಾಂಧಿ ಯುವ ಸಾಧಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಮುಸ್ಲಿಮ್ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಅನಕ್ಷರತೆ ಮತ್ತು ನಿರುದ್ಯೋಗವೇ ಕಾರಣ ಎಂದು ಹಿಂದೆಲ್ಲಾ ಸಬೂಬು ಹೇಳುತ್ತಿದ್ದರು. ಅನರಕ್ಷತೆ ಮತ್ತು ನಿರುದ್ಯೋಗವೆಂಬುದು ಮುಸ್ಲಿಮರನ್ನು ಮಾತ್ರ ಕಾಡುತ್ತಿದೆ ಎಂಬಂತೆ ಬೊಬ್ಬೆ ಹಾಕುತ್ತಿದ್ದರು. ಬಡತನ ಮತ್ತು ಅನಕ್ಷರತೆಗಳು ಭಯೋತ್ಪಾದನೆಗೆ ಕಾರಣ ಎನ್ನುವುದಾದರೆ ಬಡತನರೇಖೆಗಿಂತ ಕೆಳಗಿರುವ ಈ ದೇಶದ ಶೇ. ೩೦ರಷ್ಟು ಭಾರತೀಯರೂ ಭಯೋತ್ಪಾದಕರಾಗಿರಬೇಕಿತ್ತು ಎಂಬ ಕನಿಷ್ಠ eನವೂ ಇಲ್ಲದವರಂತೆ ಮುಸ್ಲಿಮ್ ಭಯೋತ್ಪಾದಕರನ್ನು ಸಮರ್ಥನೆ ಮಾಡುತ್ತಿದ್ದರು. ಆದರೆ ಈಗ ಸತ್ಯ ಬೆತ್ತಲಾಗಿ ನಿಂತಿದೆ. ಇಂದು ದೇಶದ್ರೋಹಿ ಕೃತ್ಯಗಳಲ್ಲಿ ತೊಡಗುತ್ತಿರುವ ಮುಸ್ಲಿಮ್ ಯುವಕರು ಬಡವರೂ ಅಲ್ಲ, ಅನಕ್ಷರಸ್ಥರೂ ಅಲ್ಲ. ‘ಇಂಡಿಯನ್ ಮುಜಾಹಿದೀನ್’ನ ಮಾಧ್ಯಮ ಕೇಂದ್ರವನ್ನು ನಿರ್ವಹಣೆ ಮಾಡುತ್ತಿದ್ದ ಪುಣೆಯ ಮೊಹಮದ್ ಅಸ್ಗರ್ ಪೀರ್ ಭಾಯ್ ‘ಯಾಹೂ ಇನ್‌ಕಾರ್ಪೊರೇಟೆಡ್’ನ ಉದ್ಯೋಗಿ ಯಾಗಿದ್ದ. ವರ್ಷಕ್ಕೆ ೧೯ ಲಕ್ಷ ಸಂಬಳ ಎಣಿಸುತ್ತಿದ್ದ. ಆತನಿಗೆ ಸಹಾಯ ನೀಡುತ್ತಿದ್ದ ಮುಬಿನ್ ಖಾದರ್ ಶೇಕ್ ಕೂಡ ಸಾಫ್ಟ್‌ವೇರ್ ಎಂಜಿನಿಯರ್. ಶ್ರೀಮಂತ ಕುಟುಂಬ ದಿಂದಲೇ ಬಂದವನಾಗಿದ್ದಾನೆ. ಹೀಗೆ ಧರ್ಮದ ಹೆಸರಿನಲ್ಲಿ ಅನ್ನ ನೀಡುತ್ತಿರುವ, ವಿದ್ಯಾದಾನ ಮಾಡಿದ ದೇಶವನ್ನೇ ನಾಶ ಮಾಡಲು ಹೊರಟಿರುವ ಕೃತಘ್ನರು ಹೆಚ್ಚುತ್ತಿರುವ ಸಂದರ್ಭದಲ್ಲಿ ಸಂಬಳ-ಸವಲತ್ತಿನ ಆಸೆ ಬಿಟ್ಟು, ಅಪಾಯವನ್ನು ಮೈಮೇಲೆ ಎಳೆದುಕೊಂಡು ಪೊಲೀಸರಿಗೆ ಸಹಾಯ ನೀಡುತ್ತಿರುವ ಸನ್ನಿ ವಾಘೇಲಾನ ಬಗ್ಗೆ ನಿಜಕ್ಕೂ ಹೆಮ್ಮೆಯಾಗುತ್ತದೆ ಅಲ್ಲವೆ?

Tuesday, July 14, 2009

ಐದೂವರೆ ಲಕ್ಷ ಎಂಜಿನಿಯರ್‌ಗಳಲ್ಲಿ ಒಬ್ಬನೂ ಏಕೆ ಗೇಟ್ಸ್, ಜಾಬ್ಸ್, ಡೆಲ್ ಆಗಲಿಲ್ಲ?

ಗೆಳೆಯರೇ ಮತ್ತು ಗೆಳತಿಯರೆ,
ನಾನು ಪ್ರತಾಪ್ ಸಿಂಹ ಅವರ ಒಬ್ಬ ಕಟ್ಟಾ ಅಭಿಮಾನಿ. ಇವರು ಸಾಫ್ಟ್ವೇರ್ ಇಂಜಿನಿಯರ್ ಗಳ ಬಗ್ಗೆ ಬರೆದ ಒಂದು ಲೇಖನ ನನಗೆ ತುಂಬಾ ಇಷ್ಟ ಆಯಿತು. ಅದನ್ನೇ ನಿಮ್ಮ ಮುಂದೆ ಇಡುತ್ತಿದ್ದೇನೆ. ಓದಿ ನಿಮ್ಮ ಅಭಿಪ್ರಾಯಗಳನ್ನು ನನಗೆ ಅಥವಾ ಪ್ರತಾಪ್ ಸಿಂಹ ಅವರಿಗೆ ತಿಳಿಸಿ. ಅವರ ಇಮೇಲ್ ವಿಳಾಸ : pratap_deva@yahoo.co.in

ಅವತ್ತು ಭಾರತೀಯ ಬಾಹ್ಯಾಕಾಶ ವಿಜಾನದ ಪಿತಾಮಹ ವಿಕ್ರಂ ಸಾರಾಭಾಯಿ ಅವರಿಂದ ಪ್ರೇರಿತರಾಗಿದ್ದ ಸತೀಶ್ ಧವನ್, ಅಬ್ದುಲ್ ಕಲಾಂ ಮುಂತಾದ ವಿಜಾನಿಗಳು ಒಂದು ಜಗುಲಿಯಂತಹ ಜಾಗದಲ್ಲಿ ಕುಳಿತು ದೇಶದ ಮೊದಲ ಉಪಗ್ರಹವಾದ ‘ಆರ್ಯಭಟ’ವನ್ನು Assemble ಮಾಡಿದ್ದರು. ಅದಕ್ಕೂ ಮೊದಲು ಒಂದೊಂದು ಬಿಡಿ ಭಾಗಗಳನ್ನೂ ಸೈಕಲ್ ಮೇಲೆ ತಂದಿದ್ದರು. ಎಲ್ಲ ಭಾಗಗಳನ್ನೂ ಜೋಡಿಸಿದ ನಂತರ ಸೋವಿಯತ್ ರಷ್ಯಾಕ್ಕೆ ತೆಗೆದುಕೊಂಡು ಹೋಗಿ ಅಲ್ಲಿನ ಬೈಕನೂರ್ ಉಡಾವಣಾ ಕೇಂದ್ರದಿಂದ 1975ರಲ್ಲಿ ಭೂಸ್ಥಿರ ಕಕ್ಷೆಯಲ್ಲಿ ಸ್ಥಿರಗೊಳಿಸಿದ್ದರು.

ಆನಂತರ ರೂಪುಗೊಂಡ ‘ಭಾಸ್ಕರ-1’ ‘ಭಾಸ್ಕರ-2’ಗಳನ್ನೂ ರಷ್ಯಾದ ಬಾಹ್ಯಾಕಾಶ ಕೇಂದ್ರದಿಂದಲೇ ಆಗಸಕ್ಕೆ ಉಡಾವಣೆ ಮಾಡಬೇಕಾಗಿ ಬಂತು. ಅಷ್ಟಕ್ಕೂ ಅಮೆರಿಕ, ರಷ್ಯಾ, ಫ್ರಾನ್ಸ್ ಮುಂತಾದ ಮೂರೇ ರಾಷ್ಟ್ರಗಳ ಬಳಿ ಮಾತ್ರ ಅಂತಹ ಉಡಾವಣಾ ತಂತ್ರeನ ಹಾಗೂ ವಾಹಕವಿತ್ತು. ಆದರೇನಂತೆ ಮೂರನೇ ಉಪಗ್ರಹವಾದ ‘ರೋಹಿಣಿ’ಯನ್ನು ಸ್ವಂತ ಉಡಾವಣಾ ವಾಹಕದ ಮೂಲಕ ಲಾಂಚ್ ಮಾಡುವ ಸಾಹಸಕ್ಕೆ ಕೈಹಾಕಿತು ಇಸ್ರೊ(ISRO). ಅದೇ SLV(Satellite Launch Vehicle). ಇಸ್ರೊ ತೋರಿದ ಧೈರ್ಯವೇನೋ ಮೆಚ್ಚುವಂಥದ್ದಾಗಿತ್ತು. ಆದರೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ನಮ್ಮ ಎಸ್‌ಎಲ್‌ವಿಗಳು ಆಗಸಕ್ಕೆ ನೆಗೆದ ಕೆಲವೇ ಕ್ಷಣಗಳಲ್ಲಿ ಉಪಗ್ರಹ ಸಮೇತ ಬಂಗಾಳಕೊಲ್ಲಿಗೆ ಬೀಳಲಾರಂಭಿಸಿದವು. ಅವೇನು ಒಂದೆರಡು ವೈಫಲ್ಯಗಳಲ್ಲ, ಹಾರಿಸಿದವುಗಳೆಲ್ಲ ಮತ್ತೆ ಕೆಳಕ್ಕೇ ಬರುತ್ತಿದ್ದವು. ಹಾಗಾಗಿ SLVಗಳನ್ನು Sea Loving Vehiclesಎಂದು ಜನ ಜರಿಯಲಾರಂಭಿಸಿದರು. ಮತ್ತೆ ಕೆಲವರು ಬಜಾಜ್ ಸ್ಕೂಟರ್‌ನಂತೆ ಒಂದು ಕಡೆ ವಾಲಿಸಿ ಸ್ಟಾರ್ಟ್ ಮಾಡಿದರೆ ಆಗಸಕ್ಕೆ ನೆಗೆಯಬಹುದೇನೋ ಎಂದು ಗೇಲಿ ಮಾಡಹತ್ತಿದರು. ಇತ್ತ ವ್ಯಂಗ್ಯಚಿತ್ರಕಾರರು ತಲೆಕೆಳಗಾದ (Upside down) ರಾಕೆಟ್‌ನ ಕಾರ್ಟೂನ್ ಬರೆದು ಕಿಚಾಯಿಸಿದರೆ, ಪತ್ರಕರ್ತರು “20 ಕೋಟಿ ಸಮುದ್ರದ ಪಾಲು”, “30 ಕೋಟಿ ಬಂಗಾಳ ಕೊಲ್ಲಿಗೆ”, “40 ಕೋಟಿ ನೀರಿಗೆ” ಎಂದು ಥರಥರಹದ ತಲೆಬರಹ ಕೊಟ್ಟು ಬರೆಯಲಾರಂಭಿಸಿದರು

ಅವು ಎಂಥವರೂ ಆತ್ಮಸ್ಥೈರ್ಯ ಕಳೆದುಕೊಳ್ಳುವಂತಹ ಸೋಲುಗಳಾಗಿದ್ದವು.

ಆದರೂ ಇಸ್ರೊ ತನ್ನ ಪ್ರಯತ್ನವನ್ನು ಬಿಡಲಿಲ್ಲ. ಒಂದೆಡೆ ಉಪಗ್ರಹ ತಯಾರಿಕೆಗಿಂತ ಉಡಾವಣೆಗೇ ಹೆಚ್ಚು ದುಡ್ಡು ಕೊಟ್ಟು ರಷ್ಯಾದ ಬೈಕನೂರ್ ಹಾಗೂ ಫ್ರಾನ್ಸ್‌ನ ‘ಫ್ರೆಂಚ್ ಗಯಾನಾ’ದಿಂದ ಇನ್ಸಾಟ್ ಹೆಸರಿನ ಸಾವಿರಾರು ಕೆಜಿ ತೂಗುವ ಬೃಹತ್ ಉಪಗ್ರಹಗಳನ್ನು ಲಾಂಚ್ ಮಾಡುತ್ತ, ಮತ್ತೊಂದೆಡೆ ಸಣ್ಣ ಗಾತ್ರದ ಉಪಗ್ರಹಗಳನ್ನು ಸುಮಾರು 350 ಅಥವಾ 800ಕಿ.ಮೀ.ನಂತಹ ಕಡಿಮೆ ಎತ್ತರದ ಭೂಕಕ್ಷೆಗೆ ನಮ್ಮ ಎಸ್‌ಎಲ್‌ವಿಗಳ ಮೂಲಕವೇ ಉಡಾಯಿಸುವ ಪ್ರಯತ್ನವನ್ನು ಜಾರಿಯಲ್ಲಿಟ್ಟುಕೊಂಡಿತು. 1990ರ ವೇಳೆಗೆ ನಮ್ಮ ಎಸ್‌ಎಲ್‌ವಿಗಳು ವಿಶ್ವಾಸವಿಟ್ಟು ಉಡಾವಣೆ ಮಾಡಬಹುದಾದಂತಹ ಲಾಂಚ್ ವೆಹಿಕಲ್‌ಗಳಾಗಿ ರೂಪುಗೊಂಡವು. ಇಂತಹ ಯಶಸ್ಸಿನಿಂದ ಉತ್ತೇಜನಗೊಂಡ ಇಸ್ರೊ, ಎಎಸ್‌ಎಲ್‌ವಿ, ಪಿಎಸ್‌ಎಲ್‌ವಿಯನ್ನು ದಾಟಿ ಜಿಎಸ್‌ಎಲ್‌ವಿ(ಜಿಯೋಸಿಂಕ್ರೊನಸ್ ಸೆಟಲೈಟ್ ಲಾಂಚ್ ವೆಹಿಕಲ್) ಅಂದರೆ 26 ಸಾವಿರ ಕಿ.ಮೀ. ದೂರದ ಭೂಸ್ಥಿರ ಕಕ್ಷೆಗೆ ಸಾವಿರಾರು ಕೆಜಿ ತೂಕದ ಉಪಗ್ರಹಗಳನ್ನು ಕೊಂಡೊಯ್ದು ಸ್ಥಿರಗೊಳಿಸುವ ತಂತ್ರeನದ ಅಭಿವೃದ್ಧಿಗೆ ಮುಂದಾಯಿತು. ಈ ಹಿನ್ನೆಲೆಯಲ್ಲಿ ರಷ್ಯಾ ಜತೆ ಒಪ್ಪಂದವನ್ನೂ ಮಾಡಿಕೊಂಡಿತು. ಆದರೆ 1998ರಲ್ಲಿ ಅಮೆರಿಕ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಕ್ರಯೋಜೆನಿಕ್ ಎಂಜಿನ್ ಹಾಗೂ ತಂತ್ರeನಗಳೆರಡನ್ನೂ ವರ್ಗಾಯಿಸುವುದಾಗಿ ಮಾಡಿದ್ದ ವಾಗ್ದಾನದಿಂದ ರಷ್ಯಾ ಹಿಂದೆ ಸರಿಯಬೇಕಾಯಿತು. ಆದರೆ ಇಸ್ರೊ ಧೃತಿಗೆಡಲಿಲ್ಲ.

ಇತ್ತ ೧೯೭೭ರಲ್ಲಿ ಜನತಾ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಅಮೆರಿಕದ ಕಂಪನಿಗಳಾದ ಕೋಕಾ ಕೋಲಾ ಹಾಗೂ ಐಬಿಎಂ ಅನ್ನು ಭಾರತದಿಂದಲೇ ಓಡಿಸಿದರು. ಮುನಿಸಿಕೊಂಡ ಅಮೆರಿಕ ಕಂಪ್ಯೂಟರ್ ಚಿಪ್‌ಗಳನ್ನು ನಾವು ಆಮದು ಮಾಡಿಕೊಳ್ಳುವುದರ ಮೇಲೆಯೇ ನಿರ್ಬಂಧ ಹೇರಿತು, ನಮ್ಮ ಸೆಟಲೈಟ್‌ಗಳಿಗೆ ಬೇಕಾದ ಟ್ರಾನ್ಸ್‌ಪಾಂಡರ್‌ಗಳನ್ನು ಆಮದು ಮಾಡಿಕೊಳ್ಳಲಾಗದಂತಹ ಪರಿಸ್ಥಿತಿಯನ್ನು ಸೃಷ್ಟಿಸಿತು, ತನ್ನ ‘ಕ್ಲಾಸಿಕ್’ ಸೂಪರ್ ಕಂಪ್ಯೂಟರ್ ಅನ್ನು ಕೊಡುವುದಿಲ್ಲ ಅಂದಿತು. ಸಂಕಷ್ಟಕ್ಕೆ ಸಿಲುಕಿದ ಸರಕಾರ ಪುಣೆಯಲ್ಲಿ ‘ಸಿ-ಡಾಕ್’(ಸೆಂಟರ್ ಫಾರ್ ಡೆವೆಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್) ಎಂಬ ಹೆಸರಿನ ಸಂಸ್ಥೆಯನ್ನು ಸ್ಥಾಪನೆ ಮಾಡಿ, ಸಾಫ್ಟ್‌ವೇರ್ ಅಭಿವೃದ್ಧಿಗೆ ಕೈಹಾಕಿತು. ಅಮೆರಿಕ ಕೊಡದಿದ್ದರೇನಂತೆ, ನಮ್ಮ ವಿಜಾನಿಗಳೇ ‘ಪರಮ್’ ಎಂಬ ಮೊಟ್ಟಮೊದಲ ಸೂಪರ್ ಕಂಪ್ಯೂಟರನ್ನು ತಯಾರಿಸಿದರು. ಅದಕ್ಕೂ ಮೊದಲು ಆರಂಭವಾಗಿದ್ದ ‘ಸಿ-ಡಾಟ್’ (ಸೆಂಟರ್ ಫಾರ್ ಡೆವೆಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್) ಎಂಬ ಮತ್ತೊಂದು ಸಂಸ್ಥೆ, ಟೆಲಿಫೋನ್ ಎಕ್ಸ್‌ಚೇಂಜ್, ರೂರಲ್ ಎಕ್ಸ್‌ಚೇಂಜ್‌ಗಳನ್ನು ತಯಾರಿಸುವ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಅಮೋಘ ಬದಲಾವಣೆಗೆ ನಾಂದಿ ಹಾಡಿತ್ತು. ಹೀಗಾಗಿ ನಮ್ಮ ಸಂಪರ್ಕ ತಂತ್ರeನ ಗಮನಾರ್ಹ ಪ್ರಗತಿ ತೋರಿತು. ‘ಸಿ-ಡಾಟ್’ನಿಂದಾಗಿ ವಿಎಸ್‌ಎನ್‌ಎಲ್, ಎಂಟಿಎನ್‌ಎಲ್, ಬಿಎಸ್‌ಎನ್‌ಎಲ್‌ಗಳಂತ ‘ಗೇಟ್‌ವೇ’ ಸಿದ್ಧಗೊಂಡರೆ, ವಿಶ್ವದರ್ಜೆಯ ಜಿಎಸ್‌ಎಲ್‌ವಿಗಳನ್ನು ತಯಾರು ಮಾಡಿದ ಇಸ್ರೊ, ಸಂಪರ್ಕ ಕ್ರಾಂತಿಗೆ ಅಗತ್ಯವಾದ ಕೆಲಸ ಮಾಡಿತು.

ಇತ್ತೀಚೆಗೆ ಇಸ್ರೊ ಹೊಸದೊಂದು ದಾಖಲೆ ನಿರ್ಮಿಸಿದೆ!

ಕಳೆದ ವರ್ಷದ ಏಪ್ರಿಲ್‌ನಲ್ಲಿ ವಿಶ್ವದ ವಿವಿಧ ರಾಷ್ಟ್ರಗಳ ೮ ಉಪಗ್ರಹಗಳನ್ನು ಒಮ್ಮೆಲೇ, ಒಂದೇ ಉಡಾವಣಾ ವಾಹಕದಿಂದ ಯಶಸ್ವಿಯಾಗಿ ಲಾಂಚ್ ಮಾಡಿದ್ದು, ಜಗತ್ತಿನ ಯಾವ ರಾಷ್ಟ್ರವೂ ಇಂತಹ ಸಾಹಸ ಮಾಡಿಲ್ಲ. ಇವತ್ತು ನೀವು ಕೈಯಲ್ಲೆತ್ತಿಕೊಂಡು ‘ಹಲೋ’ ಎನ್ನುತ್ತೀರಲ್ಲಾ ಆ ಮೊಬೈಲ್ ಕೊಟ್ಟಿದ್ದು ಸಾಫ್ಟ್‌ವೇರ್ ಕ್ಷೇತ್ರವಾಗಿದ್ದರೂ ನಿರ್ಜೀವ ಮೊಬೈಲ್‌ಗೆ ಜೀವ ತುಂಬಿರುವುದು ಇಸ್ರೋದ ಉಪಗ್ರಹಗಳು. ನಮ್ಮ ಸಾಫ್ಟ್‌ವೇರ್ ಎಂಜಿನಿಯರ್‌ಗಳು ಬೆಂಗಳೂರಿನಲ್ಲಿ ಕುಳಿತು ಅಮೆರಿಕ, ಬ್ರಿಟನ್, ಜರ್ಮನಿಯ ಕೆಲಸ ಮಾಡಲು ಸಾಧ್ಯವಾಗಿದ್ದರೆ ಅದರ ಹಿಂದೆ ಇಸ್ರೊ ಮತ್ತು ಸಿ-ಡಾಟ್‌ಗಳ ಪರಿಶ್ರಮವಿದೆ. ಸಂಪರ್ಕವೇ ಇಲ್ಲ ಅಂದರೆ ಸಾಫ್ಟ್‌ವೇರ್ ಕ್ಷೇತ್ರ ತಲೆಯೆತ್ತುವುದಕ್ಕಾದರೂ ಹೇಗೆ ಸಾಧ್ಯವಾಗುತ್ತಿತ್ತು?

ಇಂದು ಅಭಿವೃದ್ಧಿಶೀಲ ರಾಷ್ಟ್ರಗಳು ಇಸ್ರೋದ ಉಪಗ್ರಹಗಳನ್ನು, ಟ್ರಾನ್ಸ್‌ಪಾಂಡರ್‌ಗಳನ್ನು ಖರೀದಿ ಮಾಡುತ್ತಿವೆ, ಅವುಗಳ ಉಡಾ ವಣೆಗೂ ಇಸ್ರೋದ ಬಳಿಗೇ ಬರುತ್ತಿವೆ, ಯಶಸ್ವಿ ಚಂದ್ರಯಾನದ ಮೂಲಕ ಬಾಹ್ಯಾಕಾಶ ತಂತ್ರeನದ ವಿಷಯದಲ್ಲಿ ನಾವು ಯಾರಿಗೂ ಕಡಿಮೆಯಲ್ಲ ಎಂದು ಸಾಬೀತುಪಡಿಸಿದೆ. ಅಂದು ಐಎಂಎಫ್, ವರ್ಲ್ಡ್ ಬ್ಯಾಂಕ್, ಎಡಿಬಿಯಿಂದ ಸಾಲತೆಗೆದುಕೊಂಡು ಬರುತ್ತಿದ್ದ ಕಾಲದಲ್ಲಿ ಸರಕಾರ ಕೊಡುತ್ತಿದ್ದ ಪುಡಿಗಾಸಿನಲ್ಲಿ ಕಷ್ಟಪಟ್ಟು, ಆರಂಭಿಕ ಸೋಲಿನ ನೋವು, ಅವಮಾನ ನುಂಗಿಕೊಂಡು ಮೇಲೆ ಬಂದ ಇಸ್ರೊ ಇಂದು ಜಗತ್ತಿನ ಅತ್ಯಂತ ಮುಂದುವರಿದ ರಾಷ್ಟ್ರಗಳು ಭಯಪಟ್ಟುಕೊಳ್ಳುವಂತೆ ಮಾಡಿದೆ. “ಇಸ್ರೊ ನೋಡಿ ಪಾಠ ಕಲಿಯಿರಿ” ಎಂದು ಅಮೆರಿಕದ “ಏರೋಸ್ಪೇಸ್ ಇಂಡಸ್ಟ್ರೀಸ್ ಅಸೋಷಿಯೇಶನ್”(AIA), ಒಮಾಮ ಅವರಿಗೆ ಕಿವಿಮಾತು ಹೇಳಿದೆ. ಅಂದರೆ ಜಗತ್ತಿನ ಏಕೈಕ ಸೂಪರ್ ಪವರ್ ರಾಷ್ಟ್ರ, ‘ಇಸ್ರೊ’ ಸಾಧನೆ ಬಗ್ಗೆ ಹೆದರಿಕೊಂಡಿದೆ. ಆದರೆ ಅದೇ ದೇಶದ ಅಧ್ಯಕ್ಷ ಒಬಾಮ ಬುಧವಾರ 787 ಶತಕೋಟಿ ಡಾಲರ್ “stimulus plan” ಘೋಷಣೆ ಮಾಡಿದ ಕೂಡಲೇ ಭಾರತದ ಸಾಫ್ಟ್‌ವೇರ್ ಕ್ಷೇತ್ರ ಥರಥರ ನಡುಗಲು ಆರಂಭಿಸಿದೆ!

ಏಕೆ?

ಇಸ್ರೊ, ಡಿಆರ್‌ಡಿಓ, ಸಿ-ಡಾಟ್, ಡಾಕ್ ನಂತಹ ಸರಕಾರಿ ಸಂಸ್ಥೆಗಳೇ ಹೆದರದ ಅಮೆರಿಕಕ್ಕೆ ಬರೀ ಬುದ್ಧಿವಂತರೇ ತುಂಬಿರುವ ನಮ್ಮ ಸಾಫ್ಟ್‌ವೇರ್ ಕ್ಷೇತ್ರವೇಕೆ ಬೆಚ್ಚಿಬೀಳುತ್ತಿದೆ? ಹಾಲಿವುಡ್ ನಟ ಆರ್ನಾಲ್ಡ್ ಸ್ವಾಝನಗರ್ 2006ರಲ್ಲಿ ಕ್ಯಾಲಿಫೋರ್ನಿಯಾದ ಗವರ್ನರ್ ಆಗಿ ಆಯ್ಕೆಯಾದ ಬೆನ್ನಲ್ಲೇ “ಔಟ್ ಸೋರ್ಸಿಂಗ್” (ವ್ಯಾಪಾರ ಹೊರಗುತ್ತಿಗೆ)ಅನ್ನು ನಿಷೇಧ ಮಾಡಲು ಮುಂದಾಗಿದ್ದರು. ಅಂದೇ ನಾವು ಎಚ್ಚೆತ್ತುಕೊಳ್ಳಬಹುದಿತ್ತು. ಆದರೆ “ಯಾರು ಬಂದರೂ ನಮ್ಮನ್ನು ಏನೂ ಮಾಡುವುದಕ್ಕಾಗುವುದಿಲ್ಲ, ಅಮೆರಿಕದ ಕಂಪನಿಗಳು ಪ್ರಾಫಿಟ್ ನೋಡುತ್ತವೆ, ಚೀಪ್ ಲೇಬರ್‌ಗಾಗಿ ಭಾರತಕ್ಕೆ ಬರಲೇಬೇಕು” ಎನ್ನುತ್ತಿದ್ದವರು ಈಗೇಕೆ ನಡುಗ ಲಾರಂಭಿಸಿದ್ದೀರಿ?

ಇದು ಪರಸ್ಪರ ಹಳಿದುಕೊಳ್ಳುವ ಕಾಲವಲ್ಲದಿದ್ದರೂ ನಾವು ಎಡ ವಿದ್ದೆಲ್ಲಿ ಎಂಬುದನ್ನು ಮುಕ್ತವಾಗಿ ಚರ್ಚಿಸುವುದಕ್ಕೇಕೆ ಅಂಜಿಕೆ?

ನೀವೇ ಯೋಚನೆ ಮಾಡಿ, ಐಬಿಎಂ ಅಂದರೆ ಹಾರ್ಡ್‌ವೇರ್, ಸಿಸ್ಕೋ ಅಂದ್ರೆ ನೆಟ್‌ವರ್ಕಿಂಗ್, ಮೈಕ್ರೊಸಾಫ್ಟ್ ಮತ್ತು ಗೂಗ್ಲ್ ಅಂದ್ರೆ ಸಾಫ್ಟ್‌ವೇರ್, ನೋಕಿಯಾ ಅಂದ್ರೆ ಮೊಬೈಲ್ ಟೆಕ್ನಾಲಜಿ. ಅದೇ ರೀತಿ ನಮ್ಮ ದೇಶೀಯ ಕಂಪನಿಗಳಾದ ಟಾಟಾ ಅಂದ್ರೆ ಸ್ಟೀಲ್ ಮತ್ತು ಅಟೋಮೊಬೈಲ್ಸ್, ಬಿರ್ಲಾ ಅಂದರೆ ಸಿಮೆಂಟ್, ಕಿರ್ಲೋಸ್ಕರ್ ಅಂದರೆ ಎಂಜಿನ್ಸ್. ಇನ್ಫೋಸಿಸ್, ವಿಪ್ರೋ, ಟಿಸಿಎಸ್, ಸತ್ಯಂ ಅಂದರೆ? ನಮ್ಮ ಸಾಫ್ಟ್‌ವೇರ್ ಕ್ಷೇತ್ರದ ದೈತ್ಯ ಕಂಪನಿಗಳು ಇವೇ ನಾಲ್ಕಲ್ಲವೆ? ಇವುಗಳ ಹೆಸರು ಕೇಳಿದ ಕೂಡಲೇ ಯಾವ ‘ಪ್ರಾಡಕ್ಟ್’ ನೆನಪಾಗುತ್ತದೆ? ಅಮೆರಿಕ ವರ್ಷಕ್ಕೆ ೭೦ ಸಾವಿರ ಎಂಜಿನಿಯರಿಂಗ್ ಪದವೀಧರರನ್ನು ರೂಪಿಸುತ್ತಿದೆ, ಇಡೀ ಯುರೋಪ್ (26 ದೇಶಗಳು) ವರ್ಷಕ್ಕೆ ರೂಪಿಸುವ ಒಟ್ಟು ಎಂಜಿನಿಯರಿಂಗ್ ಪದವೀಧರರ ಸಂಖ್ಯೆ ೧ ಲಕ್ಷ. ಇತ್ತ ನಮ್ಮ AICTE(All India Council for Technical Education) ಪ್ರಕಾರ ಭಾರತದಲ್ಲಿ ತಾಂತ್ರಿಕ ಪದವಿ ಕೊಡುವ ೧೧೩ ವಿಶ್ವವಿದ್ಯಾಲಯಗಳಿವೆ, ೨೦೮೮ ಕಾಲೇಜುಗಳಿವೆ. ಒಂದು ವರ್ಷಕ್ಕೆ ಐದೂವರೆ ಲಕ್ಷ ಎಂಜಿನಿಯರಿಂಗ್ ಪದವಿಧರರು ಕಾಲೇಜಿನಿಂದ ತೇರ್ಗಡೆಯಾಗಿ ಬರುತ್ತಿದ್ದಾರೆ. ಅವರಲ್ಲಿ ಶೇ. ೩೫ರಷ್ಟು ಪದವೀಧರರು ಕಂಪ್ಯೂಟರ್ ಸೈನ್ಸ್ ಹಾಗೂ ಇನ್‌ಫರ್ಮೇಷನ್ ಸೈನ್ಸ್ ಬ್ರಾಂಚ್‌ನವರಾಗಿದ್ದಾರೆ. ಆದರೂ ನಮ್ಮಲ್ಲೇಕೆ ಆಪಲ್, ಐಬಿಎಂ, ಮೈಕ್ರೊಸಾಫ್ಟ್, ಡೆಲ್‌ನಂತಹ ಒಂದು ಕಂಪನಿಯೂ ರೂಪುಗೊಳ್ಳಲಿಲ್ಲ? ಅಷ್ಟು ಜನರಲ್ಲಿ ಬಿಲ್ ಗೇಟ್ಸ್, ಮೈಕೆಲ್ ಡೆಲ್, ಸ್ಟೀವ್ ಜಾಬ್ಸ್, ಜೋಸೆಫ್ ರಾಡ್ನಿ ಕ್ಯಾನಿಯನ್ ಥರದವರು ಒಬ್ಬನೂ ಏಕೆ ಹೊರಹೊಮ್ಮಲಿಲ್ಲ? ಗೇಟ್ಸ್, ಡೆಲ್, ಜಾಬ್ಸ್ ಇವರೆಲ್ಲ ಕಾಲೇಜನ್ನೇ ಅರ್ಧಕ್ಕೆ ಬಿಟ್ಟವರೆಂಬುದು ಬೇರೆ ಮಾತು. ಆದರೆ ಅತ್ಯಂತ ಪ್ರತಿಭಾನ್ವಿತರು ನಮ್ಮಲ್ಲಿದ್ದರೂ ‘Innovation’ ಎಂಬ ‘ಕಲ್ಚರ್’ ಏಕೆ ಕಾಣುತ್ತಿಲ್ಲ?

ಇಷ್ಟಾಗಿಯೂ ಕೆಲವರು ನಮ್ಮ ಬೆಂಗಳೂರಿನಲ್ಲಿ ‘ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್’ ಇದೆ, ‘ನೋಕಿಯಾ’ದವರ ‘ಸಂಶೋಧನೆ ಮತ್ತು ಅಭಿವೃದ್ಧಿ’(R&D ) ಘಟಕ ಇದೆ, ಐಟಿಯವರ ಕೊಡುಗೆ ಕಣ್ಣಿಗೆ ಕಾಣದಿದ್ದರೂ ನೀವು ಬಳಸುವ ಪ್ರತಿಯೊಂದು ಎಲೆಕ್ಟ್ರಾನಿಕ್ ಉಪಕರಣಗಳ ‘ಒಳಗೆ’ ಇದೆ ಎಂದು ತಮ್ಮನ್ನು ತಾವೇ ಸಮಾಧಾನಪಡಿಸಿಕೊಳ್ಳುತ್ತಿದ್ದಾರೆ! ಹೌದು, ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್ ಹಾಗೂ ನೋಕಿಯಾ ಮುಂತಾದ ಕೆಲವು ಕಂಪನಿಗಳು ಬೆಂಗಳೂರು ಮತ್ತು ಭಾರತದ ಇನ್ನಿತರ ಭಾಗಗಳಲ್ಲಿ ತಮ್ಮ R&D ಘಟಕವನ್ನು ಸ್ಥಾಪನೆ ಮಾಡಿರಬಹುದು. ಅವುಗಳಲ್ಲಿ ರೂಪುಗೊಳ್ಳುತ್ತಿರುವ ತಂತ್ರಜಾನವನ್ನು ನಾವು ನಿತ್ಯವೂ ಬಳಕೆ ಮಾಡುತ್ತಿರುವ ಎಲೆಕ್ಟ್ರಾನಿಕ್ ವಸ್ತುಗಳಲ್ಲಿ ಅಳವಡಿಸಿರಬಹುದು. ಹಾಗಂತ ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್, ನೋಕಿಯಾ, ಮೈಂಡ್ ಟ್ರೀಗಳು ಭಾರತೀಯ ಕಂಪನಿಗಳಾದಾವೆ? ಅವುಗಳದ್ದು ಶುದ್ಧ ವ್ಯಾಪಾರ. ನೋಕಿಯಾ ಕಂಪನಿ ಬೆಂಗಳೂರಿನ R&D ಘಟಕದಲ್ಲಿ ಒಂದು ಸಂಶೋಧನೆ ಮಾಡಿ, ಹೊಸ ತಂತ್ರಜಾನವನ್ನು ರೂಪಿಸಿತೆಂದಿಟ್ಟುಕೊಳ್ಳಿ. ಆ ತಂತ್ರಜಾನವನ್ನು ಹೊಂದಿರುವ ಮೊಬೈಲನ್ನು ಭಾರತದ ಮಾರುಕಟ್ಟೆಗೇ ಬಿಡುತ್ತದೆ. ನೋಕಿಯಾ ಕಂಪನಿ ಭಾರತ ಮೊಬೈಲ್ ಕ್ಷೇತ್ರದಲ್ಲಿ ಶೇ.೫೦ಕ್ಕೂ ಹೆಚ್ಚು ಪಾಲು ಹೊಂದಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ನೋಕಿಯಾ ಮೊಬೈಲ್‌ಗಳು ಖರ್ಚಾಗುವುದೇ ಭಾರತದಲ್ಲಿ. ಅಂದರೆ ತಂತ್ರಜಾನವನ್ನು ಸಿದ್ಧಪಡಿಸಿದ್ದು ನಮ್ಮ ಎಂಜಿನಿಯರ್‌ಗಳೇ, ಮೊಬೈಲ್ ಖರೀದಿ ಮಾಡಿದವರೂ ಭಾರತೀಯ ಗ್ರಾಹಕರೇ. ನಮ್ಮ ಪ್ರತಿಭೆ, ನಮ್ಮದೇ ಗ್ರಾಹಕ. ಆದರೆ ಲಾಭ ಫಿನ್‌ಲ್ಯಾಂಡ್ ಕಂಪನಿಗೆ! ಒಂದು ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್, ನೋಕಿಯಾ ಇಟ್ಟುಕೊಂಡು ಮಾತನಾಡಬೇಡಿ. ಒಟ್ಟಾರೆಯಾಗಿ ನೋಡಿ. ಜಗತ್ತು ನಮ್ಮನ್ನು ಹೇಗೆ ನೋಡುತ್ತಿದೆ? ಇಷ್ಟಕ್ಕೂ ಈ ಕಂಪನಿಗಳು ಭಾರತಕ್ಕೇಕೆ ಬಂದಿವೆ?

Just for cost advantage!

ನಮ್ಮ ಮಾರುಕಟ್ಟೆಯಲ್ಲಿ ಬೇಡಿಕೆ ಇರುವವರೆಗೂ ನೋಕಿಯಾ ಭಾರತದಲ್ಲಿರುತ್ತದೆ, ಲಾಭ ಕಡಿಮೆಯಾಗಲು ಆರಂಭಿಸಿದರೆ ಮೊದಲು ಒಂದಿಷ್ಟು ಜನರನ್ನು ಕೆಲಸದಿಂದ ಕಿತ್ತುಹಾಕುತ್ತಾರೆ, ತದನಂತರ ಬಂಡವಾಳವನ್ನೇ ಹಿಂತೆಗೆದುಕೊಂಡು, ಬಾಗಿಲು ಎಳೆದುಕೊಂಡು ಜಾಗ ಖಾಲಿ ಮಾಡುತ್ತಾರೆ. ಈಗ ಕಂಡು ಬರುತ್ತಿರುವುದು ಇಂತಹ ಪ್ರಕ್ರಿಯೆಗಳೇ ಅಲ್ಲವೆ? ಎಲ್ಲ ವಿದೇಶಿ ಕಂಪನಿಗಳು ಮಾಡುವುದೂ ಇದನ್ನೇ.

ಖಂಡಿತ ಯಾರೂ ನಮ್ಮ ಸಾಫ್ಟ್‌ವೇರ್ ಎಂಜಿನಿಯರ್‌ಗಳ ಸಾಮರ್ಥ್ಯವನ್ನು ಜರಿಯುತ್ತಿಲ್ಲ. ಅವರ ಪ್ರತಿಭೆ ಬಗ್ಗೆ ಯಾರೂ ಚಕಾರವೆತ್ತುವುದಿಲ್ಲ. ಒಬ್ಬ ಸಾಮಾನ್ಯ ವ್ಯಕ್ತಿಯೂ ಸಾಫ್ಟ್‌ವೇರ್ ಎಂಜಿನಿಯರ್‍ಸ್ ಅಂದರೆ ಪ್ರತಿಭಾನ್ವಿತರು, ಅರಿತವರು ಎಂಬ ಭಾವನೆ ಹೊಂದಿದ್ದಾನೆ. ಆದರೆ “ವರ್ಕ್ ಕಲ್ಚರ್” ಅಂದರೆ ಬೆಳಗ್ಗೆ ೮ ರಿಂದ ರಾತ್ರಿ ೧೦ ಗಂಟೆವರೆಗೆ ಕತ್ತ್ತೆ ಥರಾ ದುಡಿಯುವುದಕ್ಕೆ, ಸ್ಮಾರ್ಟ್ ಆಗಿ ಕೆಲಸ ಮಾಡುವುದಕ್ಕೆ ಸಂಬಂಧಪಟ್ಟಿದ್ದಲ್ಲ, Constant learning, Vision, Foresightednessಗೆ ಸಂಬಂಧಿಸಿದ್ದು. ಇಂತಹ ಕಲಿಕೆಯ ಸತತ ದಾಹ, ತುಡಿತ ಹಾಗೂ ದೂರದೃಷ್ಟಿಗಳು Innovationಗೆ ದಾರಿ ಮಾಡಿಕೊಡುತ್ತವೆ. ಒಂದು ವೇಳೆ, ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್, ನೋಕಿಯಾ ಭಾರತದಲ್ಲಿ R&D ಘಟಕ ಸ್ಥಾಪಿಸಿ, ಇಲ್ಲಿನ ಪ್ರತಿಭೆಯನ್ನು ಉಪಯೋಗಿಸಿಕೊಂಡು ಹೊಸದನ್ನು ಸೃಷ್ಟಿಸಿ, ಕೊನೆಗೆ ಭಾರತೀಯ ಮಾರುಕಟ್ಟೆಯಲ್ಲೇ ತನ್ನ ವಸ್ತುವನ್ನು ಮಾರಬಹುದಾದರೆ, ಅದೇ ಕೆಲಸವನ್ನು ಭಾರತೀಯ ಕಂಪನಿಗಳೇ ಏಕೆ ಮಾಡಬಾರದು? ಇಸ್ರೊದವರೂ ಕೂಡ ಸ್ವಂತ ತಂತ್ರಜಾನವನ್ನು ಅಭಿವೃದ್ಧಿಪಡಿಸುವ ಬದಲು ರಷ್ಯಾ, ಫ್ರಾನ್ಸ್‌ನ ಉಪಗ್ರಹಗಳನ್ನೇ ಖರೀದಿ ಮಾಡಬಹು ದಿತ್ತು, ಫ್ರೆಂಚ್ ಗಯಾನಾ, ಬೈಕನೂರ್‌ಗಳಿಂದಲೇ ಆಗಸಕ್ಕೆ ಉಡಾವಣೆ ಮಾಡಬಹುದಿತ್ತಲ್ಲವೆ? ರಿಮೋಟ್ ಸೆನ್ಸಿಂಗ್ (IRS), ಟ್ರಾನ್ಸ್‌ಪಾಂಡರ್‍ಸ್, ಉಪಗ್ರಹ ನಿಯಂತ್ರಣ ಸಾಫ್ಟ್‌ವೇರ್‌ನಂತಹ ಬುದ್ಧಿಗೇ ಸವಾಲೆಸೆಯುವಂತಹ ತಂತ್ರಜಾನಗಳನ್ನೇಕೆ ತಲೆಕೆಡಿಸಿ ಕೊಂಡು ಅಭಿವೃದ್ಧಿಪಡಿಸಬೇಕಿತ್ತು? ಅವುಗಳನ್ನು ಯಾಕಾಗಿ ದೇಶೀಯವಾಗಿ ರೂಪಿಸಿದರು?

ನಮ್ಮ ಸಾಫ್ಟ್‌ವೇರ್ ಕ್ಷೇತ್ರ ಎಡವಿದ್ದೇ ಇಲ್ಲಿ.

ದುರದೃಷ್ಟವಶಾತ್, ನಾವು ಹಾಡಿ ಹೊಗಳುವ ಮೂರ್ತಿ, ರಾಜು, ದೊರೈ, ಪ್ರೇಮ್‌ಜಿ ಮುಂತಾದ ಐಟಿ ದೊರೆಗಳು ಕೊನೆಯವರೆಗೂ ಕಾಂಟ್ರಾಕ್ಟರ್‌ಗಳಾಗಿಯೇ ಉಳಿದು ಬಿಟ್ಟರು. ಅಂದರೆ ವಿದೇಶಿ ಕಾಮಗಾರಿಗಳ ಗುತ್ತಿಗೆ ಪಡೆದುಕೊಂಡು ಬಂದು, ನಮ್ಮ ಪ್ರತಿಭಾವಂತ ಸಾಫ್ಟ್‌ವೇರ್ ಎಂಜಿನಿಯರ್‌ಗಳನ್ನು ಐಟಿ ಕೂಲಿಗಳನ್ನಾಗಿ ಮಾಡಿ, ‘ಕಮೀಷನ್’ ಹೊಡೆಯುವ ‘ಸ್ಟ್ರೀಟ್ ಸ್ಮಾರ್ಟ್‌ನೆಸ್’ನಲ್ಲೇ ಸ್ವರ್ಗಸುಖ ಕಾಣಲಾರಂಭಿಸಿದರು. ಹತ್ತಿಪ್ಪತ್ತು ವರ್ಷ ಟ್ಯಾಕ್ಸ್ ಹಾಲಿಡೇ ಪಡೆದುಕೊಂಡಿದ್ದಲ್ಲದೆ ಸಿಕ್ಕ ಅವಕಾಶಗಳಲ್ಲೆಲ್ಲ ಸರಕಾರವನ್ನೇ ತರಾಟೆ ತೆಗೆದುಕೊಳ್ಳಲು ಆರಂಭಿಸಿದರು. ಈ ದೇಶವನ್ನೇ ಬದಲಿಸುವ ‘ಐಡಿಯಾ’ ನಮ್ಮ ಬಳಿ ಇದೆ ಎಂಬಂತೆ ವರ್ತಿಸಲಾರಂಭಿಸಿದ ಇವರಿಗೆ ತಮ್ಮ ಕ್ಷೇತ್ರದ ಬಗ್ಗೆಯೇ ದೂರದೃಷ್ಟಿಗಳಿರಲಿಲ್ಲ. Self Righteousness ಅನ್ನುವ ಹಾಗೆ ನಮಗೆ ಮಾತ್ರ ಎಲ್ಲ ಗೊತ್ತು, ನಾವು ಹೇಳಿದ್ದೇ ಸರಿ ಎಂಬ ದರ್ಪ ತೋರಿದ ಇವರಿಗೆ ಮುಂದೆ ಕಾದಿದ್ದ ಗಂಡಾಂತರವೇ ಕಾಣಲಿಲ್ಲ. ಇನ್ಫೋಸಿಸ್, ವಿಪ್ರೊದಂತಹ ಕಂಪನಿಗಳು ‘Cream of Talent’ ಅನ್ನುತ್ತಾರಲ್ಲಾ ಅಂತಹ ಪ್ರತಿಭಾವಂತರನ್ನು ಪ್ರತಿ ಕಾಲೇಜುಗಳಿಂದಲೂ ಆಯ್ಕೆ ಮಾಡಿಕೊಂಡು ಬಂದು ಅಡುಗೆ ಭಟ್ಟ ಅಥವಾ ಗಾರೆ ಕೆಲಸದವನಂತೆ ಮಾಡಿಕೊಂಡಿದ್ದು ಎಷ್ಟು ಸರಿ? ಏಕೆ ನಮ್ಮ ಯಾವ ಖ್ಯಾತನಾಮ ಐಟಿ ಕಂಪನಿಗಳಲ್ಲೂ ಯೋಗ್ಯ R&D ಘಟಕಗಳಿಲ್ಲ? ಏಕೆ ಪೂರ್ಣ ಕಾಲಿಕ Innovative ಯುನಿಟ್ ಹೊಂದಿಲ್ಲ? ಏಕೆಂದರೆ ನಮ್ಮ ಐಟಿ ದೊರೆಗಳಿಗೆ Globalised Knowledge ಅನ್ನು Localise ಮಾಡಬೇಕು ಎಂಬುದು ಗೊತ್ತಾಗಲೇ ಇಲ್ಲ. ‘ಪ್ರಾಜೆಕ್ಟ್’ ಮತ್ತು ‘ಪ್ರಾಡಕ್ಟ್’ ಮಧ್ಯೆ ಇರುವ ಮಹತ್ತರ ವ್ಯತ್ಯಾಸವೇ ಇವರಿಗೆ ಅರ್ಥವಾಗಲಿಲ್ಲ. ಅಂದರೆ ವಿದೇಶಿ ‘ಪ್ರಾಜೆಕ್ಟ್’ಗಳನ್ನು ಹಿಡಿಯಲು ಹವಣಿಸುವುದಕ್ಕಿಂತ ಜಾಗತಿಕ ಜಾನವನ್ನು ಸ್ಥಳೀಯಮಟ್ಟಕ್ಕೆ ತಂದು ಸಂಶೋಧನೆ ಮೂಲಕ ‘ಪ್ರಾಡಕ್ಟ್’ ರೂಪಿಸಿ, ಅವುಗಳನ್ನು ಹಿಡಿದುಕೊಂಡು ಕಂಪನಿಗಳ ಬಳಿಗೆ ಹೋಗಬೇಕು, ಮಾರುಕಟ್ಟೆಯಲ್ಲಿ ನಮ್ಮ ಪ್ರಾಡಕ್ಟ್‌ಗಳನ್ನೇ ಮಾರಾಟ ಮಾಡುವಂತಾಗಬೇಕು ಎಂಬುದನ್ನು ಅರಿತುಕೊಳ್ಳಲಿಲ್ಲ. ಇನ್ನೂ ಸರಳವಾಗಿ ಹೇಳುವುದಾದರೆ, ನಮ್ಮ ಸಾಫ್ಟ್‌ವೇರ್ ಕ್ಷೇತ್ರ ‘Servicing’ನಿಂದ ‘Research’ ಹಾಗೂ ‘Product development’ಗೆ ಗ್ರಾಜುಯೇಟ್ ಆಗಲೇ ಇಲ್ಲ. ಹಾಗಾಗಿ ನಮ್ಮ ಸಾಫ್ಟ್‌ವೇರ್ ಎಂಜಿನಿಯರ್‌ಗಳು, ‘Pursuit of Knowledge’ ಬಿಟ್ಟು ಕೂಲಿ ಕೆಲಸ ಮಾಡಬೇಕಾಗಿ ಬಂತು. ಸಾಫ್ಟ್‌ವೇರ್ ಕೋಡಿಂಗ್, ಡೆಸೈನಿಂಗ್‌ನಾಚೆ ಯೋಚಿಸಲು ಅವಕಾಶವೇ ದೊರೆಯಲಿಲ್ಲ. ಹಾಗಾಗಿ Core sector ನಮ್ಮಲ್ಲಿ ರೂಪುಗೊಳ್ಳಲಿಲ್ಲ.

ಖಂಡಿತ ನಮ್ಮ ಐಟಿ ದೊರೆಗಳು ಪ್ರಾರಂಭದಲ್ಲಿ ಕಾಮಗಾರಿ ಗುತ್ತಿಗೆ ಹಿಡಿಯುವ ಕೆಲಸವನ್ನು ಆರಂಭಿಸಿದ್ದು ತಪ್ಪೇನಾಗಿರಲಿಲ್ಲ. ಆದರೆ ಒಂದು ಹಂತದ ನಂತರ R&D ಬಗ್ಗೆ ಗಂಭೀರ ದೃಷ್ಟಿಹಾಯಿಸಬೇಕಿತ್ತು. ನಾವು ಯಾವತ್ತೂ ‘ಪ್ರಾಡಕ್ಟ್’ ಮೇಲೆ ಇನ್ವೆಸ್ಟ್ ಮಾಡುತ್ತಾ ಬಂದಿದ್ದೇವೆ, ಅಮೆರಿಕದವರು ‘ಪ್ರಾಡಕ್ಟ್’ಗೆ ಬದಲಾಗಿ ಆ ‘ಪ್ರಾಡಕ್ಟ್’ ಅನ್ನು ಸಂಶೋಧನೆ ಮಾಡುವವನ ಮೇಲೆ ಇನ್ವೆಸ್ಟ್ ಮಾಡುತ್ತಾರೆ. ಇದನ್ನು ನಮ್ಮವರೂ ಅರಿತುಕೊಂಡು Innovationಗೆ ಮುಂದಾಗಬೇಕಿತ್ತು. ಸಂಶೋಧನೆಯೆಂದರೆ ಕಂಪನಿಗಳು R&D ಘಟಕ ಸ್ಥಾಪನೆ ಮಾಡುವುದು, ಯಾವುದಾದರೂ ಐಐಎಂ ಅಥವಾ ಐಐಟಿಯಲ್ಲಿ ಒಂದು ‘ಸಂಶೋಧನಾ ಪೀಠ’ ಸ್ಥಾಪನೆ ಮಾಡುವುದಷ್ಟೇ ಅಲ್ಲ. ವಿವಿಧ ಕಾಲೇಜುಗಳ ಒಂದೊಂದು ಡಿಪಾರ್ಟ್‌ಮೆಂಟ್‌ಗಳನ್ನೇ ದತ್ತು ತೆಗೆದುಕೊಂಡು ವಿದ್ಯಾರ್ಥಿಗಳನ್ನು ಕಾಲೇಜು ಹಂತದಲ್ಲೇ ಸಂಶೋಧನೆಗೆ ಹಚ್ಚಬೇಕಾಗಿತ್ತು, Pure Science ಬಗ್ಗೆ ಆಸಕ್ತಿ ಹುಟ್ಟಿಸಬೇಕಿತ್ತು. ಇಂತಹ ಕೆಲಸವನ್ನು ಯಾವ ಕಂಪನಿ ಮಾಡಿತು? ಹಾಗಾಗಿ ನಮ್ಮ ಎಂಜಿನಿಯರ್‌ಗಳು ತಂತ್ರಜ್ಞರಾದರೇ ಹೊರತು, ಪರಿಣತಿಯನ್ನು ಸಾಧಿಸಲಿಲ್ಲ. ಎಲ್ಲವನ್ನೂ ಸರಕಾರದಿಂದಲೇ ನಿರೀಕ್ಷಿಸಲು ಸಾಧ್ಯವಿಲ್ಲ, Entrepreneurs ಆ ಕೆಲಸ ಮಾಡಬಹುದಿತ್ತು. ಅಂತಿಮವಾಗಿ ಎಂಜಿನಿಯರ್‌ಗಳ ಪ್ರತಿಭೆಯನ್ನು ಉಪಯೋಗಿಸಿಕೊಳ್ಳುವವರು ಅವರೇ ಅಲ್ಲವೆ? ಆದರೆ “Seventy-five per cent of engineering graduates are unemployable” ಎಂದು ಹೇಳಿಕೆ ನೀಡುವ ನಾರಾಯಣಮೂರ್ತಿಯವರಿಗೆ ಅದರಲ್ಲಿ ತಮ್ಮ ಪಾಲೂ ಇದೆ ಎಂಬುದು ಅರ್ಥವಾಗುವುದಿಲ್ಲ!

ಭಾರತೀಯ ಕಂಪನಿಗಳ ಇಂತಹ ಮನಸ್ಥಿತಿಯಿಂದಾಗಿ ‘ನಾಮ್ ಕೇ ವಾಸ್ತೆ’ಗೆ ಒಂದಿಷ್ಟು ಸಂಶೋಧನೆಯ ಶಾಸ್ತ್ರ ನಡೆ ಯುತ್ತಿದೆಯಷ್ಟೇ. ಅದನ್ನೇ ಕೆಲವರು ಇನ್ಫೋಸಿಸ್, ವಿಪ್ರೊಗಳ ಬಳಿ ನೂರಕ್ಕೂ ಹೆಚ್ಚು ಪೇಟೆಂಟ್‌ಗಳಿವೆ ಎಂದು ದೊಡ್ಡ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿದ್ದಾರೆ! ವಿಜಾನಿ ಎಂದರೆ ಐನ್‌ಸ್ಟೀನ್, ನ್ಯೂಟನ್ ನೆನಪಾಗುತ್ತಾರೆ, ಅಣೆಕಟ್ಟು ವಿದ್ಯುತ್ ಎಂದ ಕೂಡಲೇ ವಿಶ್ವೇಶ್ವರಯ್ಯ ಕಣ್ಣಮುಂದೆ ಬರುತ್ತಾರೆ. ನಾರಾಯಣಮೂರ್ತಿ, ಪ್ರೇಮ್‌ಜಿ ಎಂದ ಕೂಡಲೇ ಇನ್ಫೋಸಿಸ್, ವಿಪ್ರೊ ನೆನಪಾಗಬಹುದೇ ಹೊರತು, ಯಾವುದೇ ಪ್ರಾಡಕ್ಟ್ ಹೆಸರು ಮನಸ್ಸಿನಲ್ಲಿ ಸುಳಿದು ಬರುವುದಿಲ್ಲ. ಅಷ್ಟಕ್ಕೂ, ಛೋಟಾ-ಮೋಟಾ ಪೇಟೆಂಟ್‌ಗಳನ್ನು ಎಷ್ಟೇ ಹೊಂದಿದ್ದರೂ ಒಂದು ಇಂಡಸ್ಟ್ರಿಯನ್ನೇ ಬದಲಾಯಿಸುವಂತಹ ಯಾವ ತಂತ್ರಜಾನವನ್ನು ಅಭಿವೃದ್ಧಿಪಡಿಸಿ ದ್ದಾರೆ? ಅದಿರಲಿ, ಅಮೆರಿಕದಲ್ಲಿ ‘ವೆಂಚರ್ ಕ್ಯಾಪಿಟಲ್’ ಎಂಬು ದಿದೆ. ಅಂದರೆ ನನ್ನ ಬಳಿ ಇಂಥದ್ದೊಂದು ಯೋಜನೆ ಇದೆ, ಅದರಿಂದ ಇಂತಹ ತಂತ್ರಜಾನವನ್ನು ಅಭಿವೃದ್ಧಿ ಮಾಡಬಹುದು ಎಂದು ನೀವು ವಿಶ್ವಾಸ ಮೂಡಿಸಿದರೆ, ಹೊಸ ಸಾಹಸ ಮಾಡುವವರಿಗೆ ಅವರ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಹಣತೊಡಗಿಸುವವರಿದ್ದಾರೆ. ಅವರನ್ನೇ ವೆಂಚರ್ ಕ್ಯಾಪಿಟಲಿಸ್ಟ್‌ಗಳು, ಅದನ್ನೇ ‘ವಿಸಿ ಫಂಡಿಂಗ್’ ಎನ್ನುವುದು. ಆದರೆ ನಮ್ಮ ದೇಶದಲ್ಲಿ ಇಷ್ಟೆಲ್ಲಾ ದುಡ್ಡು ಮಾಡಿದ ಸಾಫ್ಟ್‌ವೇರ್ ಕಂಪನಿಗಳಿದ್ದರೂ ಸಾಹಸಕ್ಕೆ ಮುಂದಾಗುವ, ಹೊಸ ಸಾಧನೆಯನ್ನು ಮಾಡುವ ತುಡಿತ ಹೊಂದಿರುವ ಸಾಫ್ಟ್‌ವೇರ್ ಎಂಜಿನಿಯರ್‌ಗಳ ಮೇಲೆ ವಿಶ್ವಾಸವಿಟ್ಟು ಬಂಡವಾಳ ತೊಡಗಿಸಲು ಏಕೆ ಮುಂದಾಗುವುದಿಲ್ಲ? Innovation ಬಗ್ಗೆ ನಮ್ಮ ಕಂಪನಿಗಳು ಏಕೆ ಆಸಕ್ತಿಯನ್ನೇ ತೋರುವುದಿಲ್ಲ? ಸಾಫ್ಟ್‌ವೇರ್ ಉದ್ದಿಮೆ ಪ್ರಾರಂಭವಾಗಿ 25 ವರ್ಷ, ಸಾಫ್ಟ್‌ವೇರ್ ಬೂಮ್ ಆರಂಭವಾಗಿ 15 ವರ್ಷಗಳು ಕಳೆದಿದ್ದರೂ ಸರ್ವಿಸಿಂಗ್‌ನಿಂದ ರೀಸರ್ಚ್‌ಗೇಕೆ ತೇರ್ಗಡೆಯಾಗಿಲ್ಲ? ಯಾರಿಗೆ ಇಂಗ್ಲಿಷ್ ಬರುವುದಿಲ್ಲ, ನಮ್ಮನ್ನು ಹಿಡಿಯಲು ಸಾಧ್ಯವೇ ಇಲ್ಲ ಎಂದು ನಾವು ಹೇಳುತ್ತಿದ್ದೆವೋ ಅಂತಹ ಚೀನಿಯರು ಲೆನೋವೋದಂತಹ ಕಂಪನಿಯನ್ನು ರೂಪಿಸಿದ್ದಾರೆ, ಐಬಿಎಂನ ಹಾರ್ಡ್‌ವೇರ್ ಯುನಿಟ್ಟನ್ನೇ ಖರೀದಿಸಿದ್ದಾರೆ. ನಾವೇಕೆ ಆ ಕೆಲಸ ಮಾಡಲಿಲ್ಲ?

ಇಂತಹ ಮನಸ್ಥಿತಿಯನ್ನು ಇಟ್ಟುಕೊಂಡು ಬಂದಿದ್ದರಿಂದಾಗಿಯೇ ಒಬಾಮ ಅವರ “stimulus plan’ ಬಗ್ಗೆ ನಮ್ಮ ಸಾಫ್ಟ್ ವೇರ್ ಕ್ಷೇತ್ರ ಬೆಚ್ಚಿಬೀಳುವಂತಾಗಿದೆ. ಹಾಗಂತ “ದುಡ್ಡು ಬೇಕೆಂದರೆ ವ್ಯಾಪಾರ ಹೊರಗುತ್ತಿಗೆ ನಿಲ್ಲಿಸಿ, ಎಚ್೧ಬಿ ವೀಸಾ ಹೊಂದಿರುವವರನ್ನು ಮನೆಗೆ ಕಳುಹಿಸಿ” ಎಂಬ ಪೂರ್ವ ಷರತ್ತು ಹಾಕಿರುವ ಒಬಾಮರನ್ನು ದೂರಿ ಪ್ರಯೋಜನವಿಲ್ಲ. ಅಷ್ಟಕ್ಕೂ ಕರ್ನಾಟಕದಲ್ಲಿ ರೈಲ್ವೆ ನೇಮಕಕ್ಕೆ ಬರುವ ಬಿಹಾರಿಗಳನ್ನು ನಾವು ಹೇಗೆ ಬೆದರಿಸುತ್ತೇವೆಯೋ, ಮರಾಠಿಗರು ಉತ್ತರ ಭಾರತದವರನ್ನು ಹೇಗೆ ಹಿಡಿದು ಚಚ್ಚುತ್ತಾರೋ ಅಮೆರಿಕನ್ನರೂ ಕೂಡ ಭಾರತೀಯರು ತಮ್ಮ ಕೆಲಸಕ್ಕೆ ಕುತ್ತು ತಂದಿದ್ದಾರೆ ಎಂಬ ಭಾವನೆ ಹೊಂದಿದ್ದಾರೆ. ನಮ್ಮ ಸಾಫ್ಟ್‌ವೇರ್ ಕ್ಷೇತ್ರಕ್ಕೆ ಮುಂದಾಲೋಚನೆ ಇದ್ದಿದ್ದರೆ ಎಂದೋ ಸರ್ವೀಸಿಂಗ್‌ನಿಂದ ಪ್ರಾಡಕ್ಟ್ ಹಾಗೂ ರೀಸರ್ಚ್‌ಗೆ ಕಾಲಿಡಲು ಪ್ರಯತ್ನಿಸುತ್ತಿತ್ತು. ಆಗ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ, ಒಬಾಮಗೆ ಹೆದರುವ ಅಗತ್ಯವೂ ಎದುರಾಗುತ್ತಿರಲಿಲ್ಲ. ಇವತ್ತು ಬ್ಯಾಂಕಿಂಗ್, ಫೈನಾನ್ಸ್, ಮೆಕ್ಯಾನಿಕಲ್, ಆಟೊಮೊಬೈಲ್, ಮೊಬೈಲ್ ಮುಂತಾದ ಕ್ಷೇತ್ರಗಳೂ ಕುಸಿಯಲಾರಂಭಿಸಿದ್ದರೂ ಇವೆಲ್ಲವೂ ಐಟಿ ಫಲಾನುಭವಿ ಮತ್ತು ಐಟಿ Driven Sectorಗಳೇ.

ಇನ್ನೂ ಕಾಲ ಮಿಂಚಿಲ್ಲ.

Never confuse the size of your paycheck with the size of your talent. You are much more than your pay check ಎಂಬ ಮರ್ಲಾನ್ ಬ್ರ್ಯಾಂಡೋ ಅವರ ಡೈಲಾಗನ್ನು ನೆನಪಿಸಿಕೊಳ್ಳಿ. ಇಲ್ಲಿಯವರೇ ಅಮೆರಿಕಕ್ಕೆ ಹೋಗಿ ಜಗತ್ತನ್ನು ನಿಬ್ಬೆರಗಾಗಿಸಬಹುದಾದರೆ ಇಲ್ಲೇ ಇರುವವರು ಏಕೆ ಅಂತಹ ಸಾಧನೆ ಮಾಡುವುದಕ್ಕಾಗುವುದಿಲ್ಲ? ಈ ಹಿನ್ನೆಲೆಯಲ್ಲಿ ನಮ್ಮ ಐಟಿ ದೊರೆಗಳು ಹಾಗೂ ಐಟಿ ಕ್ಷೇತ್ರದಲ್ಲಿರುವವರು ದುಡ್ಡಿನಾಚೆಗಿನ Innovation ಎಂಬ ಪ್ರಪಂಚವನ್ನು ಕಾಣುವಂತಹ ದೂರದೃಷ್ಟಿಯನ್ನು ಬೆಳೆಸಿಕೊಳ್ಳಬೇಕಷ್ಟೆ. ಅದರಿಂದ ಐಟಿಗೇ ಒಳಿತು. ನಮ್ಮ ಸಾಫ್ಟ್‌ವೇರ್ ಎಂಜಿನಿಯರ್‌ಗಳ Top-notch talent ಮೇಲೆ ನಮಗೆ ಖಂಡಿತ ವಿಶ್ವಾಸವಿದೆ. ನಮ್ಮ ದೇಶಕ್ಕೆ ಒಳ್ಳೆಯ ಹೆಸರು ತಂದುಕೊಟ್ಟ ಐಟಿ ಬಗ್ಗೆ ನಮ್ಮೆಲ್ಲರಿಗೂ ಅಭಿಮಾನವಿದೆ. ಅನುಮಾನ ಬೇಡ.

From: http://pratapsimha.com/bettale-jagattu/
Collected: Ravi N Rao (ravin143@gmail.com)

Monday, July 13, 2009

ಹೀಗೊಂದು ಸಸ್ಯಾಹಾರಿ ಹಳ್ಳಿ -- A Vegetarian Village

ಬನ್ನಿ ಕೊಪ್ಪ, ಎನ್ನುವ ಹಳ್ಳಿಯಲ್ಲಿ ಜನ ಕೋಳಿ ಕೂಗಿದರೆ ಏಳುವುದಿಲ್ಲ. ಏಕೆಂದರೆ ಇಲ್ಲಿ ಯಾವ ಮನೆಯಲ್ಲೂ ಕೋಳಿ ಇಲ್ಲ. ಹೀಗೆ ಈ ಹಳ್ಳಿಯಲ್ಲಿ ನಿಮಗೆ ಯಾವ ಪ್ರಾಣಿಯು ಇಲ್ಲ, ಹಸು ಒಂದನ್ನು ಬಿಟ್ಟು. ಆದ್ದರಿಂದಲೇ ಇದನ್ನು ಸಸ್ಯಾ ಹಾರಿ ಹಳ್ಳಿ ಎಂದು ಕರೆಯುತ್ತಾರೆ. ಈ ಹಳ್ಳಿ ಹಾವೇರಿ ಜಿಲ್ಲೆಯ, ಶಿಗ್ಗಾಂವ ತಾಲ್ಲೂಕಿನಿಂದ ಆರು ಕಿಲೋಮೀಟರ್ ದೂರದಲ್ಲಿದೆ.

೨೫೦ ಜನ, ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ, ನಿಮಗೆ ಹುಡುಕಿದರೂ ಒಂದು ಕೋಳಿ, ಕುರಿ, ಹಂದಿ, ಆಡು ಸಿಗುವುದಿಲ್ಲ. ಮನೆಗೊಂದು ಆಕಳು ಮಾತ್ರ ಇದೆ. ಈ ಹಳ್ಳಿಯನ್ನು ಪಾಂಡವಪುರ ಎಂದು ಕೂಡ ಕರೆಯುತ್ತಾರೆ. ಇಲ್ಲಿನ ಹಿರಿಯರು ಹೇಳುವ ಪ್ರಕಾರ, ಮಹಾ ಭಾರತದ ಪಂಚ ಪಾಂಡವರು ಇಲ್ಲಿ ಒಂದು ವರ್ಷ ವಾದ ಮಾಡಿದ್ದುಂಟು ಹಾಗೂ ಅವರೂ ಕೂಡ ಯಾವುದೇ ಪ್ರಾಣಿಯನ್ನು ಸಾಕಿರಲಿಲ್ಲ. ಕೆಲವರು ಸಾಕಲು ಪ್ರಯತ್ನ ಪಟ್ಟು ಮಣ್ಣು ಮುಕ್ಕಿದ್ದಾರೆ.

ಫಕೀರಪ್ಪ ಒಮ್ಮೆ ೧೫ ಬಾತು ಕೋಳಿ ಗಳನ್ನೂ ಬೆಳೆಸಲು ಪ್ರಯತ್ನ ಪಟ್ಟರು. ಆದರೇ ಅತಿ ಬೇಗ ಯಾವುದೊ ತರಹದ ಕಾಯಿಲೆ ಇಂದ ತೀರಿಕೊಂಡರು. ಆಡು ಮತ್ತು ಕುರಿಗಳನ್ನು ಬೆಳೆಸಲು ಪ್ರಯತ್ನ ಪಟ್ಟವರು ಕೂಡ ಇದೆ ಗತಿ ಅನುಭವಿಸಿದರು.

ಧರ್ಮಪ್ಪ ಪೂಜಾರ್ ಇಲ್ಲಿರುವ ಒಂದೇ ದೇವಸ್ತಾನದ ಪೂಜಾರಿ ಹೇಳುವಂತೆ ಪಾಂಡವರು ಪ್ರಾಣಿ ಪಕ್ಷಿಗಳನ್ನು ಸಾಕುತ್ತಿರಲಿಲ್ಲ. ಈ ಹಳ್ಳಿಯಲ್ಲಿರುವ ದೇವಾಲಯವು ಬ್ರಿಟಿಷರ ಆಳ್ವಿಕೆಯಲ್ಲಿ ಕಟ್ಟಲಾಗಿದ್ದು, ಇದಕ್ಕೆ ಪಂಚ ಪಾಂಡವರ ಹೆಸರನ್ನೇ ಇಡಲಾಗಿದೆ ( ಪಂಚ ಪಾಂಡವ ದೇವಾಲಯ) . ಈ ಹಳ್ಳಿಯಲ್ಲಿರುವ ೧೮ ಜನ ಪಧವೀದರರು ಕೂಡ ಇದನ್ನೇ ನಂಬುತ್ತಾರೆ ಮತ್ತು ದವಸ ಧಾನ್ಯ & ಹಣ್ಣುಗಳನ್ನು ತಿಂದೆ ಜೀವನ ನಡೆಸುತ್ತಾರೆ.

ಈ ಹಳ್ಳಿಯಲ್ಲಿರುವ ಲಿಂಗಾಯತ ಜನರ ಮುಖ್ಯ ಜೀವನಾಧಾರ ಬೇಸಾಯ/ ವ್ಯವಸಾಯ. ಇಲ್ಲಿಗೆ ಬೇರೆ ಯಾವುದೇ ಪಂಗಡದ ಜನರೂ ಕೂಡ ಬರುವುದಿಲ್ಲ ಮತ್ತು ಉಳಿದುಕೊಳ್ಳಲು ಸಾದ್ಯವಿಲ್ಲ. ಈ ಹಳ್ಳಿಯಲ್ಲಿ ಕೆಲಸಕ್ಕೆಎಂದು ಬರುವ ಮರ ಕಡಿಯುವವರು, ಮನೆ ಕಟ್ಟುವವರು, ಮುಂತಾದವರು ರಾತ್ರಿ ವಾಪಾಸ್ ತಮ್ಮ ತಮ್ಮ ಊರುಗಳಿಗೆ ಹೊರಟು ಹೋಗುತ್ತಾರೆ. ಇಲ್ಲಿ ರಾತ್ರಿ ಯಾರೂ ಉಳಿದುಕೊಳ್ಳಲು ಅವಕಾಶವಿಲ್ಅ ಮತ್ತು ಉಳಿದುಕೊಳ್ಳುವುದು ಇಲ್ಲ.

ಈ ಹಳ್ಳಿಯಲ್ಲಿರುವ ಇನ್ನೊಂದು ವಿಶೇಷವೆಂದರೆ ಇಲ್ಲಿರುವ ಪ್ರತಿಯೊಬ್ಬ ಕುಟುಂಬದ ಗಂಡಸರ ಹೆಸರೂ ಕೂಡ ಪಂಚ ಪಾಂಡವರ ಹೆಸರಿನಲ್ಲಿ ಒಂದು. ನಕುಲ, ಸಹದೇವ, ಭೀಮಪ್ಪ, ಧರ್ಮಪ್ಪ, ಅರ್ಜುನ ಎಂದೆ ಎಲ್ಲರ ಹೆಸರುಗಳು. ಹೆಂಗಸರ ಹೆಸರುಗಳು ಕೂಡ ಬಸವ್ವ, ಯಲ್ಲವ್ವ & ಮಲ್ಲವ್ವ ಎಂದಿರುತ್ತದೆ.

Student Information System --> Our New Project Details


Hi Guys,
As per our discussion with Raj yesterday, I m here with attaching a Small Image, which contains sample database and its details. We might need to enhance the same, depending on the discussions. Have a look over the same and put in your comments too...
SMS Alerts Software
Geneva Soft Tech (http://www.genevasoftech.com/) is providing an E2C Software, where in you can send SMS in 14 Languages. 10,000 SMS's are FREE. After that it will cost depending on the packs they have, that we will know only after purchasing the software from them. It costs Rs.6,000 for us. This software we can install in any machine (Win XP/Vista) too. I m not sure how do we integrate the same with JAVA/.Net/PHP Application. You guys can look into the same OR We can purchase the SMS Gateway from http://clickatell.com, an US Provider. They will issue some API's which we have to use in our Web Application and so that can send the SMS. Even call back feature also we can look there.
Regards,
Ravi N Rao

Friday, July 10, 2009

ಆಟೋ ಅಣಿಮುತ್ತುಗಳು -- Auto Quotes

೧. ಹಾಯ್ ಇಂಡ್ಯ , ನಾನ್ ಮಂಡ್ಯ
೨. ನಾ ಅತ್ತಿದ್ದು,
ಶಂಕರ್ ನಾಗ್ ಸತ್ತಾಗ, ಸುನಾಮಿ ಬಂದಾಗ
ಅದ್ ಬಿಟ್ಟರೆ ನೀ ನೆನಪಾದಾಗ
೩. ದಾಸ , ಕೊಟ್ಟರೆ ವರ..., ಇಟ್ಟರೆ ಶಾಪ....
೪. ಲವ್ ಮಾಡಿದ್ರೆ ರೋಮ್ಯಾನ್ಸ್, ಕೈ ಕೊಟ್ಟರೆ ನಿಮ್ಹಾನ್ಸ್
೫. ಹುಡುಗಿಯರ ನಗೆ, ಹುಡುಗರಿಗೆ ಹೊಗೆ
೬. ಪ್ರೀತಿ ಮಾಡೋರಿಗೆಲ್ಲಾ ಹೀಗೆನಾ, ಅಥವಾ ನನಗೆ ಮಾತ್ರ ಹೀಗೆನಾ
೭. 'A' ಹುಡ್ಗಿರಾ, 'LOVE' ಅಂತ ಹತ್ರ ಬಂದ್ರೆ ಕೊಲೆ ಆಗ್ತೀರ
೮. ಗೆಳೆಯ ಮತ್ತು ಗೆಳತಿ
ಬದುಕು : ಚೆಲುವಿನ ಚಿತ್ತಾರ ದಂತೆ ಆಗದಿರಲಿ
ಪ್ರೀತಿ : ಮುಂಗಾರು ಮಳೆಯಂತೆ ಆಗದಿರಲಿ
ಜೀವನ : ದುನಿಯಾ ದಂತೆ ಆಗದಿರಲಿ
ನನ್ನ ಮತ್ತು ನಿನ್ನ ಸ್ನೇಹ & ಪ್ರೀತಿ ಸದಾ ಮಿಲನ ದಂಥಿರಲಿ
೯. ಕುಂತ್ರೆ ರಾಮ, ಎದ್ರೆ ಭೀಮ
೧೦. ನಾಲಿಗೆಯಲ್ಲಿ ನಲಿದಾಡಲಿ, ಹೃದಯದಲ್ಲಿ ವಿಜ್ರುಮ್ಭಿಸಲಿ --> ಕನ್ನಡ
೧೧.ಹಾವುನ್ನ ನಂಬಿ ಆದ್ರೆ ಹುಡ್ಗೀರನ್ನಲ್ಲ, ಪ್ರೀತಿ ನಿಧಾನವಿಷ ಅಂತ
Believe Snakes Not, A Girl's, But, Love is Poison.
೧೨. ಪಾಪ ಪುಣ್ಯ ಪುಸ್ತಕದ ಮೇಲೆ, ದುಡ್ಡಿದ್ರೆ ದುನಿಯಾದ ಮೇಲೆ
೧೪. ಶ್ರೀ ಕಂಠ ನಿನ್ನ ಮರೆತವರ ಕೈಯಲ್ಲಿ ಮೂರು ಕಣ್ಣಿನ ಕಂಠ
೧೫. KHALIDS MESSAGE:
MUSLIMS SHUD PRAY FIVE TIMES, HINDUS SHUD PUJA EVERY DAY.
೧೬. ಕಾವೇರಿ ನೀರು ಕುಡಿಯುವ ಮೊದಲು ಕನ್ನಡ ಕಲಿ, ಕರ್ನಾಟಕದ ಅನ್ನ ತಿನ್ನುವ ಮೊದಲು ಕನ್ನಡಿಗರ ಸಂಸ್ಕೃತಿ ಕಲಿ.
೧೭. ನೀನು ಎಷ್ಟೇ ದೂರ ವಿದ್ದರು, ನಿನ್ನ ಸವಿ ನೆನಪು ನನ್ನ ಹತ್ತಿರ
೧೮. ಕಾಲ ಭೈರವನ ತೇರು, ಕೈ ಮುಗಿದು ಏರು
೧೯. ಗಾಡಿ ಹಿಂದೆ ಹೋದರೆ ಧೂಳು, ಹುಡುಗಿ ಹಿಂದೆ ಹೋದರೆ ಗೋಳು
೨೦. ಪwar ಆfದ ಕಿing (Power Of the King)
೨೧. ಕಾವೇರಿ ನಾ ಕುಡಿವ ನೀರು, ಕರುನಾಡು ನನ್ನೂರು
೨೨. ಐ ಲವ್ ಇಂಡಿಯಾ, ಐ ಲೈಕ್ ಮಂಡ್ಯ
೨೩. ಮಂಡ್ಯದ ಹುಲಿ, ಮುಟ್ಟಿದರೆ ಬಲಿ
೨೪. ನನ್ನ ಹೃದಯ ಆಕಾಶದಂಗೆ, ಅದನ್ನು ಹತ್ತುವ ವರಿಗಾಗಿ
ನನ್ನ ಮನಸ್ಸು ಸಮುದ್ರ ದಂತೆ, ಅದನ್ನು ಈಜುವ ವರಿಗಾಗಿ
೨೫. ನಾ ಕೊಟ್ಟ ಹೃದಯಕ್ಕೆ ಅವಳಿತ್ತ ಬೆಂಕಿ
೨೬. ಪ್ರೀತಿ ಪ್ರೇಮ ಎಲ್ಲಾ, ಪುಸ್ತಕದ ಬದನೆ ಕಾಯಿ
೨೯. ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇಬೇಕು ಒಳ್ಳೆಯ ತನ
೩೦. ಅರುಂ ಕುಶಂ ವಿಟ್ತೋಢಂ ನೆನೆವುದಂ ಮನಂ ಜಯನಗರಂ
೩೧. ದೀನ ನಾನು, ದಾನಿ ನೀನು
೩೨. ಓ ಮಲ್ಲಿಗೆ, ನೀ ಎಲ್ಲಿಗೆ
೩೩. ಅಮ್ಮನ ಮಾತು , ತಮ್ಮನ ದುಡ್ಡು
೩೪. ಏಕಾಂಗಿ -- Leave Me Alone
೩೫. ಪಾಪ ಪುಣ್ಯ ಹಳ್ಳಿಯಲ್ಲಿ, ದುಡ್ಡಿದ್ರೆ ಬೆಂಗಳೂರಲ್ಲಿ
೩೬. ಪ್ರೀತಿಸುವ ಮುನ್ನ ಯೋಚಿಸು ಚಿನ್ನ, ಯೋಚಿಸದಿದ್ದರೆ ಸಾಗದು ನಿನ್ನ ಜೀವನ
೩೭. ಸ್ನೇಹಾನೋ, ಪ್ರೀತಿನೋ, ಕೂತು ಮಾತಾಡೋಣ ಬನ್ನಿ
೩೮. ಹಣೆಯಲಿ ಬರೆಯದ ನಿನ್ನ ಹೆಸರ, ಹೃದಯದಿ ನಾನೇ ಕೊರೆದಿರುವೆ
೩೯. ಕೈ ಮುಗಿದು ಏರು, ಇದು ಕನ್ನಡಿಗನ ತೇರು
೪೦. ಬೀ ಹ್ಯಾಪಿ ನೋ ಬಿಪಿ, ಬಿಂದಾ ಸಾಗಿರಿ
೪೧. ನಲ್ಲೆಯ ನಲ್ಮೆಯ ನಗೆ, ನಲ್ಲನಿಗೆ ಫುಲ್ ಹೊಗೆ
೪೨. ಆಟೋ ದವರಿಗೂ ಹಾರ್ಟಿದೆ, ಪ್ರೀತ್ಸೆ
೪೩. ಹೊರಟರೆ ಜಾತ್ರೆ, ನಿಂತರೆ ಹಬ್ಬ
೪೪. ಆಟೋನ್ನ fast ಆಗಿ ಓಡಿಸಿದ್ದಕ್ಕೇ, accident ಆಗಿರ್ಬೇಕು
೪೫. ನಿನ್ನೆ ಸಿಕ್ಕಳು, ಇವತ್ತು ನಕ್ಕಳು, ನಾಳೆ ಎರಡು ಮಕ್ಕಳು
೪೬. ನಗು ಎಲ್ಲರಿಗಾಗಿ, ಹೃದಯ ಒಬ್ಬರಿಗಾಗಿ
೪೭. ಆಕಾಶ ಬಿದ್ದರೆ, ಭೂಮಿ ಬಿರಿದರೆ, ಎಲ್ಲಿ ನಿಂತು ಕೂಗಲಿ
೪೮. ಫ್ರೆಂಡ್ಶಿಪ್ ಕೈ ಹಿಡಿದರೆ ಬಿ ಹ್ಯಾಪಿ...., ಹುಡುಗಿ ಕೈ ಹಿಡಿದರೆ ಓನ್ಲಿ ಬಿಪಿ....
೪೯. ಹುಡುಗಿರೆಲ್ಲಾ ಹೀಗೆನಾ..., ನನಗೆ ಮಾತ್ರ ಹೀಗೆನಾ..
೫೦. ನಿಂತ್ಕಂಡು ಹೋಗೋದಾದ್ರೆ ಬಸ್ನಲ್ಲಿ ಹೋಗಿ, ಕುಂತ್ಕಂಡು ಬರೋದಾದ್ರೆ ಆಟೋ ಗೆ ಬನ್ನಿ

ನಿಮ್ಮಲ್ಲಿ ಇದ್ರೆ ಸ್ವಲ್ಪ ಇಲ್ಲಿ ಬರೀತೀರ.......

ನಿಮ್ಮ ಸಹೃದಯದ ಸ್ನೇಹಿತ...
ರವಿ ಎನ್ ರಾವ್

ಹಿಂದೂ ಹಬ್ಬಗಳು -- ೨೦೦೯, Hindu Festivals 2009

ಮತ್ತೊಂದು ಶ್ರಾವಣ ಬರ್ತಾ ಇದೆ. ಹಬ್ಬಗಳ ಸಾಲನ್ನು ಜೊತೆಯಲ್ಲಿ ತರ್ತಾ ಇದೆ. ಇದರ ಬಗ್ಗೆ ಒಂದು ಸಣ್ಣ ಲೇಖನ
January 2009
Vaikunta Ekadasi – 7th January, 2009
Makar Sankranthi – 14th January, 2009
Pongal – 14th January, 2009
Vasant Panchami – Saraswati Puja – 31st January, 2009
February 2009
Thai Pusam – February 8, 2009
Shivratri – 23rd February, 2009
March 2009
Holi – March 10th, 2009
Ugadi (New Year in Karnataka and Andhra Pradesh) – March 27th, 2009
Gudi Padva – March 27th, 2009
April 2009
Rama Navami – 3rd April, 2009
Hanuman Jayanti – 9 April, 2009
Chithirai 1 (Tamil New Year) – 14th April, 2009
Vishu (Kerala) – 14th April, 2009
New Year in Bengal and Assam – 15th April, 2009
Akshaya Tritiya – 27th April, 2009
May 2009
Narasimha Jayanti – 8th May, 2009
June 2009
Puri Rath Yatra – 24th June, 2009
July 2009
Vyas Purnima, Guru Purnima – 7th July, 2009
ಭೀಮನ ಅಮಾವಾಸ್ಯೆ
Nagara Panchami
August 2009
Raksha Bandan – 5th August, 2009
Sri Krishna Janmashtami – 14th August, 2009
Ganesh Chaturthi - 23rd August, 2009
September 2009
Thiru Onam - 2nd September, 2009
Navratri Begins – 19th September, 2009
Durga Ashtami – 26th September, 2009
Maha Navami – 27th September, 2009
Vijaya Dashami – Dussehra – 28th September, 2009
October 2009
Karva Chouth – 7th October, 2009
Deepavali – Diwali – 17th October, 2009
Annakut – Gujarati New Year – 18th October, 2009
Chhat Puja - 24th October, 2009 and 25th
Tulsi Vivah – 30th October, 2009
November 2009
Sabarimala Mandala Kalam begins – 16th November, 2009
Gita Jayanti – 28th November, 2009
December 2009
Vaikunta Ekadasi – 28th December, 2009

Wednesday, July 8, 2009

Our Bangalore and Our Kannada

See the Transformation of Bangalore in the last few days, when compared to other Metro Cities..
Aaaah! I am sure most of you in Bangalore would have heard this, but what is Kannada Barutha? Here it goes. Bangalore, the IT capital of India, the silicon city and now a Metro city opened its gates to almost all kinds of people. Very evidently the recent poll census proved that there are only 47 per cent of original inhabitants in Bangalore/Bengaluru. The life style of the city has seen a gradual change with Pizza Corners replacing MTRs, classy eat outs replacing Vidyarthi Bhavans and flashy pubs replacing all our Mahalakshmi wine shops.
Change is inevitable from the days of BEML, HAL and BHEL to Infosys, WIPRO; Bangalore has a new look now on the world map. Gone are the days where a typical Sunday for any Bangalorean was a nice romantic walk on the pavements of Lal Bagh, rave idli and coffee.. at the nearest yet old looking MTR and a wonderful Annavra film either at Santosh or central talkies. Today’s Bangalore is deluged in traffic, stress and pressure, Saturday nights without beer is desolate and a Sunday without a visit to either a nearest spa or health clinic is schlocky!! The Gandhibazars are now AC cooled super markets, Majestic is now replaced by ultra modern and diversified Brigade road, Sri Cauvery coffee joint is now Coffee Day..* and Bhagyalakshmi Coffee Adda.. is now Barista. With globalisation and more retail market the city will definitely see more forceful changes.
Have all these changed our language? Kannada the local language of Bangalore is supposed to be one of the most meaningful languages, it also has an unique script as compared to its other counterparts; but what percentage of people really use Kannada in Bangalore now? The figures are staggering, only 37 per cent of people speak Kannada in the state’s capital, for the rest it is only ‘Kannada Barutha?’ Any normal guy starts with this sentence ‘Kannada Barutha?’ while talking to other person, people confirm before they speak the language. You want to ask an address in Bangalore or reply to a question, then English is the most preferred language other than Hindi. It’s a famous fact that two Kannidagas in an IT company always talk in a neutral language!! even the vendors and shop keepers are channelled with this new wave, the moment when you step in any shop in Bangalore, you are always asked ‘Kannada Barutha?’ or the entire conversation takes place in non-Kannada languages. People have lost confidence about speaking in the local language and moreover speaking Kannada on the streets of M G Road or Koramangala is substandard.
Shopping malls in the city have been completely banned from using Kannada, not a forced one but definitely an adapted one. One has to confirm that the other person knows the language before he starts using any language. ‘Ondu glass beer’ is a insult when it comes to any decorous pub in Bangalore. ‘Swalpa menu card kodthira..??’ has been replaced by ‘Can I have the menu card please?’
Just to hit some facts, Marathi is still the largest and common speaking language in Mumbai even though Mumbai has the highest number of inhabitants. Telugu is a practised ritual in yet another IT hub Hyderabad. When it comes to Tamil Nadu, beware you can be alive either if you are a fan of Rajnikanth or you know Tamil. Malyalam runs in the blood of every Mallu be it Kuwait, Dubai or any hospital; but when it comes to Kannada it is always ‘Kannada Barutha?’ and next is ‘Namaskara.’
I am neither a Kannada activist nor do I run any Kannada supporting organisation, I am just a plebeian who loves the language. Globalisation is the trend and modernisation is the mantra but at the cost the language? Sounds no logic.. Is speaking Kannada down market? The answer has to be found within oneself.
Next time when you hear ‘Kannada Barutha?’ you just remember that Kannada runs in your blood..

Tuesday, July 7, 2009

Inflation --> ಹಣದುಬ್ಬರ -- ಹಣ ಚಲಾವಣೆಯ ಅತಿಹೆಚ್ಚಳ

Inflation, ಹಣದುಬ್ಬರ ಇದರ ಬಗ್ಗೆ ಒಂದು ಸಣ್ಣ ಲೇಖನ
Each generation has its own way of managing money. Also a unique way of carrying it.
As a young man in the 1950s, Captain B L Ghei could buy a bottle of Coca-Cola for 25 paise. Those were the days when people had so little money that most of them carried their notes and coins in their pockets. Ghei, 76, gets nostalgic talking about the fifties and sixties, when he worked as an instructor with a flying club in Kanpur. He began his career on a meagre salary of Rs 430 per month.
My take-home salary was Rs 390. I had a brown leather wallet in which I carried notes in denominations of 100, 10, 5, 2 and 1. The Rs 20 note came much later. My wallet had a pouch for small change, in which I carried 1, 2, 5, 25 and 50 paise coins. Unlike today, these had a value then,” says Ghei, remembering the good old days. He also carried a good luck charm in his wallet — “the umbilical cord of my daughter, wrapped in a plastic cover. I still carry it in my new wallet.”
Though Rs 390 may look like loose change these days, Capt Ghei lived life kingsize in the 1960s. By today’s standards, life was simple and cheap. Ghei paid Rs 47 as rent for a two-bedroom apartment and spent Rs 40 per month on petrol for his Vespa scooter. “I remember my wife buying cashewnuts for Rs 6-7 per kg. German Beck’s Beer then cost just Rs 1.75, while movie tickets cost between five annas to Rs 2.50 (for balcony) then,” says Ghei, adding that he was never a spendthrift.
Because cash flow was limited and people believed in simple living, they were meticulous about their finances. In fact, very few carried wallets those days. They preferred to keep their money either at home or in the bank. “I saved about Rs 10-15 monthly and managed to build my own house in 1972 for Rs 1.32 lakh after taking an LIC loan.”
Ghei believes money went a long way then. “The Usha ceiling fan I bought in 1961 for around Rs 100 was so reliable and sturdy that I discarded it only this month, 48 years later. My cleaning man is now using it. Today’s fans, like everything else, are lightweight and flimsy. I was also the first owner of a Vespa scooter in Kanpur which I had bought for Rs 2,499. It ran smoothly and was an object of desire wherever I went.”
Though he had very little cash in his wallet to spend on consumer items in his younger days, Ghei always understood the value of money. “When I retired as deputy operations manager of an airline in 1991, I was drawing a monthly salary of Rs 20,000. I saved judiciously, lived happily, went on holidays and made sure my children were well-settled.” That’s how they managed their money in those days.
The same thing if you apply and compare to today(21st Century). It is far far more, right ?

Monday, July 6, 2009

ಎದ್ದೇಳೋ ಮಂಜುನಾಥ ---> Title Song Lyrics


ಆರತಿ ಎತ್ತಿರೇ ಕಳ್ ಮಂಜಗೆ ನಮ್ ಸುಳ್ಳ್ ಮಂಜಂಗೆ
ಆರತಿ ಎತ್ತಿರೇ ಕಳ್ ಮಂಜಗೆ ನಮ್ ಸುಳ್ಳ್ ಮಂಜಂಗೆ


ಸುಸ್ತ್ ಆಗದ ಮನ್ಮಥ, ಸದಾ ಸುಖಿ ಬಾಯಿಬಿಟ್ಟರೆ ಸಂಸ್ಕೃತ,

ಬಾಯಿಬಿಟ್ಟರೆ ಸಂಸ್ಕೃತ, ತಲೆಕೆಟ್ಟರೆ ವಿಕೃತ

ನವರಸಗಳನ್ನು ಗಟಗಟ ಕುಡಿದ ಮಗನೇ

ಆರತಿ ಎತ್ತಿರೇ ಕಳ್ ಮಂಜಗೆ ನಮ್ ಸುಳ್ಳ್ ಮಂಜಂಗೆ.....

ಅಡ್ಡ ಅರಳಿಕಟ್ಟೆ, ದುಂದು ಸಿಕ್ಕಾಬಟ್ಟೆ, ಸೋಮಾರಿ ಗೆಳೆಯರ ಬಳಗದ ಲೀಡರ್

ಮಾತಲ್ಲಿ ಬಲುತೀಟೆ, ಕಾಸ್ ಕೊಟ್ರೆ ಮೇಲ್ ಕೋಟೆ, ಯಾಮಾರ್ದ್ರೆ ಬಿಳಿ ಯರಡು ಒಂದ್ ಕೆಂಪು

ರಾತ್ರಿಯೆಲ್ಲಾ ಮಲಗೋಲ್ಲ, ಮಧ್ಯಾಹ್ನವಾದ್ರೂ ಏಳಲ್ಲಾ

ಊರಲೆಲ್ಲ ಕೈ ಸಾಲ, ಮುಂಡೇದು ಶೋಕಿಲಾಲ

ಅತ್ತೆಯ ಒಡವೆ ದಾನ ಮಾಡುವ ಅಳಿಯಾ...

ಆರತಿ ಎತ್ತಿರೇ ಕಳ್ ಮಂಜಗೆ ನಮ್ ಸುಳ್ಳ್ ಮಂಜಂಗೆ

ಅಪ್ಪ ಲೆಕ್ಕಕಿಲ್ಲ, ಅಮ್ಮನ ಮಾತ್ ಕೇಳಲಿಲ್ಲ, ಗಿಡವಾಗಿ ಬಗ್ಗದ ಮುದ್ದು ಲೋಫರ್

ಶಾಲೇಲಿ ಕಲೀಲಿಲ್ಲ, ಕಾಲೇಜ್ನಲ್ಲಿ ಬರೀಲಿಲ್ಲ, ನೂರೆಂಟು ವಿದ್ಯೇಲೂ ಮಾಸ್ಟರ್

ತಲೆಹರಟೆ ಜಾತಕ, ಹೆಗ್ಹೆಜೆಗೂ ನಾಟಕ. ಅಣಕ ಮಾಡುವ ಗಟ್ಟ, ಅತ್ಯುತ್ತಮ ಈ ನಟ

ರಾಜ್ಯ ಪ್ರಶಸ್ತಿ ವಂಚಿತನಾದ ಮಗನೇ...

ಆರತಿ ಎತ್ತಿರೇ ಕಳ್ ಮಂಜಗೆ ನಮ್ ಸುಳ್ಳ್ ಮನ್ಜಂಗೆ

ಎದ್ದೇಳು ಮಂಜುನಾಥ, ಎದ್ದೇಳು ಮಂಜುನಾಥ, ಎದ್ದೇಳಲೋ

ಎದ್ದೇಳು ಮಂಜುನಾಥ, ಎದ್ದೇಳು ಮಂಜುನಾಥ, ಎದ್ದೇಳಲೋ

ಎಲ್ಲಯ್ಯ ಎವೆರೆಸ್ಟು, ಎಸ್ಟ್ ಮಾಡ್ತೀಯ ರೆಸ್ಟು

ಸತ್ತ ಮೇಲೆ ಕೋಟಿ ವರುಷ ಬದುಕಿದ್ದರೆ ಎಷ್ಟು

ಎದ್ದೇಳು ಮಂಜುನಾಥ, ಎದ್ದೇಳು ಮಂಜುನಾಥ, ಎದ್ದೇಳು ಮಂಜುನಾಥ, ಎದ್ದೇಳಲೋ

ಎದ್ದೇಳಲೋ ಎದ್ದೇಳಲೋ

ಎದ್ದೇಳು ಮಂಜುನಾಥ, ಎದ್ದೇಳು ಮಂಜುನಾಥ, ಎದ್ದೇಳಲೋ


Music: V.Manohar

Lyrics: Guruprasad

Release Date: 17-July-2009.

Friday, July 3, 2009

Maths Is it Possible ???

Fun With Maths
1 1 1 = 6
2 2 2 = 6
3 3 3 = 6
4 4 4 = 6
5 5 5 = 6
6 6 6 = 6
7 7 7 = 6
8 8 8 = 6
9 9 9 = 6

Letz start from down:

CUBE ROOT (9 ) * CUBE ROOT (9 ) + CUBE ROOT (9 ) = 6

CUBE ROOT (8 ) + CUBE ROOT (8 ) + CUBE ROOT (8 ) = 6

7 - (7 / 7) = 6

6 + 6 - 6 = 6

5 + (5 / 5) = 6

SQRT( 4 ) + SQRT( 4 ) + SQRT( 4 ) = 6

3 * 3 - 3 = 6

2 + 2 + 2 = 6

Now Final One,

1 + 1 + 1 = 3 ---> NO

.

.

.

..

..

...

FACT ( 1 + 1 + 1 ) = 3 * 2 * 1 = 6 ---> YES

2

( 1 + 1 + 1 ) = (3) = 6 ---> YES

Thursday, July 2, 2009

ಜುಜು - ZooZoo -- Did u know that ?






ಪುಟ್ಟ ಕೈಕಾಲುಗಳು, ದೊಡ್ಡ ತಲೆ, ಅತ್ತಿಂದಿತ್ತ ಓಡಾಡುತ್ತ ಮಕ್ಕಳಂತೆ ಕಾಣುವ ವೇಷಧಾರಿಗಳು. ಐಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ವೋಡಾಫೋನ್ ರೂಪಿಸಿರುವ ಜೋಜೋ(ಜು..ಜು..) ಪಾತ್ರಧಾರಿಗಳು ಈಗ ಎಲ್ಲರ ಅಚ್ಚುಮೆಚ್ಚು. ಓ ಮೊದಲು ನಾಯಿಗಳನ್ನು ಬಳಸಿ ತನ್ನ ಜಾಹೀರಾತಿನ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದ ವೋಡಾಫೊನ್ ಈಗ ಪುಟಾಣಿ ಪಾತ್ರಗಳ ಮೂಲಕ ಮಕ್ಕಳು, ಯುವಕರು ಹಾಗೂ ಹಿರಿಯರ ಮನ ಗೆದ್ದಿದೆ.




ಜೋಜೋ ಈ ಹೆಸರಿನ ಈ ಜಾಹೀರಾತು ಸರಣಿಯಲ್ಲಿ ಪುಟ್ಟ ಪಾತ್ರಧಾರಿಯ ಕಾಲು ಮುರಿದಿದ್ದು, ಕಿಟಲೆ ಮಾಡಿದ್ದು, ಮೇಲ್ ಬಾಕ್ಸ್ ಬೆನ್ನು ಹತ್ತಿರುವ, ಕಾರ್ ರೀಚಾರ್ಜ್ ಮಾಡುವ ದೃಶ್ಯಗಳು ಮತ್ತೊಮ್ಮೆ ನೋಡಬೇಕೆನಿಸುತ್ತವೆ. ಈ ಜಾಹೀರಾತುಗಳಿಗೆ ಜನ್ಮ ನೀಡಿದ್ದು ನಿರ್ವಾಣ ಸಂಸ್ಥೆ. ಕಳೆದ ವರ್ಷ ವೋಡಾಫೋನ್ನ ಹ್ಯಾಪಿ ಟು ಹೆಲ್ಪ್ ಜಾಹೀರಾತು ಸರಣಿ ರೂಪಿಸಿದ್ದ ಸಂಸ್ಥೆ ಈ ಬಾರಿ ವಿಭಿನ್ನ ಜಾಹೀರಾತು ಮಾಡಬೇಕೆಂದು ಹೊರಟಾಗ ಚಿಂತನೆ ನಡೆದಿದ್ದು ಕಾರ್ಟೂನ್ ಪಾತ್ರಧಾರಿಗಳ ಬಗ್ಗೆ. ಆದರೆ ಈಗಾಗಲೇ ಅಂತಹ ಹಲವಾರು ಜಾಹೀರಾತುಗಳು ಪ್ರದರ್ಶನಗೊಂಡಿರುವುದರಿಂದ ಮನುಷ್ಯರನ್ನೇ ಬಳಸಿ ಹೊಸ ಪಾತ್ರ ಸೃಷ್ಟಿಸುವ ಉತ್ಸಾಹ ತಂಡದಲ್ಲಿತ್ತು.



" ಅದಕ್ಕಾಗಿ ಮೃದು ಉಣ್ಣೆಯ ಮನುಷ್ಯನ ಮೇಲ್ಕವಚ ನಿರ್ಮಿಸಿ, ತಲೆಯ ಭಾಗಕ್ಕೆ
ಪರ್ಫೆಕ್ಸ್ ಎನ್ನುವ ವಸ್ತು ಬಳಸಲಾಯಿತು. ಮೃದು ದೇಹ, ದೊಡ್ಡ ತಲೆ, ಮಕ್ಕಳಂತೆ ನಡೆಯುವ
ಪಾತ್ರಧಾರಿಗಳಿಂದಾಗಿ ಜೋಜೋ ಈಗ ಎಲ್ಲೆಡೆ ಜನಪ್ರಿಯ."




ಸಂಸ್ಥೆಯ ನಿರ್ದೇಶಕ ಪ್ರಕಾಶ್ ವರ್ಮಾ ಈ ಜಾಹೀರಾತು ರೂಪಿಸುವುದಕ್ಕಾಗಿ ಭರ್ತಿ ೩ ತಿಂಗಳು ಹೋಮ್ ವರ್ಕ್ ಮಾಡಿದ್ದಾರೆ. ಪಾತ್ರಧಾರಿಗಳಾಗಿ ಮಕ್ಕಳು, ಯುವತಿಯರು ಹಾಗೂ ಪುರುಷರು ಅಭಿನಯಿಸಿದ್ದಾರೆ. ಆದರೆ ಇಲ್ಲೊಂದು ವಿಶೇಷವಿದೆ, ಪಾತ್ರಧಾರಿಗಳು ಮಕ್ಕಳಂತೆ ಕಾಣಬೇಕು ಹಾಗೂ ಜಾಹೀರಾತು ಆಕರ್ಷಕವಾಗಿಸಬೇಕೆಂಬ ದೃಷ್ಟಿಯಿಂದ ತಕ್ಕಮಟ್ಟಿಗೆ ಆನಿಮೇಶನ್ ತಂತ್ರಜ್ಞಾನ ಬಳಸಲಾಗಿದೆ. ಹೈ ಸ್ಪೀಡ್ ಕ್ಯಾಮೆರಾದಲ್ಲಿ ಚಿತ್ರೀಕರಣ ನಡೆಸಿ ಪಾತ್ರಧಾರಿಗಳ ನಡಿಗೆಯನ್ನು ವಿಭಿನ್ನವಾಗಿ ತೋರಿಸಿದ್ದು ಜಾಹೀರಾತಿನ ಹೆಗ್ಗಳಿಕೆ.ಪ್ರೇಕ್ಷಕರ ಮನಸ್ಸು ಬೇರೆಡೆ ಆಕರ್ಷಿತವಾಗದಂತೆ ಹಿನ್ನೆಲೆಯಾಗಿ ಬೂದಿ ಬಣ್ಣ ಬಳಸಿದ್ದರೆ, ಪಾತ್ರಧಾರಿಗಳದ್ದು ಶ್ವೇತ ವಸ್ತ್ರ. ದಕ್ಷಿಣ ಆಫ್ರಿಕಾದ ಕೇಪ್ ಟೌನ್ನ ಪ್ಲಾಟಿಪಸ್ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಸಿದ್ದು , ಜೋಜೋ ಜನಪ್ರಿಯತೆ ಪ್ರತಿ ದಿನ ಹೆಚ್ಚಾಗುತ್ತಿದೆ. ಐಪಿಎಲ್ಗಿಂತಲೂ ಹೆಚ್ಚು ಹಾಟ್ ಫೇವರಿಟ್ ಆಗಿರುವುದು ಜೋಜೋ ಜನಪ್ರಿಯತೆಗೆ ಸಾಕ್ಷಿ.



Zoozoo : How they made ? http://digitalinspiration.com/images-of-zoozoo-characters
For More Info: http://en.wikipedia.org/wiki/Zoozoo

Wednesday, July 1, 2009

మగధీర -- చిరు తనయుడు రామ్ చరణ్ తేజ


మగధీర,
చిరంజీవి తనయుడు రామ్ చరణ్ తేజ, కాజల్ అగర్వాల్ జంటగా నటించిన మగధీర సినిమా ఆడియో క్యాసెట్ జూన్ 28 విడుదలైంది. ప్రజారాజ్యం పార్టీ అధినేత, మెగాస్టార్ చిరంజీవి తిరిగి సినిమాల్లో నటించే అవకాశం ఉంది. కార్యక్రమంలో అందుకు తగిన సూచనలు కనిపించాయి. చిరంజీవి ఒక్క సినిమానైనా చేయాలని వేదికపై వక్తలు విజ్ఞప్తులు వచ్చాయి. దానికి చిరంజీవి నేరుగా సమాధానం చెప్పకపోయినప్పటికీ ఆయన సినిమాలో నటించే అవకాశాలు మాత్రం ఉన్నట్లు తెలుస్తోంది. జులై 22 న విడుదలైయ్యే సూచనలు ఉన్నాయ్. మూవీ కూడా చానా పెద్దదే. 4 గంటల మూవీ ఇది.


Cast:
Hero: Ram Charan Teja,
Heroine: Kajal Agarwal,
Music: MM Kheeeravani
Producer: Allu Aravind
Director: SS Rajamouli

ಸರ್ದಾರ್ಜಿ ಜೋಕ್ಸ್ --ಲೇಟೆಸ್ಟ್ -- ಟೈಂ ಪಾಸ್

Sardar: My mobile bill how much?
Call centre girl: sir, just dial 123 to know current bill status
Sardar: Stupid, not CURRENT BILL my MOBILE BILL.
_____________________________________________________________

Sardar: I think that girl is deaf..
Friend: How do u know?
Sardar: I told I Love her, but she said her chappals are new
_____________________________________________________________
Friend: I got a brand new Ford IKON for my wife!

Sardar: Wow!!! That's an unbelievable exchange offer!!!
_____________________________________________________________
Teacher: Which is the oldest animal in world?

Sardar: ZEBRA
Teacher: How?
Sardar: Bcoz it is Black & White
Sardar: Miss, Do u called 2 my mobile?
Teacher: Me? No, why?
Sardar: Yesterday I saw in my mobile- “1 Miss Call".
_____________________________________________________________
Judge: Don't U have shame? It is d 3rd time U R coming to court.
Sardar to judge: U R coming daily, don't U have shame?
_____________________________________________________________
Sir: What is difference between Orange and Apple?
Sardar: Color of Orange is orange, but color of Apple is not APPLE.
_____________________________________________________________
Sardar attending an interview in Software Company.
Manager: Do U know MS Office?
Sardar: If U give me the address I will go there sir.
_____________________________________________________________
Sardar in Aeroplane going 2 Bombay ..
While its landing he shouted: " > Bombay ... Bombay "
Air hostess said: "B (Be) silent."
Sardar: "Ok. Ombay. Ombay"
_____________________________________________________________
Sardar got a sms from his girl friend: "I MISS YOU"
Sardarji replied: "I Mr YOU" !!.
_____________________________________________________________
Sardar: Doctor! My Son swallowed a key
Doctor: When?
Sardar: 3 Months Ago
Dr:Wat were u doing till now?
Sardar: We were using duplicate key
_____________________________________________________________
Sardar1: Oye, what will happen if electricity is not discovered?
Sardar2: Nothing, we must watch TV in candle light.
_____________________________________________________________
Teacher: "What is common between JESUS, KRISHNA , RAM, GANDHI and BUDHA?"
Sardar: "All are born on government holidays...!!!
Page copy protected against web site content infringement by Copyscape
hit counter
ಇಂದಿಗೆ ಭೇಟಿ ಮಾಡಿದವರು